ಹಿಮಾಚಲ ಪ್ರದೇಶ:ಸಿಎಂ ರೇಸ್ನಲ್ಲಿ ನಡ್ಡಾ, ಠಾಕೂರ್
Team Udayavani, Dec 19, 2017, 10:02 AM IST
ಶಿಮ್ಲಾ: ವಿಧಾನಸಭೆ ಚುನಾ ವಣೆಯಲ್ಲಿ ಬಿಜೆಪಿ ಅಧಿಕಾರ ಹಿಡಿಯುವಲ್ಲಿ ಸಫಲವಾದರೂ ಮುಖ್ಯಮಂತ್ರಿ ಅಭ್ಯರ್ಥಿ ಪ್ರೇಮ್ಕುಮಾರ್ ಧುಮಾಲ್ ಅವರ ಅನಿರೀಕ್ಷಿತ ಸೋಲಿನಿಂದ ಹುದ್ದೆಗೆ ಬೇರೆ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆಗೆ ಸಿಲುಕಿದೆ.
ಇದೀಗ ಪ್ರಮುಖವಾಗಿ ಸಿಎಂ ಹುದ್ದೆಗೆ ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಮತ್ತು ಹಿರಿಯ ಶಾಸಕ ಮಾಜಿ ಸಚಿವ ಜೈರಾಮ್ ಠಾಕೂರ್ ಅವರ ಹೆಸರು ಕೇಳಿ ಬರುತ್ತಿದೆ.
ವಿಶೇಷವೆಂದರೆ ಧುಮಾಲ್ ಅವರೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದ ಸತ್ಪಾಲ್ ಸಿಂಗ್ ಸತ್ತಿ ಅವರೂ ಉನಾ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದಾರೆ.
ಠಾಕೂರ್ ಮಂಡಿ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು, ಈ ಹಿಂದೆ ಹಿಮಾಚಲ ಪ್ರದೇಶದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ.
ಗೋವಾ ಮಾದರಿ ಅನುಸರಿಸುವ ಸಾಧ್ಯತೆ
ಗೋವಾ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಲಕ್ಷ್ಮೀಕಾಂತ್ ಪರ್ಶೇಕರ್ ಅವರು ಸೋಲು ಅನುಭವಿಸಿದ್ದರು. ಈ ಸಂದರ್ಭ ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಅವರ ರಾಜೀನಾಮೆ ಪಡೆದು ಮತ್ತೆ ಮುಖ್ಯಮಂತ್ರಿ ಹುದ್ದೆ ನೀಡಲಾಗಿತ್ತು. ಇದೇ ಮಾದರಿಯಲ್ಲಿ ಅನುಭವಿ ನಡ್ಡಾ ಅವರಿಗೇ ಸಿಎಂ ಹುದ್ದೆ ಸಿಗುವ ಸಾಧ್ಯತೆಗಳು ದಟ್ಟವಾಗಿದೆ. ನಡ್ಡಾ ಅವರು ಮೋದಿ , ಅಮಿತ್ ಶಾ ಅವರ ಆಪ್ತ ವಲಯದವರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ
Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್
Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ
CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!
West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ