ಒಕ್ಕಲಿಗ ಗೌಡ ಸೇ. ಸಂಘದ ವಾರ್ಷಿಕ ಸಮಾವೇಶ


Team Udayavani, Dec 24, 2017, 3:12 PM IST

24-Dec-16.jpg

ಪುತ್ತೂರು: ಪ್ರೀತಿಯೇ ಜಗತ್ತಿನ ಮೂಲ. ಪ್ರೀತಿಯಿಂದಲೇ ಜಗತ್ತು ಮುಂದುವರೆಯುತ್ತದೆ. ಪ್ರೀತಿಯೇ ಜಗತ್ತಿನ ಜೀವ ಎಂಬ ಅರಿವು ಎಲ್ಲರಿಗೂ ಬಂದಾಗ ಜಗತ್ತಿನ ಅಂಧಕಾರ ಸರಿದು ಸಮೃದ್ಧಿಯಾಗುತ್ತದೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ| ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು. ಒಕ್ಕಲಿಗ ಗೌಡ ಸೇವಾ ಸಂಘ ಪುತ್ತೂರು ಇದರ ವತಿಯಿಂದ ಗೌಡ ಸಂಘಗಳ ಸಹಯೋಗದೊಂದಿಗೆ ಶನಿವಾರ ನಡೆದ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ಪ್ರೀತಿ, ನಂಬಿಕೆ, ಶ್ರದ್ಧೆ ಕಳೆದುಕೊಂಡ ಕಾರಣದಿಂದ ಜಗತ್ತು ಇಂದು ಈ ಸ್ಥಿತಿಗೆ ತಲುಪಿದೆ. ಭೀತಿ, ಸ್ವಾರ್ಥ ಇರುವಲ್ಲಿ ಭಯವೂ ಇರುತ್ತದೆ. ಹೃದಯ ಮತ್ತು ಮನಸ್ಸಿನಲ್ಲಿ ಕತ್ತಲಿದ್ದರೆ ಬದುಕಿನಲ್ಲೂ ಕತ್ತಲು ಆವರಿಸುತ್ತದೆ. ಆರಂಭದಲ್ಲಿ ಪ್ರೀತಿಯಿಂದ ನಮ್ಮ ಮನೆಯಲ್ಲಿ ಸ್ವರ್ಗ ಮಾಡಿಕೊಳ್ಳಬೇಕು. ಇದಕ್ಕಾಗಿ ಭಗವಂತನ ಅಸ್ತಿತ್ವದ ನಂಬಿಕೆ, ಸ್ಮರಣೆ ಅತಿ ಅಗತ್ಯ ಎಂದರು.

ಅಧ್ಯಕ್ಷತೆ ವಹಿಸಿದ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಗೌರವಾಧ್ಯಕ್ಷ ಹಾಗೂ ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಮಾತನಾಡಿ, ಆತ್ಮವಿಶ್ವಾಸ, ದೃಢಸಂಕಲ್ಪ, ಕೃತಜ್ಞತಾಭಾವವು ವ್ಯಕ್ತಿಯನ್ನು ಸಮಾಜಕ್ಕೆ ಕೊಡುಗೆಯಾಗಿ ಮಾಡುತ್ತದೆ. ಯಶಸ್ಸು ಎಂಬುದು ವೈಯಕ್ತಿಕ ಬೆಳವಣಿಗೆಯಲ್ಲ. ನಮ್ಮಿಂದ ಸಮುದಾಯ, ಸಮಾಜದ ಬೆಳವಣಿಗೆ ಎಷ್ಟು ಸಾಧ್ಯವಾಗಿದೆ ಎಂಬುದೇ ಯಶಸ್ಸು ಎಂದು ಅಭಿಪ್ರಾಯಿಸಿದರು. ಪುತ್ತೂರು ಸಂಘದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಜ್ಞಾನಸುಧೆ ಬಿಡುಗಡೆ, ವಿದ್ಯಾನಿಧಿಗೆ ಚಾಲನೆ
ಸ್ವಾಮೀಜಿಯವರ ಗ್ರಾಮ ಭೇಟಿ ಕಾರ್ಯಕ್ರಮದ ವರದಿ ಹಾಗೂ ಸಂದೇಶಗಳ ಜ್ಞಾನಸುಧೆ ಪುಸ್ತಕವನ್ನು ಈ ಸಂದರ್ಭ ಬಿಡುಗಡೆ ಮಾಡಲಾಯಿತು. ಯುವ ಗೌಡ ಸಂಘದ ನೇತೃತ್ವದಲ್ಲಿ ಬಡ ವಿದ್ಯಾರ್ಥಿಗಳ ನೆರವಿಗಾಗಿ ಆರಂಭಿಸಲಾದ ವಿದ್ಯಾ ದತ್ತುನಿಧಿಗೆ ಈ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ದತ್ತಿನಿಧಿಗೆ ನೆರವು ನೀಡಿದವರನ್ನು ಶ್ರೀಗಳು ಗೌರವಿಸಿದರು.

ದಶ ಕಾರ್ಯಕ್ರಮಗಳ ಮಾಹಿತಿ
ಒಕ್ಕಲಿಗ ಗೌಡ ಸಮುದಾಯಭವನದ ದಶಮಾನೋತ್ಸವದ ಅಂಗವಾಗಿ 10 ತಿಂಗಳು ಹಮ್ಮಿಕೊಂಡಿರುವ ದಶ ಕಾರ್ಯಕ್ರಮಗಳ ಕುರಿತು ಸಮುದಾಯ ಭವನ ದಶಮಾನೋತ್ಸವ ಸಮಿತಿ ಅಧ್ಯಕ್ಷ ಸಂಜೀವ ಮಠಂದೂರು ಮಾಹಿತಿ ನೀಡಿದರು. ಮಹಿಳಾ ಗೌಡ ಸಂಘದ ವತಿಯಿಂದ ಮಹಿಳಾ ಸಾಧಕರಿಗೆ ಗೌರವಾರ್ಪಣೆ ನಡೆಯಿತು. ಉತ್ತಮ ಕಾರ್ಯನಿರ್ವಹಣೆ ತೋರಿದ ಒಕ್ಕಲಿಗ ಸ್ವಸಹಾಯ ಸಂಘಗಳಿಗೆ ಅಭಿನಂದನೆ ಸಲ್ಲಿಸಲಾಯಿತು.

ಮುಖ್ಯ ಅತಿಥಿಯಾಗಿದ್ದ ಸುಳ್ಯ ಅಕಾಡೆಮಿ ಆಫ್‌ ಲಿಬರಲ್‌ ಎಜುಕೇಶನ್‌ನ ಅಧ್ಯಕ್ಷ ಡಾ| ಕೆ.ವಿ. ಚಿದಾನಂದ ಅವರು, ಪುತ್ತೂರು ಗೌಡ ಸಂಘಗಳ ಕಾರ್ಯಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಒಕ್ಕಲಿಗ ಗೌಡ ಸೇವಾ ಸಂಘ ಸಲಹಾ ಸಮಿತಿಯ ಅಧ್ಯಕ್ಷ ಚಿದಾನಂದ ಬೈಲಾಡಿ, ಗೌಡ ಸೇವಾ ಸಂಘದ ನಿಕಟಪೂರ್ವ ಅಧ್ಯಕ್ಷ ಗಂಗಾಧರ ಗೌಡ ಕೆಮ್ಮಾರ, ಯುವ ಗೌಡ ಸಂಘದ ಅಧ್ಯಕ್ಷ ಪುರುಷೋತ್ತಮ ಮುಂಗ್ಲಿಮನೆ, ಪ್ರಧಾನ ಕಾರ್ಯದರ್ಶಿ ರಾಧಾಕೃಷ್ಣ ನಂದಿಲ, ಮಹಿಳಾ ಸಂಘದ ಅಧ್ಯಕ್ಷೆ ಯಶೋದಾ ಕೆ. ಗೌಡ, ಪ್ರ. ಕಾರ್ಯದರ್ಶಿ ಜಯಂತಿ ಆರ್‌. ಗೌಡ, ಒಕ್ಕಲಿಗ ಸ್ವಸಹಾಯ ಟ್ರಸ್ಟ್‌ ಅಧ್ಯಕ್ಷ ಎ.ವಿ. ನಾರಾಯಣ, ದಿವ್ಯಪ್ರಸಾದ್‌ ಉಪಸ್ಥಿತರಿದ್ದರು.

ಗೌಡ ಸಂಘದ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ ಸ್ವಾಗತಿಸಿ, ಗೌರವಾಧ್ಯಕ್ಷ ಚಿದಾನಂದ ಬೈಲಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ಮನೋಹರ್‌ ಕೆ.ವಿ. ವಂದಿಸಿದರು. ವಸಂತ ಕುಮಾರ್‌ ವೀರಮಂಗಲ ಹಾಗೂ ಉದಯ ಕುಮಾರ್‌ ನಿರ್ವಹಿಸಿದರು. ಬೆಳಗ್ಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಂಸ್ಕೃತಿಕ ವೈಭವ ನಡೆಯಿತು.

ಗುರುವಿಗೆ ಪರಮೋಚ್ಛ ಸ್ಥಾನ 
ಶ್ರೀ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಿ, ಗುರುವಿಗೆ ಪರಮೋತ್ಛ ಸ್ಥಾನವನ್ನು ನಮ್ಮ ಸಮಾಜ ನೀಡಿದೆ. ಮನುಷ್ಯನನ್ನು ಅಂತರಂಗದ ಶುದ್ಧ ಭಾವಕ್ಕೆ ಕೊಂಡೊಯ್ಯುವುದು ಗುರು. ಗುರುಗಳು ಗ್ರಾಮ ಭೇಟಿಯ ಮೂಲಕ ನೀಡಿದ ಸಂದೇಶಗ ಳೊಂದಿಗೆ ಮನೆ ಮನೆಗಳನ್ನು ಪರಿವರ್ತಿಸುವಲ್ಲಿ ಜ್ಞಾನಸುಧೆ ಪುಸ್ತಕ ಸಹಕಾರಿಯಾಗಿದೆ ಎಂದರು.

ಟಾಪ್ ನ್ಯೂಸ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.