ಇಲ್ಲಿ ಗ್ರಾಪಂ ಕಚೇರಿಯಲ್ಲೇ ಮಲಗುತ್ತವೆ ಬೀದಿ ನಾಯಿಗಳು


Team Udayavani, Dec 23, 2017, 3:00 PM IST

cham-2.jpg

ಸಂತೆಮರಹಳ್ಳಿ: ನೈರ್ಮಲ್ಯಕ್ಕೆ ಕೊಡೆ ಹಿಡಿದ ಕಸದ ರಾಶಿ, ವಿಲೇವಾರಿ ಮಾಡದ ಘನ ತ್ಯಾಜ್ಯ, ಅಶುಚಿತ್ವ ತಾಂಡವವಾಡುತ್ತಿರುವ ಪಂಚಾಯ್ತಿ ಆವರಣ, ಸುತ್ತ ಮಲ ಮೂತ್ರ ವಿಸರ್ಜನೆ, ದುರ್ನಾತ… ಇದು ಯಾವುದೋ ಕೊಳಚೆ ಪ್ರದೇಶದ ಪರಿಸ್ಥಿತಿಯಲ್ಲ, ಬದಲಿಗೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ಇರುವ ಪ್ರಮುಖ ಹೋಬಳಿ ಕೇಂದ್ರವಾಗಿರುವ ಸಂತೆಮರಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಸುತ್ತಮುತ್ತ ಹಾಗೂ ಕೂಗಳತೆ ದೂರದಲ್ಲಿರುವ ಬಸ್‌ ನಿಲ್ದಾಣದಲ್ಲಿನ ದುಸ್ಥಿತಿ.

ಸಂತೆಮರಹಳ್ಳಿ ಗ್ರಾಮವು ಪ್ರಮುಖ ಹೋಬಳಿ ಕೇಂದ್ರವಾಗಿದೆ. ಚಾಮರಾಜನಗರ, ಯಳಂದೂರು, ನಂಜನಗೂಡು, ಮೈಸೂರಿಗೆ ಸಂಪರ್ಕ ಕಲ್ಪಿಸುವ ಕೇಂದ್ರ ಸ್ಥಾನವೂ ಹೌದು. ಈ ಹಿಂದೆ ಸಂತೆಮರಹಳ್ಳಿಯು ವಿಧಾನಸಭಾ ಕ್ಷೇತ್ರವಾಗಿತ್ತು. ಆದರೆ, ಆ ನಂತರ ಕ್ಷೇತ್ರ ಮರು ವಿಂಗಡಣೆಯಿಂದ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪಿಗೆ ಸೇರಲ್ಪಟ್ಟಿತ್ತು. ವಿಧಾನಸಭಾ ಕ್ಷೇತ್ರವಾಗಿದ್ದಾಗ ಹಲವು ಶಾಸಕರು ಗೆದ್ದಿದ್ದರು.

ಆದರೆ, ಇಲ್ಲಿ ಗೆದ್ದವರು ಸಂತೆಮರಹಳ್ಳಿಯನ್ನು ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಪಡಿಸುವಲ್ಲಿ ನಿರ್ಲಕ್ಷ್ಯ ತಾಳಿದ್ದರು. ಪರಿಣಾಮ ಇದರ ಅಭಿವೃದ್ಧಿ ಇಂದಿಗೂ ಮರೀಚಿಕೆಯಾಗಿದೆ.
 
ಸಂತೆಮರಹಳ್ಳಿಗೆ ನಿತ್ಯ ಸಾವಿರಾರು ಜನರು ಬರುತ್ತಾರೆ. ಆದರೆ, ಇಲ್ಲಿ ಸೂಕ್ತ ಬಸ್‌ ನಿಲ್ದಾಣ, ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ ಸೇರಿದಂತೆ ಇತರೆ ಮೂಲ ಸೌಕರ್ಯಗಳಿಲ್ಲ. ಇದರಿಂದ ಇದು ಪ್ರಮುಖ ಹೋಬಳಿ ಕೇಂದ್ರವಾಗಿದ್ದರೂ ಕುಗ್ರಾಮವಾಗಿಯೇ ಇದೆ. 

ಪಂಚಾಯ್ತಿ ಸುತ್ತಮುತ್ತ ನೈರ್ಮಲ್ಯ ಕೊರತೆ: ಗ್ರಾಮಗಳ ನೈರ್ಮಲ್ಯ ಕಾಪಾಡಬೇಕಾದ ಗ್ರಾಪಂ ಕಚೇರಿ ತನ್ನ ಸುತ್ತ ಕಸಕಡ್ಡಿಯ ರಾಶಿ ಇಟ್ಟುಕೊಂಡಿದೆ. ಅದನ್ನು ತೆರವಿಗೆ ಮುಂದಾಗದಿರುವುದು ಇಲ್ಲಿನ ಆಡಳಿತ ವೈಖರಿಯನ್ನು ಎತ್ತಿತೋರಿಸುತ್ತದೆ. ನಿತ್ಯ ಇಲ್ಲಿಯೇ ಓಡಾಡುವ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಕಸವನ್ನು ಕಂಡರೂ ಕಾಣದಂತೆ ನೋಡಿ ಓಡಾಡುತ್ತಿದ್ದರೆ. ತಮ್ಮ ಕೆಲಸ
ಕಾರ್ಯಗಳಿಗಾಗಿ ಬರುವ ಸಾರ್ವಜನಿಕರು ಆಡಳಿತ ವೈಖರಿಗೆ ಶಾಪ ಹಾಕಿ ಹೋಗುತ್ತಾರೆ. 

ಪಂಚಾಯ್ತಿ ಪಕ್ಕದಲ್ಲಿಯೇ ಮೂತ್ರ ವಿಸರ್ಜನೆ: ಗ್ರಾಪಂ ಕಚೇರಿ ಪಕ್ಕದಲ್ಲಿಯೇ ಸಾರ್ವಜನಿಕರು ಮೂತ್ರ ವಿಸರ್ಜನೆ ಮಾಡುತ್ತಾರೆ. ಇದರಿಂದ ಕಚೇರಿ ಒಳಗೆ ಹಾಗೂ ಹೊರಗೆ ದುರ್ನಾತ ಬೀರುತ್ತಿದೆ. ಇದು ರೋಗ ರುಜಿನಗಳಿಗೆ ಎಡೆಮಾಡಿಕೊಡುತ್ತಿದೆ. ಇನ್ನೊಂದೆಡೆ ಕಸದ ರಾಶಿಯ ಮೇಲೆ ಮೂತ್ರ ವಿಸರ್ಜನೆ ಮಾಡುವುದರಿಂದ ಕಸ ಕೊಳೆತು ಗಬ್ಬುನಾರುತ್ತಿದ್ದು ಇದನ್ನು ಸಹ ವಿಲೇವಾರಿ ಮಾಡಿ ಸ್ವತ್ಛತೆ ಮಾಡುವಲ್ಲಿ ಪಂಚಾಯಿತಿ ನಿರ್ಲಕ್ಷ್ಯ ತಾಳಿಲ್ಲ. 

ಅಲ್ಲದೇ ಪಂಚಾಯಿತಿ ಕಾರ್ಯಾಲಯದ ಒಳಗೆ ನಾಯಿಗಳು ಬಂದು ಮಲಗುತ್ತಿವೆ. ಇವು ರಾತ್ರಿ ವೇಳೆ ಬಂದು ಗಲೀಜು ಮಾಡಿ ಹೋಗುತ್ತವೆ. ಕಾರ್ಯಾಲಯದ ಸುತ್ತ ಸೂಕ್ತ ಕಾಂಪೌಂಡ್‌ ನಿರ್ಮಾಣ ಮಾಡಿ ಇವುಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಸ್ಥಳೀಯ ಆಡಳಿತ ಮುಂದಾಗಬೇಕಿದೆ ಎಂಬುದು ಕಣ್ಣೇಗಾಲ ಮಹದೇವನಾಯಕ ಅವರ ದೂರು.

ಸಂತೇಮರಹಳ್ಳಿ ಗ್ರಾಮದಲ್ಲಿ ಸ್ವತ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ಪಂಚಾಯ್ತಿ ಮುಂದಾಗಿದೆ. ಆದರೆ, ಕೆಲವು ಕಡೆ ಅಶುಚಿತ್ವ ಕಂಡುಬರುತ್ತಿರುವ ಕುರಿತು ಮಾಹಿತಿ ಇಲ್ಲ. ಮುಂದಿನ ದಿನಗಳಲ್ಲಿ ಅವುಗಳ ಬಗ್ಗೆ ಮಾಹಿತಿ ಕಲೆ ಹಾಕಿ ನೈರ್ಮಲ್ಯ ಕಾಪಾಡಿ ಸಾರ್ವಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲಾಗುವುದು.
ಕಿ ರಾಮೇಗೌಡ, ಪಿಡಿಒ, ಸಂತೆಮರಹಳ್ಳಿ

 ಫೈರೋಜ್‌ಖಾನ್‌

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.