ಫ‌ಡ್ನವಿಸ್‌ಗೆ ಸಿದ್ದರಾಮಯ್ಯ ಪತ್ರ


Team Udayavani, Dec 24, 2017, 6:20 AM IST

Siddaramaiah,-Devendra-Fadn.jpg

ಬೆಂಗಳೂರು: ಮಹದಾಯಿ ನದಿ ನೀರಿನ ಹಂಚಿಕೆ ವಿವಾದ ಮಾತುಕತೆ ಮೂಲಕವೇ ಬಗೆ ಹರಿಸಿಕೊಳ್ಳಲು ರಾಜ್ಯ ಸರ್ಕಾರ ಸಿದ್ದವಿರುವುದಾಗಿ ಶುಕ್ರವಾರವಷ್ಟೇ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ಗೆ ಪತ್ರ ಬರೆದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವಿಸ್‌ ಅವರಿಗೂ ಪತ್ರ ಬರೆದಿದ್ದಾರೆ.

ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರಿಗೆ ಬರೆದಿರುವ ಪತ್ರದ ಪ್ರತಿಯನ್ನೂ ಮಹಾರಾಷ್ಟ್ರ ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರದ ಜತೆ ಲಗತ್ತಿಸಿದ್ದಾರೆ. ಮಹದಾಯಿ ನೀರು ಹಂಚಿಕೆ ವಿಷಯದಲ್ಲಿ ಮಾತುಕತೆಯ ಮೂಲಕವೇ ವಿವಾದವನ್ನು ಬಗೆ ಹರಿಸುವ ಕುರಿತಂತೆ ತಾವು ಸಕಾರಾತ್ಮಕವಾಗಿ ಸ್ಪಂದಿಸುತ್ತೀರಿ ಎಂಬ ವಿಶ್ವಾಸ ಇದೆ. ಮಹದಾಯಿ ನ್ಯಾಯಾಧಿಕರಣದ ಅಂತಿಮ ವಿಚಾರಣೆ 2018 ರ ಫೆಬ್ರವರಿ 6 ರಿಂದ 21 ರ ವರೆಗೆ ನಡೆಯಲಿದ್ದು, ಅದಕ್ಕೂ ಮೊದಲು ವಿವಾದವನ್ನು ಮಾತುಕತೆಯ ಮೂಲಕ ಬಗೆ ಹರಿಸಿಕೊಳ್ಳಲು ನೀವು ಸಹಮತ ವ್ಯಕ್ತಪಡಿಸುತ್ತೀರಿ ಎಂದು ನಂಬಿದ್ದೇನೆ ಎಂದು ಪತ್ರದಲ್ಲಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಾತುಕತೆಯ ವಿಷಯ ಮತ್ತು ಸಮಯ ನಿಗದಿ ಮಾಡುವ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಮಹಾರಾಷ್ಟ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಯೊಂದಿಗೆ ಸಂಪರ್ಕದಲ್ಲಿರುತ್ತಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಈ ನಡುವೆ, ರಾಜ್ಯ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಗೋವಾ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಮಹದಾಯಿ ವಿವಾದ ಕುರಿತು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ದಿನಾಂಕ ನಿಗದಿಪಡಿಸುವಂತೆ ಕೋರಿದ್ದಾರೆ.

ಗೋವಾ ಮುಖ್ಯಮಂತ್ರಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮತ್ತೂಮ್ಮೆ ತಾವೇ ಖುದ್ದಾಗಿ ಪತ್ರ ಬರೆದು ಜತೆಗೆ ಗೋವಾ ಮುಖ್ಯ ಕಾರ್ಯದರ್ಶಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಕಡೆಯಿಂದ ಪತ್ರ ಬರೆಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜಾಣ್ಮೆಯ ನಡೆ ಅನುಸರಿಸುತ್ತಿದ್ದಾರೆ. ಬಿಜೆಪಿ ಮೇಲೆ ಒತ್ತಡ ಹೇರುವ ತಂತ್ರಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಹಿನ್ನೆಲೆ
2016 ರಲ್ಲಿಯೇ ಮಹದಾಯಿ ನ್ಯಾಯಾಧಿಕರಣದ ನಿರ್ದೇಶನದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವಿಸ್‌ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದರು. ಆದರೆ, ಆ ಸಂದರ್ಭದಲ್ಲಿ ಗೋವಾ ಮುಖ್ಯಮಂತ್ರಿ ಲಕ್ಷ್ಮೀಕಾಂತ್‌ ಪರ್ಸೆಕರ್‌ ಕೊನೆ ಗಳಿಗೆಯಲ್ಲಿ ಸಭೆಗೆ ಹಾಜರಾಗಲು ನಿರಾಕರಿಸಿದ್ದರು. ಹೀಗಾಗಿ ನ್ಯಾಯಾಧೀಕರಣದ ಹೊರಗೆ ಮಾತುಕತೆಯ ಮೂಲಕವೇ ಮಹದಾಯಿ ವಿವಾದ ಬಗೆ ಹರಿಸಿಕೊಳ್ಳುವ ಮೊದಲ ಪ್ರಯತ್ನ ವಿಫ‌ಲವಾಗಿತ್ತು.

ನಂತರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆದು ಮಾತುಕತೆಗೆ ದಿನಾಂಕ ನಿಗದಿ ಮಾಡುವಂತೆ ಪತ್ರ ಬರೆದಿದ್ದರು. ಅಲ್ಲದೇ ರಾಜ್ಯದ ಮುಖ್ಯ ಕಾರ್ಯದರ್ಶಿಯೂ ಗೋವಾ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ದಿನಾಂಕ ನಿಗದಿ ಮಾಡುವಂತೆ ಮನವಿ ಮಾಡಿಕೊಂಡಿದ್ದರು. ಆದರೆ, ಗೋವಾ ಸರ್ಕಾರ ಯಾವುದಕ್ಕೂ ಪ್ರತಿಕ್ರಿಯೆ ನೀಡಿರಲಿಲ್ಲ.

ಡಿಸೆಂಬರ್‌ 20 ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಸಮ್ಮುಖದಲ್ಲಿ ನಡೆದ ಮಾತುಕತೆಯಲ್ಲಿ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪಗೆ ಪತ್ರ ಬರೆದು ಮಾತುಕತೆಯ ಮೂಲಕ ವಿವಾದ ಬಗೆ ಹರಿಸಿಕೊಳ್ಳಲು ಸಹಮತ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ಗೆ ಪತ್ರ ಬರೆದಿದ್ದರು.

ಸಿಎಸ್‌ ಪತ್ರದಲ್ಲೇನಿದೆ
ಮಹದಾಯಿ ಮಾತುಕತೆ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಗೋವಾ ಸರ್ಕಾರದ ಮುಖ್ಯ ಕಾರ್ಯದರ್ಶಿ ಧರ್ಮೆಂದ್ರ ಶರ್ಮಾಗೆ ಪತ್ರ ಬರೆದಿದ್ದು, ಮಾತುಕತೆಗೆ ಶೀಘ್ರವೇ ದಿನಾಂಕ ನಿಗದಿ ಮಾಡುವಂತೆ ಮನವಿ ಮಾಡಿಕೊಂಡಿದ್ದಾರೆ. ಗೋವಾ ಮುಖ್ಯಮಂತ್ರಿಗೆ ಅನುಕೂಲವಾಗುವ ಸ್ಥಳದಲ್ಲಿಯೇ ಮಾತುಕತೆಗೆ ಸ್ಥಳ ನಿಗದಿ ಮಾಡುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ. ಬರ ಪೀಡಿತ ಪ್ರದೇಶದಲ್ಲಿ ಕುಡಿಯುವ ನೀರಿನ ಅಗತ್ಯತೆ ಇರುವುದರಿಂದ ಆದಷ್ಟು ಬೇಗ ಮಾತುಕತೆಯ ದಿನಾಂಕ ನಿಗದಿ ಮಾಡುವಂತೆ ಪತ್ರದಲ್ಲಿ ಕೋರಿದ್ದಾರೆ.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.