ಏರ್‌ಟೆಲ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ


Team Udayavani, Dec 22, 2017, 1:54 PM IST

airtel.jpg

ಬಾಗೇಪಲ್ಲಿ: ಗ್ರಾಹಕರ ಅಡುಗೆ ಅನಿಲ ಸಬ್ಸಿಡಿ ಹಣವನ್ನು ಏರ್‌ಟೆಲ್‌ ಕಂಪನಿ ಯವರು ತಮ್ಮ ಏರ್‌ಟೆಲ್‌ ಬ್ಯಾಂಕಿಗೆ ಜಮಾವಣೆ ಮಾಡಿಕೊಂಡು, ಗ್ರಾಹಕರಿಗೆ ವಂಚಿಸುತ್ತಿದ್ದಾರೆ. ಮೊದಲಿನಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಜಮಾವಣೆ ಮಾಡಬೇಕು ಎಂದು ಆಗ್ರಹಿಸಿ ಕನ್ನಡ ಸೇನೆ ಕಾರ್ಯಕರ್ತರು ಏರ್‌ಟೆಲ್‌ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಕನ್ನಡ ಸೇನೆ ತಾಲೂಕು ಘಟಕದ ಅಧ್ಯಕ್ಷ ಬಿ.ಎ.ಬಾಬಾಜಾನ್‌ ಮಾತನಾಡಿ, ಗ್ರಾಹಕರ ಅಡುಗೆ ಅನಿಲ ಸಹಾಯಧನ ಸುಮಾರು ತಿಂಗಳಿನಿಂದ ಗ್ರಾಹಕರ ಬ್ಯಾಂಕ್‌ಗಳ ಖಾತೆಗೆ ಬರುತ್ತಿಲ್ಲ. ಈ ಕುರಿತು ಗ್ರಾಹಕರು ಬ್ಯಾಂಕ್‌ನಲ್ಲಿ ವಿಚಾರಿಸಿದರೆ, ನೀವು ಆಧಾರ್‌ ಕಾರ್ಡ್‌ ಸಂಖ್ಯೆ ಸಂಯೋಜನೆ ಮಾಡಿಸಿಲ್ಲ ಎಂದು ಹೇಳುತ್ತಾರೆ. ಅಡುಗೆ ಅನಿಲ ಏಜೆನ್ಸಿಯವರನ್ನು ಕೇಳಿದರೆ ನಾವು ಸಹಾಯಧನ ಹಣವನ್ನು ನಿಮ್ಮ ಖಾತೆಗೆ ವರ್ಗಾಯಿಸಿದ್ದೇವೆ ಎಂದು ಹೇಳುತ್ತಿದ್ದಾರೆ. ಆದರೆ, ಬ್ಯಾಂಕ್‌ ಖಾತೆಗಳಲ್ಲಿ ಮಾತ್ರ ಅಡುಗೆ ಅನಿಲ ಸಬ್ಸಿಡಿ ಹಣ ಮಾತ್ರ ಬಂದಿಲ್ಲ ಎಂದು ದೂರಿದರು.

ಅಡುಗೆ ಅನಿಲದ ಸಬ್ಸಿಡಿ ಹಣವನ್ನು ಏರ್‌ಟೆಲ್‌ ಪೆಮೆಂಟ್‌ ಬ್ಯಾಂಕ್‌ ಪಡೆದಿದೆ. ಕೇವಲ 10 ರೂ. ಕಮಿಷನ್‌ಗಾಗಿ ಗ್ರಾಹಕರಿಗೆ ಮಾಹಿತಿ ತಿಳಿಸದೇ ಏರ್‌ಟೆಲ್‌ ಪೆಮೆಂಟ್‌ ಖಾತೆಗೆ ಜಮಾಯಿಸಿಕೊಂಡು ಜನಸಾಮಾನ್ಯರ ಬಡ ಕುಟುಂಬಗಳಿಗೆ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದರು. ನೇರವಾಗಿ ಅಡುಗೆ ಅನಿಲದ ಸಬ್ಸಿಡಿ ಹಣವನ್ನು ರಾಷ್ಟ್ರೀಕೃತ ಬ್ಯಾಂಕುಗಳ ಗ್ರಾಹಕರ ಖಾತೆಗೆ ವರ್ಗಾಯಿಸಬೇಕು. ಕೂಡಲೇ ಏರ್‌ಟೆಲ್‌ ಪೆಮೆಂಟ್‌ ಖಾತೆಗೆ ರದ್ದುಗೊಳಿಸಿ ಕಾನೂನು ಕ್ರಮ ಜರುಗಿಸಬೇಕು ಎಂದರು.

ಏರ್‌ಟೆಲ್‌ ಕಂಪನಿ ಹಿರಿಯ ಅಧಿಕಾರಿಗಳು ಸಮಸ್ಯೆ ಇತ್ಯರ್ಥ ಮಾಡದೇ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆರೋಪಿಸಿ ಕನ್ನಡ ಸೇನೆ ಕಾರ್ಯಕರ್ತರು, ಏರ್‌ಟೆಲ್‌ ಕಚೇರಿಗೆ ಬೀಗ ಜಡಿದು ಪ್ರತಿಭಟಿಸಿದರು. ಇದೇ ವೇಳೆ ತಹಶೀಲ್ದಾರ್‌ ಮೂಲಕ ಪೆಟ್ರೋಲಿಯಂ ಸಚಿವರ ಧರ್ಮೆಂದ್ರ ಪ್ರಧಾನ್‌ಗೆ‌ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಕನ್ನಡ ಸೇನೆ ತಾಲೂಕು ಅಧ್ಯಕ್ಷ ಬಿ.ಎ.ಬಾಬಾಜಾನ್‌, ಮುಖಂಡರಾದ ಜಿ.ವಿ.ಪ್ರದೀಪ್‌ ಕುಮಾರ್‌, ವೆಂಕಟಶಿವಪ್ಪ, ಸಮೀವುಲ್ಲಾ, ಷೇಕ್‌ ಹಿದಾಯುತುಲ್ಲಾ, ರಾಮು, ಅಸ್ಲಾಂ ಬಾಷ, ನರೇಶ, ಮುದ್ದುಕೃಷ್ಣ, ಷμàವಲ್ಲಾ, ಶ್ರೀನಿವಾಸ್‌ ಇತರರಿದ್ದರು.

ಟಾಪ್ ನ್ಯೂಸ್

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

police crime

West Bengal ಬಿಜೆಪಿಯ ಮುಸ್ಲಿಂ ಕಾರ್ಯಕರ್ತನ ಬರ್ಬರ ಹತ್ಯೆ

1-wq-wewqe

T20 World Cup; ಪಪುವಾ ನ್ಯೂ ಗಿನಿಯ ವಿರುದ್ಧ ವಿಂಡೀಸ್‌ ಗೆ 5 ವಿಕೆಟ್ ಗಳ ಜಯ

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Udupi: ಐತಿಹಾಸಿಕ ರಂಗು ಪಡೆದ ವಿಧಾನ ಪರಿಷತ್‌ ಚುನಾವಣೆ..

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

Mansoon: ರಾಜ್ಯ ಕರಾವಳಿಗೆ ಪ್ರವೇಶ ಪಡೆದ ಮುಂಗಾರು… 4 ದಿನ “ಎಲ್ಲೋ ಅಲರ್ಟ್‌’

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌

ಮಡಿಕೇರಿ: ಈ ಬಾರಿಯೂ ಮಳೆ ಕೊರತೆ ಸಾಧ್ಯತೆ: ಪ್ರವಾಹ, ಭೂಕುಸಿತ ಪರಿಸ್ಥಿತಿ ಇಲ್ಲ: ಪ್ರಕಾಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಂದಿಗಿರಿಧಾಮ ಪ್ರವೇಶ ಸಮಯ 1 ಗಂಟೆ ಕಡಿತ

ವಿಶ್ವ ವಿಖ್ಯಾತ ನಂದಿಗಿರಿಧಾಮ ಪ್ರವೇಶ ಸಮಯ 1 ಗಂಟೆ ಕಡಿತ

Pocso Case: ಮುಖ್ಯ ಶಿಕ್ಷಕನಿಂದ ಅತ್ಯಾಚಾರ:13 ವರ್ಷದ ವಿದ್ಯಾರ್ಥಿನಿ ಗರ್ಭಿಣಿ

Pocso Case: ಮುಖ್ಯ ಶಿಕ್ಷಕನಿಂದ ಅತ್ಯಾಚಾರ:13 ವರ್ಷದ ವಿದ್ಯಾರ್ಥಿನಿ ಗರ್ಭಿಣಿ

HDK (3)

Prajwal Revanna ಬರುತ್ತಿರುವುದು ಸಮಾಧಾನ ತಂದಿದೆ:ಎಚ್ ಡಿಕೆ ಹೇಳಿದ್ದೇನು?

Minister Dr. MC Sudhakar: ಚಿಂತಾಮಣಿಗೆ ಸೀಮಿತವಾಯಿತೇ ಸಚಿವರ ಜನತಾ ದರ್ಶನ

Minister Dr. MC Sudhakar: ಚಿಂತಾಮಣಿಗೆ ಸೀಮಿತವಾಯಿತೇ ಸಚಿವರ ಜನತಾ ದರ್ಶನ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

MUST WATCH

udayavani youtube

ಹೆರ್ಗದಲ್ಲಿ 40 ಅಡಿ ಆಳದ ಬಾವಿಗೆ ಬಿದ್ದ ಕರುವಿನ ರಕ್ಷಣೆ

udayavani youtube

ಇಡ್ಲಿ ವಡೆ, ಶಾವಿಗೆ ಬಾತ್ ಗೆ ಹೆಸರುವಾಸಿಯಾದ ಹೋಟೆಲ್

udayavani youtube

ಒಡವೆ ಖರೀದಿಸುವ ನೆಪದಲ್ಲಿ ಮೂರುವರೆ ಲಕ್ಷ ಮೌಲ್ಯದ ಒಡವೆ ಕದ್ದ ಖತರ್ನಾಕ್ ಅಜ್ಜಿ

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

udayavani youtube

ರಘುಪತಿ ಭಟ್ ಅವರ ಮನದಾಳದ ಮಾತು

ಹೊಸ ಸೇರ್ಪಡೆ

1-asdasdas

Tamil actor ಕರುಣಾಸ್‌ ಬಳಿ 40 ಬುಲೆಟ್‌ಗಳು ಪತ್ತೆ!

mob

WhatsApp ನಲ್ಲಿ ಶೀಘ್ರ ಚಾಟ್‌ ಫಿಲ್ಟರ್‌ ಅಪ್‌ಡೇಟ್‌?

Vimana 2

Again ವಿಮಾನಕ್ಕೆ ಬಾಂಬ್‌ ಬೆದರಿಕೆ: ವಾರದಲ್ಲಿ 4ನೇ ಘಟನೆ

Terror 2

LOC; ದೇಶಕ್ಕೆ ನುಸುಳಲು 70 ಉಗ್ರರು ಸಜ್ಜು: ಕಾಶ್ಮೀರ ಡಿಜಿಪಿ ರಶ್ಮಿ

1-wewq-ewqewq

Hyderabad ಇನ್ನು ಮುಂದೆ ತೆಲಂಗಾಣಕ್ಕಷ್ಟೇ ರಾಜಧಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.