ಕಾರ್ಗೋ ಹಬ್‌ನಿಂದ ಭೂಮಿ ಕಳೆದುಕೊಳ್ಳುವ ಭೀತಿ


Team Udayavani, Dec 16, 2017, 3:34 PM IST

16-30.jpg

ಬೆಳ್ಮಣ್‌: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತಾರಗೊಳಿಸುವುದರೊಂದಿಗೆ ಕಾರ್ಗೋ ಹಬ್‌ (ಸರಕು ನಿರ್ವಹಣೆ ಕೇಂದ್ರ) ನಿರ್ಮಾಣಕ್ಕೆ ವಿಮಾನ ನಿಲ್ದಾಣ ಪ್ರಾಧಿಕಾರವು 2,500 ಎಕರೆಯಲ್ಲಿ ರೂಪುರೇಷೆಗಳನ್ನು ತಯಾರಿಸಿದೆ. ಇದರಿಂದ ಇನ್ನಾ, ಮುಂಡ್ಕೂರು, ಮುಲ್ಲಡ್ಕ ಗ್ರಾಮಗಳ ಗ್ರಾಮಸ್ಥರಲ್ಲಿ ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ.  

ಬೃಹತ್‌ ಯೋಜನೆಗೆ ಕಾರ್ಕಳ ತಾಲೂಕಿನ ಇನ್ನಾ ಗ್ರಾಮ  ಕೇಂದ್ರೀಕರಿಸಿ ಬೆಳ್ಮಣ್‌, ಮುಲ್ಲಡ್ಕ, ಮುಂಡ್ಕೂರು ಸಹಿತ ಪಲಿಮಾರು, ಎಲ್ಲೂರು, ಸಾಂತೂರು, ನಂದಿಕೂರು, ಅತಿಕಾರಿಬೆಟ್ಟು ಹಾಗೂ ಉಡುಪಿ ತಾಲೂಕಿನ ಹಿರಿಯಡ್ಕ ಮತ್ತು ಕುಂದಾಪುರ ತಾಲೂಕಿನ ಬೈಂದೂರು, ಶೀರೂರು, ಸಿದ್ದಾಪುರ ಗ್ರಾಮಗಳಲ್ಲಿ ವಿಮಾನ ನಿಲುಗಡೆಗೆ ಜಾಗ ಗುರುತಿಸಲಾಗಿದೆ ಎಂಬ ಸುದ್ದಿಗಳಿವೆ. ಸುದ್ದಿಗೆ ಪೂರಕವಾಗಿ ಈ ಗ್ರಾಮಗಳ ಜಮೀನು ನೋಂದಣಿಗಳನ್ನು ನೋಂದಣಿ ಕಚೇರಿಗಳಲ್ಲಿ ನಿಲ್ಲಿಸಲಾಗಿದೆ. ಸುದ್ದಿಗೆ ಪೂರಕವಾಗಿ ಕಳೆದ ಜೂನ್‌ನಲ್ಲಿ ಬೆಂಗಳೂರಲ್ಲಿ ನಡೆದಿದ್ದ ವಿಮಾನ ನಿಲ್ದಾಣ ಪ್ರಾಧಿಕಾರದ ಸಭೆಯಲ್ಲಿ ಮೂರು ಕಡೆ ಪರ್ಯಾಯ ಜಾಗ ಗುರುತಿಸುವ ತೀರ್ಮಾನ ಕೈಗೊಳ್ಳಲಾಗಿತ್ತು. 

  ನೋಟಿಸ್‌ ಜಾರಿ 
ವಿಮಾನ ನಿಲ್ದಾಣಕ್ಕೆ ಉಡುಪಿ ಮತ್ತು ಮಂಗಳೂರು ಜಿಲ್ಲೆಯ ಮಧ್ಯಭಾಗದಲ್ಲಿ  ಮೂರು ಕಡೆ ಪರ್ಯಾಯ ಜಮೀನುಗಳನ್ನು ಗುರುತಿಸುವಂತೆ ಈಗಾಗಲೇ ತಹಶೀಲ್ದಾರರಿಗೆ ನೋಟಿಸ್‌ ಜಾರಿ ಮಾಡಲಾಗಿದೆ.  

ಜನರಲ್ಲಿ  ಆತಂಕ
ಸುದ್ದಿಯಿಂದ ಕಳವಳಗೊಂಡಿರುವ ಗ್ರಾಮಸ್ಥರು ಆತಂಕಕ್ಕೊಳಗಾಗಿದ್ದಾರೆ. ತಾವು ನೆಲೆ ಕಂಡುಕೊಂಡಿರುವ ಪಿತ್ರಾರ್ಜಿತ, ಸ್ವಯಾರ್ಜಿತ ಆಸ್ತಿ ಕೈಬಿಟ್ಟುಹೋಗುವುದರ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಸ್ಪಷ್ಟ ಮಾಹಿತಿ ನೀಡುವಂತೆ ಆಗ್ರಹಿಸಿದ್ದಾರೆ. ಕೃಷಿಕರಿಗಂತೂ ಇದು ನುಂಗಲಾರದ ತುತ್ತಾಗಿ ಪರಿಣಮಿಸಿದೆ. 

ಹೆಚ್ಚಿದ ದಟ್ಟಣೆ
ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಂಖ್ಯೆ ಕಳೆದ 5 ವರ್ಷಗಳಲ್ಲಿ ದ್ವಿಗುಣಗೊಂಡಿದೆ. ಈಗ ಪ್ರತಿನಿತ್ಯ 56 ವಿಮಾನಗಳು ಮಂಗಳೂರಿಂದ ಹಾರಾಟ ನಡೆಸುತ್ತಿದ್ದು, ಮುಂದಿನ ದಿನಗಳಲ್ಲಿ  80 ರಿಂದ 102 ವಿಮಾನಗಳು ಹಾರಾಟ ನಡೆಸಲಿವೆ ಎನ್ನಲಾಗಿದೆ.

30 ಎಕರೆ ರನ್‌ವೇಗೆ 
ಮಂಗಳೂರು ವಿಮಾನ ನಿಲ್ದಾಣ ಅಭಿವೃದ್ಧಿ, ವಾಹನದಟ್ಟಣೆ ನಿಭಾಯಿಸುವ ನಿಟ್ಟಿನಲ್ಲಿ 30 ಎಕರೆ ಸ್ಥಳ ರನ್‌ವೇಗೆ ಮತ್ತು 3 ಎಕರೆ ಸ್ಥಳ ರನ್‌ವೇ ಕೊನೆಯಲ್ಲಿ ಸುರಕ್ಷೆಗೆ ಕಾದಿರಿಸಲು ತೀರ್ಮಾನಿಸಲಾಗಿದೆ. ಬಾಕಿ ಉಳಿದ ಕಾಮಗಾರಿ, ಸೇತುವೆ ನಿರ್ಮಾಣಕ್ಕೂ ಕೆಲ ಪ್ರಸ್ತಾವನೆ ಮಾಡಲಾಗಿದೆ.

ವಿಮಾನ ನಿಲ್ದಾಣಕ್ಕಾಗಿ ಇನ್ನಾ ಗ್ರಾಮ ಗುರುತಿಸಿದ್ದಾರೆ ಎನ್ನುವ ಮಾಹಿತಿ ಇದೆ. ಆದರೆ ಯಾವುದೇ ಸರ್ವೆ ಕಾರ್ಯ ನಡೆದ ಬಗ್ಗೆ ಮಾಹಿತಿ ಇಲ್ಲ. 
ರೇಷ್ಮಾ ಉದಯ್‌ ಶೆಟ್ಟಿ, ಜಿ.ಪಂ. ಸದಸ್ಯರು, ಬೆಳ್ಮಣ್‌

ಶರತ್‌ ಶೆಟ್ಟಿ

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.