ಗಣ್ಯರ ಹಣದ ಬ್ಯಾಗ್‌ ಎಗರಿಸಿದ ಖಾಕಿ


Team Udayavani, Dec 23, 2017, 11:00 AM IST

Suneel_Kumar.jpg

ಬೆಂಗಳೂರು: ಭದ್ರತೆಗೆ ನಿಯೋಜನೆಗೊಂಡ ವಿವಿಐಪಿ ಭದ್ರತಾ ವಿಭಾಗದ ಸಿಬ್ಬಂದಿಯೇ ತಾರಾ ಹೋಟೆಲ್‌ ವೊಂದರಲ್ಲಿ ವಾಸ್ತವ್ಯ ಹೂಡಿದ್ದ ಗಣ್ಯರೊಬ್ಬರ ಹಣವಿದ್ದ ಬ್ಯಾಗ್‌ ಕಳವು ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಡಿ.16 ರಂದು ನಗರಕ್ಕೆ ಆಗಮಿಸಿದ್ದ ಬಿಹಾರ ಉಪ ಮುಖ್ಯಮಂತ್ರಿ ಸುಶೀಲ್‌ಕುಮಾರ್‌ ಮೋದಿಯ ಬೆಂಗಾವಲು ಸೇವೆಗೆ ನಿಯೋಜನೆಗೊಂಡಿದ್ದ ವಿವಿಐಪಿ ಭದ್ರತಾ ವಿಭಾಗದ ಸಿಬ್ಬಂದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ತಾರಾ ಹೋಟೆಲ್‌ನಲ್ಲಿ ತಂಗಿದ್ದ ಗಣ್ಯರೊಬ್ಬರ ಹಣವಿದ್ದ ಬ್ಯಾಗ್‌ ಕಳವು ಮಾಡಿರುವ ಆರೋಪಕ್ಕೆ ಗುರಿಯಾಗಿದ್ದಾರೆ.

ತನಿಖೆಗೆ ಸೂಚನೆ: ಹೋಟೆಲ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ ಹಣವಿದ್ದ ಬ್ಯಾಗ್‌ ಕಳವು ಮಾಡಿರುವ ದೃಶ್ಯಾವಳಿಗಳು ಸೆರೆಯಾಗಿದೆ. ಘಟನೆ ಕುರಿತು ಆಂತರಿಕ ತನಿಖೆ ನಡೆಸಿ ವರದಿ ನೀಡುವಂತೆ ನಗರ ಪೊಲೀಸ್‌ ಕಮಿಷನರ್‌ ಟಿ. ಸುನೀಲ್‌ಕುಮಾರ್‌ ಸೂಚನೆ ನೀಡಿದ್ದಾರೆ.

ಈಗಾಗಲೇ ತನಿಖೆ ಆರಂಭಿಸಿರುವ ವಿವಿಐಪಿ ವಿಭಾಗದ ಇನ್ಸ್‌ಪೆಕ್ಟರ್‌ ರಾಮಕೃಷ್ಣ ಆರೋಪ ಎದುರಿಸುತ್ತಿರುವ ಎಎಸ್‌ಐ ಮುತ್ತುರಾಯಪ್ಪ, ಹೆಡ್‌ ಕಾನ್ಸ್‌ಟೇಬಲ್‌ ವೈ.ವಿ ನಾಗರಾಜ್‌ ಸೇರಿದಂತೆ, ಆದಿನ ಎಸ್ಕಾರ್ಟ್‌ ಸೇವೆಗೆ ಕಾರು ಚಾಲಕರಾಗಿ ಹೋಗಿದ್ದ ಸಿಎಆರ್‌ ಪೇದೆಯೊಬ್ಬರನ್ನು ವಿಚಾರಣೆಗೊಳಪಡಿಸಿ ಹೇಳಿಕೆ ಪಡೆಯಲಾಗಿದೆ ಎಂದು ಮೂಲಗಳು “ಉದಯವಾಣಿಗೆ ತಿಳಿಸಿವೆ.

ಇತ್ತೀಚೆಗಷ್ಟೇ ರೇಸ್‌ಕೋರ್ಸ್‌ ರಸ್ತೆಯಲ್ಲಿ ಮಹಿಳೆಯೊಬ್ಬರಿಂದ ಅಮಾನ್ಯಗೊಂಡ 1 ಕೋಟಿ ರೂ. ನೋಟುಗಳನ್ನ ಸಿಸಿಬಿ ಪೊಲೀಸರೇ ಕಸಿದು ಪರಾರಿಯಾಗಿರುವ ಘಟನೆ ಬೆನ್ನಲ್ಲೇ ಗಣ್ಯರೊಬ್ಬರ ಹಣದ ಬ್ಯಾಗ್‌ ವಿವಿಐಪಿ ಭದ್ರತಾ ವಿಭಾಗ ಸಹಾಯಕ ಸಬ್‌ ಇನ್ಸ್‌ಪೆಕ್ಟರ್‌, ಮುಖ್ಯ ಪೇದೆ ಭಾಗಿಯಾಗಿದ್ದಾರೆ ಎನ್ನಲಾದ ಈ ಕಳವು ಪ್ರಕರಣ ಇಡೀ ಪೊಲೀಸ್‌ ಇಲಾಖೆಗೆ ಮತ್ತೂಮ್ಮೆ ಮುಜುಗರ ತಂದೊಡ್ಡಿದೆ.

ಘಟನೆ ಹಿನ್ನೆಲೆ: ಡಿ.16 ರಂದು ಜಿಎಸ್‌ಟಿ ಸಭೆಗೆ ಆಗಮಿಸಿದ್ದ ಬಿಹಾರ ಡಿಸಿಎಂ ಸುಶೀಲ್‌ಕುಮಾರ್‌ ಮೋದಿ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಸ್ಟಾರ್‌ ಹೋಟೆಲ್‌ನಲ್ಲಿ ಉಳಿದು ಕೊಂಡಿದ್ದರು. ಈ ವೇಳೆ ಮೊದಲನೇ
ಪಾಳಿಯ ಬೆಂಗಾವಲು ಸೇವೆಗೆ ನಿಯೋಜನೆಗೊಂಡಿದ್ದ ಎಎಸ್‌ಐ ಮುತ್ತುರಾಯಪ್ಪ, ಹೆಡ್‌ಕಾನ್ಸ್‌ಟೇಬಲ್‌ ವೈ.ವಿ ನಾಗರಾಜ್‌ ರಾತ್ರಿ 9ಗಂಟೆ ಬಳಿಕ ಹೋಟೆಲ್‌ ನಿಂದ ಹೊರಗಡೆ ಬರುವಾಗ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದ ಗಣ್ಯರೊಬ್ಬರಿಗೆ ಸೇರಿದೆ ಎನ್ನಲಾದ ಬ್ಯಾಗ್‌ವೊಂದನ್ನು ತೆಗೆದುಕೊಂಡಿದ್ದು ತಮ್ಮ ಪಾಳಿ ಮುಗಿದಿದ್ದರಿಂದ ನಗರಕ್ಕೆ ವಾಪಾಸಾಗಿದ್ದಾರೆ.

ಆ ನಂತರ ಹೋಟೆಲ್‌ನಲ್ಲಿದ್ದ ಗಣ್ಯ ಅತಿಥಿಗೆ ತನ್ನ ಬ್ಯಾಗ್‌ ಕಳುವಾಗಿರುವುದು ಗಮನಕ್ಕೆ ಬಂದಿದ್ದು, ವಿಮಾನ ನಿಲ್ದಾಣದಿಂದಲೇ ತಾವು ಉಳಿದುಕೊಂಡಿದ್ದ ಹೋಟೆಲ್‌ಗೆ ದೂರವಾಣಿ ಮೂಲಕ ವಿಚಾರಿಸಿದರು. ಈ ಹಿನ್ನೆಲೆಯಲ್ಲಿ ಹೋಟೆಲ್‌ ಸಿಬ್ಬಂದಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಇಬ್ಬರು ಬ್ಯಾಗ್‌ ತೆಗೆದುಕೊಂಡು ಹೋಗುವುದು ಕಂಡು ಬಂದಿದೆ.

ನಡುರಾತ್ರಿಯಲ್ಲಿಯೇ ಸಂಧಾನ?
ಈ ಘಟನೆ ಹಿನ್ನೆಲೆಯಲ್ಲಿ ಪೊಲೀಸರು ಕೂಡ ಹೋಟೆಲ್‌ಗೆ ಆಗಮಿಸಿ ಆರೋಪಿತ ಸಿಬ್ಬಂದಿ ಯನ್ನು ವಾಪಸ್‌ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆರೋಪ ನಿರಾಕರಿಸಿದ ಪೊಲೀಸ್‌ ಸಿಬ್ಬಂದಿ ಸಿಸಿಟಿವಿ ದೃಶ್ಯಾವಳಿ ತೋರಿಸಿದ ಬಳಿಕ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾ ಗಿದೆ. ಕೂಡಲೇ ತೆಗೆದುಕೊಂಡು ಹೋಗಿದ್ದ ಬ್ಯಾಗ್‌ ವಾಪಸ್‌ ನೀಡಿದ್ದಾರೆ. ಆದರೆ, ಇಲಾಖೆಯ ಮರ್ಯಾದೆ ಹೋಗಲಿದೆ ಎಂಬ ಉದ್ದೇಶದಿಂದ ದೂರು ದಾಖಲಿಸದೇ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿ ದ್ದರು ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ. ಖಾಸಗಿ ಹೋಟೆಲ್‌ ಸಿಬ್ಬಂದಿ ಸಿಸಿಟಿವಿ ದೃಶ್ಯಾವಳಿಗಳನ್ನು ಹಾಗೂ ಮಾಹಿತಿಯನ್ನು ಹಿರಿಯ ಅಧಿಕಾರಿಗಳಿಗೆ ವಾಟ್ಸಪ್‌ ಮೂಲಕ ರವಾನೆಯಾಗಿದ್ದು, ನಗರ ಪೊಲೀಸ್‌ ಆಯುಕ್ತ ಟಿ. ಸುನೀಲ್‌ ಕುಮಾರ್‌ ಅವರ ಗಮನಕ್ಕೆ ಬಂದಿದೆ.

ಬ್ಯಾಗ್‌ ಬಾಂಗ್ಲಾ ಕ್ರೀಡಾಪಟುಗಳದೆ
ತಾರಾ ಹೋಟೆಲ್‌ನಲ್ಲಿ ಬಾಂಗ್ಲಾ ಕ್ರೀಡಾ ಪಟುಗಳು ಹಾಗೂ ಇತರೆ ಗಣ್ಯರು ತಂಗಿದ್ದರು ಎಂಬ ಮಾಹಿತಿಯಿದೆ. ಹೀಗಾಗಿ ಯಾರ ಬ್ಯಾಗ್‌ ಪೊಲೀಸರು ತೆಗೆದುಕೊಂಡಿದ್ದರು ಎಂಬುದು ತನಿಖೆಯಾಗಬೇಕು.

ಆರೋಪ ನಿರಾಕರಣೆ
ಈ ಘಟನೆಗೆ ಸಂಬಂಧಿಸಿದಂತೆ ಉನ್ನತ ಅಧಿಕಾರಿಯೊಬ್ಬರನ್ನು ಉದಯವಾಣಿ ಸಂಪರ್ಕಿಸಿದಾಗ, ಭದ್ರತಾ ಸೇವೆಗೆ ನಿಯೋಜನೆಗೊಂಡಿದ್ದ ಸಿಬ್ಬಂದಿ ಖಾಸಗಿ ಹೋಟೆಲ್‌ ನಿಂದ ಕನ್‌ಪ್ಯೂಸ್‌ ಆಗಿ ಬ್ಯಾಗ್‌ ತೆಗೆದುಕೊಂಡು ಹೋಗಿದ್ದಾರೆ. ಬಳಿಕ ಈ ಬ್ಯಾಗ್‌ ಯಾರದು ಎಂಬುದು ಗೊತ್ತಾಗದೇ ಅದೇ ದಿನ ರಾತ್ರಿ ಏರ್‌ಪೋರ್ಟ್‌ ಠಾಣೆಗೆ ಬ್ಯಾಗ್‌ ಒಪ್ಪಿಸಿದ್ದು, ಹೋಟೆಲ್‌ಗೆ ಬ್ಯಾಗ್‌ ರವಾನೆಯಾಗಿದೆ. ಈ ಸಂಬಂಧ ಆಯುಕ್ತರ ಸೂಚನೆ ಮೇರೆಗೆ ಸಿಸಿಟಿವಿಯ ದೃಶ್ಯಾವಳಿಗಳ ಪರಿಶೀಲನೆ, ಆರೋಪಿತ ಸಿಬ್ಬಂದಿಯ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ.ಯಾವ ಉದ್ದೇಶಕ್ಕಾಗಿ ಬ್ಯಾಗ್‌ ಪಡೆದುಕೊಂಡು ಬಂದಿದ್ದರು. ಅದು ಯಾರಿಗೆ ಸೇರಿದ ಬ್ಯಾಗ್‌ ಆಗಿತ್ತು ಎಂಬುದರ ಬಗ್ಗೆ ವಿಚಾರಣೆ ಪೂರ್ಣಗೊಂಡ ಬಳಿಕ ಗೊತ್ತಾಗಲಿದೆ ಎಂದು ಹೇಳಿದರು

ಬ್ಯಾಗ್‌ ನಲ್ಲಿ ಏನಿತ್ತು?
ಪೊಲೀಸ್‌ ಸಿಬ್ಬಂದಿ ಕೊಂಡೊಯ್ದಿದ್ದ ಬ್ಯಾಗ್‌ನಲ್ಲಿ 50 ಸಾವಿರ ರೂ.ಗಳಿಗೂ ಅಧಿಕ ಹಣ, ಕ್ಯಾಮೆರಾ ಸೇರಿದಂತೆ ಮತ್ತಿತರ
ವಸ್ತುಗಳು ಇದ್ದವು ಎಂದು ಹೇಳಲಾಗಿ¨.

ಘಟನೆಗೆ ಸಂಬಂಧಿ ಸಿದಂತೆ ಆರೋಪ ಎದುರಿಸುತ್ತಿರುವ ಸಿಬ್ಬಂದಿಯ ವಿರುದ್ಧ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ವರದಿ ಬಂದ ಬಳಿಕ ಆರೋಪದ ಸತ್ಯಾಸತ್ಯತೆ ಗೊತ್ತಾಗಲಿದೆ. ಒಂದು ವೇಳೆ ತಪ್ಪು ಎಸಗಿರುವುದು ಸಾಬೀತಾದರೆ ಕ್ರಮ ಜರುಗಿಸಲಾಗುವುದು.
 ● ಟಿ. ಸುನೀಲ್‌ಕುಮಾರ್‌, ನಗರ ಆಯುಕ್ತ

ಮಂಜುನಾಥ್‌ ಲಘುಮೇನಹಳ್ಳಿ 

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.