ಗೃಹಮಂತ್ರಿ ರಾಮಲಿಂಗಾರೆಡ್ಡಿ ನಾಲಾಯಕ್: ಯಡಿಯೂರಪ್ಪ
Team Udayavani, Dec 17, 2017, 6:20 AM IST
ಗಂಗಾವತಿ: ಬಿಜೆಪಿ, ಸಂಘ ಪರಿವಾರ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಹೇಳಿ ಗೊಂದಲ ಸೃಷ್ಟಿಸಿರುವ “ರಾಜ್ಯ ಗೃಹಮಂತ್ರಿ ರಾಮಲಿಂಗಾರೆಡ್ಡಿ ನಾಲಾಯಕ್’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅಸಹನೆ ಹೊರಹಾಕಿದರು.
ಬಿಜೆಪಿ ಪರಿವರ್ತನಾ ಯಾತ್ರೆ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಸಿಬಿಯಲ್ಲಿ 56 ಪ್ರಕರಣ ದಾಖಲಾಗಿದ್ದರೂ ಯಾಕೆ ಕಾನೂನು ಕ್ರಮ ಕೈಗೊಂಡಿಲ್ಲ? ರಾಜ್ಯ ಕಂಡ ಕಡು ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ. ತುಂಗಭದ್ರಾ ಜಲಾಶಯದಲ್ಲಿ ಸಂಗ್ರಹವಾದ ನೀರನ್ನು ಆಂಧ್ರಪ್ರದೇಶಕ್ಕೆ ಮಾರಾಟ ಮಾಡುವ ಮೂಲಕ ರಾಯಚೂರು, ಕೊಪ್ಪಳ, ಬಳ್ಳಾರಿ ರೈತರಿಗೆ ಮೋಸ ಮಾಡುತ್ತಿದ್ದಾರೆ. ಸೂಕ್ತ ತನಿಖೆ ನಡೆದರೆ ಸತ್ಯ ಹೊರಬರಲಿದೆ. ರಾಜ್ಯದಲ್ಲಿ 20 ಹಿಂದುಗಳ ಹತ್ಯೆ ನಡೆದಿದ್ದರೂ ಸರ್ಕಾರ ಕೈಕಟ್ಟಿ ಕುಳಿತು ಆರೋಪಿಗಳಿಗೆ ನೆರವಾಗುತ್ತಿದೆ. ಮುಸ್ಲಿಂ ವೋಟಿಗಾಗಿ ಓಲೈಕೆ ರಾಜಕಾರಣ ಮಾಡುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್