ಇಂದು ಕೇಂದ್ರ ಸರ್ಕಾರಿ ವಕೀಲರಿಂದ ರಾಷ್ಟ್ರೀಯ ಭದ್ರತೆ ಕುರಿತ ಸಮ್ಮೇಳನ


Team Udayavani, Dec 16, 2017, 10:15 AM IST

16-17.jpg

ಬೆಂಗಳೂರು: ರಾಷ್ಟ್ರೀಯ ಭದ್ರತೆಗೆ ವಿವಿಧೆಡೆಗಳಿಂದ ಉಂಟಾಗುತ್ತಿರುವ ಬೆದರಿಕೆಗಳನ್ನು ಕಾನೂನಾತ್ಮಕವಾಗಿ ಬಗೆಹರಿಸುವ ಕುರಿತಂತೆ ದಕ್ಷಿಣ ಭಾರತದ ಕೇಂದ್ರ ಸರ್ಕಾರಿ ವಕೀಲರಿಂದ ಶನಿವಾರ ನಗರದಲ್ಲಿ “ರಾಷ್ಟ್ರೀಯ ಭದ್ರತೆ- ನಮ್ಮ ಆದ್ಯತೆಗಳು’ ಕುರಿತ ವಿಚಾರ ಸಂಕಿರಣ ನಡೆಯಲಿದೆ.

ಅರಮನೆ ರಸ್ತೆಯಲ್ಲಿರುವ ಹೋಟೆಲ್‌ ಶಾಂಗ್ರಿಲಾದಲ್ಲಿ ನಡೆಯುವ ವಿಚಾರ ಸಂಕಿರಣವನ್ನು ಬೆಳಗ್ಗೆ 10.30ಕ್ಕೆ ರಾಜ್ಯಪಾಲ ವಿ.ಆರ್‌.ವಾಲಾ ಉದ್ಘಾಟಿಸಲಿದ್ದು, ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಜಂಟಿ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಸಮಾರೋಪ
ಭಾಷಣ ಮಾಡಲಿದ್ದು, ಅಡಿಷನಲ್‌ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಪಾಲ್ಗೊಳ್ಳುವರು. ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಐದು ರಾಜ್ಯಗಳನ್ನು ಪ್ರತಿನಿಧಿಸುವ ಅಡಿಷನಲ್‌ ಸಾಲಿಸಿಟರ್‌ ಜನರಲ್‌, ಅಸಿಸ್ಟೆಂಟ್‌ ಸಾಲಿಸಿಟರ್‌ ಜನರಲ್‌ಗ‌ಳು ಸೇರಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ 250ಕ್ಕೂ ಹೆಚ್ಚು ವಕೀಲರು ಭಾಗವಹಿಸಲಿದ್ದಾರೆ.

ಐಸಿಸ್‌ ಸೇರಿ ವಿದೇಶಿ ಭಯೋತ್ಪಾದಕ ಸಂಘಟನೆಗಳು, ಸೈಬರ್‌ ಮತ್ತಿತರೆ ಬೌದ್ಧಿಕತೆಗೆ ಸಂಬಂಧಿಸಿದ ಭಯೋತ್ಪಾದನೆ, ಆರ್ಥಿಕ
ಭಯೋತ್ಪಾದನೆ ಮುಂತಾದ ವಿಚಾರಗಳಲ್ಲಿ ನ್ಯಾಯಾಂಗ ವ್ಯವಸ್ಥೆ ಯಾವ ರೀತಿ ದೇಶದ ಭದ್ರತೆಗೆ ಸಹಕರಿಸಬೇಕು? ಕಾನೂನಿನ ಮೂಲಕ ದೇಶದ ಸುರಕ್ಷತೆಗೆ ಹೇಗೆಲ್ಲಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬಿತ್ಯಾದಿ ಅಂಶಗಳ ಬಗ್ಗೆ ವಕೀಲರು ಚರ್ಚೆ 
ನಡೆಸಲಿದ್ದಾರೆ.

ಪ್ರತಿಯೊಬ್ಬ ಪ್ರಜೆಗೂ ದೇಶದ ಭದ್ರತೆ, ಸುರಕ್ಷತೆ ಆದ್ಯತೆಯಾಗಿರುತ್ತದೆಯೋ ಅದೇ ರೀತಿ ನ್ಯಾಯಾಂಗ ಕ್ಷೇತ್ರದಲ್ಲಿ ಕೆಲಸ ಮಾಡುವ ವಕೀಲರಿಗೂ ಆದ್ಯತೆಯಾಗುತ್ತದೆ. ರಾಷ್ಟ್ರೀಯ ಭದ್ರತೆ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವುದರಿಂದ ಆ ಕುರಿತಂತೆ
ನ್ಯಾಯಾಲಯಗಳಲ್ಲಿ ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ವಕೀಲರು ಹೆಚ್ಚು ಜವಾಬ್ದಾರಿ ತೆಗೆದುಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ವಿಚಾರ ಸಂಕಿರಣದಲ್ಲಿ ಚರ್ಚೆಗಳು ನಡೆಯಲಿವೆ ಎಂದು ಆಯೋಜಕರು ತಿಳಿಸಿದ್ದಾರೆ.

ರಾಷ್ಟ್ರೀಯ ಭದ್ರತೆ ಪ್ರತಿಯೊಬ್ಬನ ಆದ್ಯ ಕರ್ತವ್ಯ. ಈ ನಿಟ್ಟನಲ್ಲಿ ಕಾನೂನಿನ ಮೂಲಕ ದೇಶದ ಭದ್ರತೆಯನ್ನು ಯಾವ ರೀತಿ
ಕಾಪಾಡಿಕೊಳ್ಳಬಹುದು ಎಂಬ ಬಗ್ಗೆ ವಿಚಾರ ಸಂಕಿರಣದಲ್ಲಿ ಚರ್ಚೆ ನಡೆಯಲಿದೆ. ಜತೆಗೆ ಭಯೋತ್ಪಾದಕ ಚಟುವಟಿಕೆಗಳನ್ನು ತಡೆಗಟ್ಟುವ ಕುರಿತು ಕಾನೂನಾತ್ಮಕ ಚಿಂತನೆ ಮಾಡಲಾಗುವುದು.

 ●ಕೆ.ಎಂ.ನಟರಾಜ್‌, ಅಡಿಷನಲ್‌ ಸಾಲಿಸಿಟರ್‌ ಜನರಲ್‌

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.