Rohini sex racket case: ಬಯಲಾದವು ನಡುಕ ಹುಟ್ಟಿಸುವ ವಿವರಗಳು


Team Udayavani, Dec 23, 2017, 3:37 PM IST

Baha-Virendra-Dixit-Ashram-700.jpg

ಹೊಸದಿಲ್ಲಿ : ಸ್ವಘೋಷಿತ ದೇವಮಾನವ ಬಾಬಾ ವೀರೇಂದ್ರ ದೇವ ದೀಕ್ಷಿತ್‌ ಅವರ ವಿವಾದಾತ್ಮಕ ಆಶ್ರಮ ಆಧ್ಯಾತ್ಮಿಕ ವಿಶ್ವ  ವಿದ್ಯಾಲಯದ ದಿಲ್ಲಿಯಲ್ಲಿನ ಎಲ್ಲ  ಎಂಟು ಕೇಂದ್ರಗಳ ಮೇಲೆ ದಿಲ್ಲಿ ಹೈಕೋರ್ಟ್‌ ಆದೇಶದ ಪ್ರಕಾರ ದಾಳಿ ನಡೆಸಿದ ವೇಳೆ ನಡುಕ ಹುಟ್ಟಿಸುವ ಅನೇಕ  ವಿವರಗಳು ಬಯಲಾಗಿವೆ.

ಕಳೆದ 22 ವರ್ಷಗಳಿಂದಲೂ ಇಲ್ಲಿ ಮಹಿಳೆಯರನ್ನು ಅಕ್ರಮ ಬಂಧನದಲ್ಲಿಟ್ಟು ಅವರಿಗೆ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ; ಆಧ್ಯಾತ್ಮಕ ವಿಶ್ವ ವಿದ್ಯಾಲಯದವಾರದ ಅವರನ್ನು ಬಸ್ಸಿನಲ್ಲಿ ಅಜ್ಞಾತ ಸ್ಥಳಕ್ಕೆ ಒಯ್ದು ಅಲ್ಲಿ ಅವರಿಗೆ ವೇಶ್ಯಾಗಾರಿಕೆಯ ತರಬೇತಿ ನೀಡಿ ಅವರನ್ನು ಅಕ್ರಮ ಮೈಮಾರುವ ಧಂಧೆಗೆ ಬಳಲಾಗುತ್ತಿದೆ; ಆಶ್ರಮದಲ್ಲಿ  ತುಂಬಿಟ್ಟ ಅನೇಕ ಚೀಲಗಳಲ್ಲಿ ಸಿರಿಂಜ್‌ ಮತ್ತು ಮಾದಕ ದ್ರವ್ಯಗಳು ಇರುವುದನ್ನು ಪತ್ತೆ ಹಚ್ಚಲಾಗಿದೆ. 

ವಿಶ್ವವಿದ್ಯಾಲಯ ಸ್ಥಾಪನೆಗೆಂದು ಸರಕಾರ ನೀಡಿರುವ ಸ್ಥಳದಲ್ಲಿ ಸ್ಥಾಪಿಸಲಾಗಿರುವ ಆಧ್ಯಾತ್ಮಿಕ  ವಿಶ್ವ ವಿದ್ಯಾಲಯವನ್ನು ಬಾಬಾ ವೀರೇಂದ್ರ ದೇವ ದೀಕ್ಷಿತ್‌ ಸೆಕ್ಸ್‌ ಕೇಂದ್ರವಾಗಿ ಮಾರ್ಪಡಿಸಿದ್ದಾರೆ. ಅವರ ಈ ಸಂಸ್ಥೆ ನೋಂದಾವಣೆಗೊಳ್ಳದ ಸೊಸೈಟಿಯಾಗಿದೆ. 

ವೀರೇಂದ್ರ ದೇವ ದೀಕ್ಷಿತ್‌ ಅವರು ತಮ್ಮ ಈ ಆಧ್ಯಾತ್ಮಿಕ ಕೇಂದ್ರವನ್ನು ಸೇರುವ ಹುಡುಗಿಯರಿಂದ ಅಫಿದಾವಿತ್‌ ಬರೆಸಿಕೊಂಡಿದ್ದಾರೆ. ತಾವೆಂದೂ ತಮ್ಮ ಹೆತ್ತವರು ಕಾಣಲು ಮನೆಗೆ ಹೋಗುವುದಿಲ್ಲ ಎಂದು ಅವರು ಅಫಿದಾವಿತ್‌ನಲ್ಲಿ ಬರೆದುಕೊಟ್ಟಿದ್ದಾರೆ.

ದೀಕ್ಷಿತ್‌ ಅವರ ಒಟ್ಟು ಕಾರ್ಯ ವೈಖರಿ ಈಚೆಗೆ ಜೈಲುಪಾಲಾಗಿರುವ ವಿವಾದಿತ ದೇವಮಾನವ ಗುರ್ಮಿತ್‌ ರಾಮ್‌ ರಹೀಮ್‌ ಸಿಂಗ್‌ ಅವರ ಕಾರ್ಯವೈಖರಿಯನ್ನು ಹೋಲುತ್ತದೆ.

ದಿಲ್ಲಿ ಹೈಕೋರ್ಟಿನ ಜಸ್ಟಿಸ್‌ ಗೀತಾ ಮಿತ್ತಲ್‌ ಮತ್ತು ಜಸ್ಟಿಸ್‌ ಸಿ ಹರಿ ಶಂಕರ್‌ ಅವರನ್ನು ಒಳಗೊಂಡ ವಿಭಾಗೀಯ ಪೀಠದ  ಆದೇಶದ ಪ್ರಕಾರ ದಿಲ್ಲಿ ಪೊಲೀಸರು ಮತ್ತು ದಿಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಡೆಸಿದ ಜಂಟಿ  ದಾಳಿಯಲ್ಲಿ ಈ ಬಗೆಯ ಹಲವು ಆಘಾತಕಾರಿ ವಿವರಗಳು ಬಯಲಾಗಿವೆ. 

ದಿಲ್ಲಿಯ ರೋಹಿಣಿಯಲ್ಲಿನ ವಿಜಯ ವಿಹಾರದಲ್ಲಿರುವ ಬಾಬಾ ದೀಕ್ಷಿತ್‌ ಅವರ ಕೇಂದ್ರ ಹಾಗೂ ಇತರ ಕೇಂದ್ರಗಳ ಮೇಲೆ ನಡೆಸಲಾದ ದಾಳಿಯಲ್ಲಿ ಕಳೆದ 22 ವರ್ಷಗಳಿಂದಲೂ ಬಂಧಿಗಳಾಗಿ ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗಿರುವ ಹಲವಾರು ಮಹಿಳೆಯರನ್ನು ರಕ್ಷಿಸಲಾಗಿದೆ.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.