ಗ್ರಾಪಂ ನಿವೇಶನ ಹಂಚಿಕೆಯಲ್ಲಿ ಗೋಲ್‌ಮಾಲ್‌!


Team Udayavani, Dec 18, 2017, 4:32 PM IST

s-7.jpg

ಜಮಖಂಡಿ: ತಾಲೂಕಿನ ಕನ್ನೊಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ಬರತಕ್ಕ ಬಡವರಿಗೆ, ಫಲಾನುಭವಿಗಳಿಗೆ ಸರಕಾರ ಹಾಗೂ ಶಾಸಕರ ಪ್ರಯತ್ನದಿಂದ ಮಂಜೂರಾಗಿದ್ದ ನಿವೇಶನಗಳು ಗ್ರಾಪಂ ಅಧ್ಯಕ್ಷರು ಹಾಗೂ ಸದಸ್ಯರು ಕಬಳಿಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತರೊಬ್ಬರು ಮಾಹಿತಿ ಹಕ್ಕಿನಡಿ 2012 ರಿಂದ 2017ರವರೆಗೆ ಆಶ್ರಯ ಯೋಜನೆ ಮನೆಗಳು ಎಷ್ಟು ಮಂಜೂರಾಗಿವೆ. ಯಾವ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ ಮಾಹಿತಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದರು.
ಕನ್ನೊಳ್ಳಿ ಪಿಡಿಒ ಪ್ರಕಾರ ಮಾಹಿತಿ ಹಕ್ಕು ಅಧಿನಿಯಮದಲ್ಲಿ ತಾವು ತಿಳಿಸಿರುವ ಅವಧಿಯಲ್ಲಿ ಸರಕಾರದಿಂದ ಯಾವುದೇ ರೀತಿಯ ಆಶ್ರಯ ಮನೆಗಳು ಮಂಜೂರಾಗಿರುವುದಿಲ್ಲ. ಫಲಾನುಭವಿಗಳಿಗೆ ಕೂಡ ಹಂಚಿಕೆ ಮಾಡಿರುವುದಿಲ್ಲ ಎಂದು ಉತ್ತರ ನೀಡಿದ್ದಾರೆ. 

ರಾಜ್ಯ ಸರಕಾರದ ಪಂಚಾಯತ್‌ ರಾಜ್ಯ ಇಲಾಖೆ ಅಭಿವೃದ್ಧಿಪಡಿಸಿರುವ ಪಂಚತಂತ್ರ ಯೋಜನೆ ಕಂಪ್ಯೂಟರ್‌ ಸಾಫ್ಟ್‌ವೇರ್‌ದಲ್ಲಿ ಕನ್ನೊಳ್ಳಿ ಗ್ರಾಪಂಗೆ ಸಂಬಂಧಿ ಸಿದ ಗದ್ಯಾಳ, ಕುರಗೋಡ ಕನ್ನೊಳ್ಳಿ ಗ್ರಾಮಗಳಲ್ಲಿ ಹಂಚಿಕೆಯಾಗಿರುವ ಫಲಾನುಭವಿಗಳ ಹೆಸರು, ಗ್ರಾಮದ ವಿವರ ಸಹಿತ ಎಲ್ಲ ಮಾಹಿತಿ ಲಭ್ಯವಿದೆ. ಕುರಗೋಡದಲ್ಲಿ ಸರಕಾರದಿಂದ ಮಂಜೂರಾದ ಆಶ್ರಯ ಯೋಜನೆಯಲ್ಲಿ ಗ್ರಾಪಂ
ಅಧ್ಯಕ್ಷರು ತಮ್ಮ ಹೆಸರಿನಲ್ಲಿ ಎರಡು ನಿವೇಶನ ಪಡೆದುಕೊಂಡಿದ್ದು ಮಾಹಿತಿ ಬಹಿರಂಗಗೊಂಡಿದೆ. ಅದರಂತೆ ಸದಸ್ಯರು ತಮ್ಮ ಸಂಬಂಧಿ ಕರ ಹೆಸರಿನಲ್ಲಿ ಪಡೆದುಕೊಂಡಿದ್ದಾರೆಂದು ಗ್ರಾಮಸ್ಥರು ಹಾಗೂ ಮಾಹಿತಿ ಹಕ್ಕುದಾರರು ಆರೋಪಿಸಿದ್ದಾರೆ.

ಾಪಂ ಸಾಮಾನ್ಯ ಸಭೆಯಲ್ಲಿ ಕನ್ನೊಳ್ಳಿ, ಸಿದ್ದಾಪುರ ಸಹಿತ ವಿವಿಧ ಗ್ರಾಪಂಗಳಲ್ಲಿ ಬಡವರಿಗೆ, ಫಲಾನುಭವಿಗಳಿಗೆ ಹಂಚಿಕೆಯಾಗಬೇಕಿದ್ದ ನಿವೇಶನಗಳಲ್ಲಿ ಅವ್ಯವಹಾರ ನಡೆದಿರುವ ಕುರಿತು ಚರ್ಚೆಯಾಗಿದೆ. ತಾಲೂಕಿನ ಬಹುತೇಕ ಗ್ರಾಪಂಗಳಲ್ಲಿ ನೈಜ ಫಲಾನುಭವಿಗಳಿಗೆ ನಿವೇಶನ, ಕಟ್ಟಡ ಸಹಾಯಧನ ಸರಿಯಾಗಿ ತಲುಪುತ್ತಿಲ್ಲವೆಂದು ಸಭೆಯಲ್ಲಿ ಗಂಭೀರ ಆರೋಪಗಳು ಕೇಳಿಬಂದಿವೆ. ಯಾವ ಮಾನದಂಡ ಮೂಲಕ ಫಲಾನುಭವಿಗಳ ಆಯ್ಕೆಗೊಂಡಿದೆ ಪರಿಶೀಲಿಸಿ, ಮೇಲಾಧಿ ಕಾರಿಗಳ ಗಮನಕ್ಕೆ ತರುವ ಮೂಲಕ ಪ್ರಾಮಾಣಿಕ ತನಿಖೆ ನಡೆಸಿ ಅರ್ಹ ಫಲಾನುಭಗಳಿಗೆ ಸೌಲಭ್ಯ ಕಲ್ಪಿಸುವ ವ್ಯವಸ್ಥೆ ಮಾಡುತ್ತೇನೆ.
ಎನ್‌.ವೈ. ಬಸರಿಗೀಡದ, ತಾಪಂ ಇಒ

ತಾಲೂಕಿನ ಬಹುತೇಕ ಗ್ರಾಪಂ ಅರ್ಹ ಫಲಾನುಭವಿಗಳಿಗೆ ನಿವೇಶನ, ಕಟ್ಟಡ ಸಹಾಯಧನ ತಲುಪುತ್ತಿಲ್ಲ. ಸರಕಾರದ ಎಲ್ಲ ಅನುದಾನಗಳು ಬಹುತೇಕ ಗ್ರಾಪಂ ಸದಸ್ಯರ, ಮಧ್ಯವರ್ತಿಗಳ ಅಥವಾ ಇನ್ನಾವುದೋ ಮೂಲದಿಂದ ಬೇರೆಯರ ಪಾಲಾಗುತ್ತಿದ್ದು, ಬಡವರು ಬಡವರಾಗಿಯೇ ಉಳಿದುಕೊಂಡಿದ್ದಾರೆ. ತಾಪಂ ಇಒ ಸೂಕ್ತ ತನಿಖೆ ನಡೆಸುವ ಮೂಲಕ ನ್ಯಾಯ ಒದಗಿಸಬೇಕು.
ಶ್ರೀಮಂತ ಚೌರಿ, ತಾಪಂ ಸದಸ್ಯರು, ತೊದಲಬಾಗಿ.

ಮಲ್ಲೇಶ ರಾ. ಆಳಗಿ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.