ಮಹದಾಯಿ: ಪರಿಕ್ಕರ್‌ ರಿಂದ ಸಣ್ಣತನದ ರಾಜಕಾರಣ


Team Udayavani, Dec 24, 2017, 5:32 PM IST

tmk.jpg

ಕುಣಿಗಲ್‌: ಮಹದಾಯಿ ನೀರನ್ನು ರಾಜ್ಯಕ್ಕೆ ಹರಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಗೋವಾ ಮುಖ್ಯಮಂತ್ರಿ ಪರಿಕ್ಕರ್‌ ಪತ್ರ ಬರೆಯುವ ಮೂಲಕ ಸಣ್ಣತನದ ರಾಜಕಾರಣ ಪ್ರದರ್ಶಿಸಿದ್ದಾರೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಕಿಡಿಕಾರಿದರು.

ಪಟ್ಟಣದಲ್ಲಿ ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ರೈತ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ರಾಗಿ ಬೀಸುವ ಕಲ್ಲಿಗೆ ರಾಗಿ ಸುರಿಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಪತ್ರ ಅಗತ್ಯವಿರಲಿಲ್ಲ: ಮಹದಾಯಿ ನೀರಿಗಾಗಿ ಒತ್ತಾಯಿಸಿ ಆ ಭಾಗದ ರೈತರು ಕಳೆದ 843 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸ್ಪಂದಿಸದ ಗೋವಾ ಸರ್ಕಾರ, ಈಗ ಕರ್ನಾಟಕದಲ್ಲಿ ಚುನಾವಣೆ ಹತ್ತಿರ ಬರುತ್ತಿರುವುದ್ದ ರಿಂದ ರಾಜಕೀಯ ಲಾ¸‌ ಪಡೆಯಲು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆಯುವ ಅಗತ್ಯ ಏನಿತ್ತು ಎಂದು ಅವರು ಪ್ರಶ್ನಿಸಿದರು.

ಗೋವಾ ಮುಖ್ಯಮಂತ್ರಿ ಪರಿಕ್ಕರ್‌ ಮತ್ತು ಯಡಿಯೂರಪ್ಪ ಅವರ ರಾಜಕೀಯ ದೊಂಬರಾಟವನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ. ನೀರು ಕೊಡುವ ಭರವಸೆ ನೀಡುವ ಪತ್ರ ನೀಡಿದ ತಕ್ಷಣ ರಾಜ್ಯಕ್ಕೆ ಪರಿಕ್ಕರ್‌ ನೀರು ಹರಿಸುತ್ತಾರೆಯೇ? ಹಾಗಿದ್ದರೆ ಅವರು ಕಾನೂನಿನ ಪ್ರಕಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಏತಕ್ಕಾಗಿ ಪತ್ರ ಬರೆದು ತಿಳಿಸಲಿಲ್ಲ ಎಂದು ಪ್ರಶ್ನಿಸಿದರು.

ದಿಕ್ಕು ತಪ್ಪಿಸುವ ಯತ್ನ: ಯಡಿಯೂರಪ್ಪ ಅವರಿಗೆ ಇಂತಹ ನೂರು ಪತ್ರಗಳನ್ನು ಪರಿಕ್ಕರ್‌ ಬರೆದರೂ ಅದರಿಂದ ಯಾವುದೇ ಪ್ರಯೋಜನವಿಲ್ಲ. ಜನರನ್ನು ದಿಕ್ಕು ತಪ್ಪಿಸಲು ಮಾಡುತ್ತಿರುವ ರಾಜಕೀಯ ಗಿಮಿಕ್‌ ಇದು ಎಂದು ಅವರು ಲೇವಡಿ ಮಾಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಸಾಲವನ್ನು ಮನ್ನಾ ಮಾಡಲು ವಿಫ‌ಲವಾಗಿವೆ. ಕೇಂದ್ರ ಸರ್ಕಾರ ರೈತರ ಬಗ್ಗೆ ಕಿಂಚಿತ್ತೂ ಗಮನವಿಲ್ಲ. ಅದೇನಿದ್ದರೂ ಕಾರ್ಪೊರೇಟ್‌ ಕುಳಗಳ ಪರವಾದ ನಿಲುವು ಎಂದು ಅವರು ಆರೋಪಿಸಿದರು.

ರೈತ ಸಂಘ ಗೆಲ್ಲಿಸಿ: ಮುಂಬರುವ ಚುನಾವಣೆಯಲ್ಲಿ ಕನಿಷ್ಟ 10-15 ರೈತ ಸಂಘದ ಶಾಸಕರನ್ನು ಗೆಲ್ಲಿಸಿದರೆ ಸರ್ಕಾರವನ್ನು ಅಲುಗಾಡಿಸುತ್ತೇವೆ. ತುಮಕೂರು ಜಿಲ್ಲೆಯ ಕುಣಿಗಲ್‌ ಮತ್ತು ಚಿಕ್ಕನಾಯಕನಹಳ್ಳಿ ಯಿಂದ ರೈತ ಸಂಘದ ಶಾಸಕರನ್ನು ಗೆಲ್ಲಿಸಿಕೊಡುವಂತೆ ಅವರು ಮನವಿ ಮಾಡಿದರು.

ಈ ದೇಶದಲ್ಲಿ ರಾಜ್ಯ ಪ್ರಶಸ್ತಿ, ರಾಷ್ಟ್ರ ಪ್ರಶಸ್ತಿ, ಪದ್ಮ ಭೂಷಣ ಪ್ರಶಸ್ತಿಗಳನ್ನು ಕೊಡಲಾಗುತ್ತದೆ. ಆದರೆ, ಇಡೀ ದೇಶಕ್ಕೆ ಅನ್ನ ಹಾಕುತ್ತಿರುವ ಉತ್ತರ ರೈತರಿಗೆ ಯಾವ ಪ್ರಶಸ್ತಿಗಳನ್ನೂ ನೀಡುತ್ತಿಲ್ಲ. ಸರ್ಕಾರ ಈ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದರು. 

ರೈತ ಸಂಘದ ಜಿಲ್ಲಾಧ್ಯಕ್ಷ ಆನಂದ್‌ ಪಟೇಲ್‌, ಸಂಘದ ತಾಲೂಕು ಅಧ್ಯಕ್ಷ ಅನಿಲ್‌ಕುಮಾರ್‌, ರಾಜ್ಯ ಕಾರ್ಯದರ್ಶಿ ಕೆಂಕೆರೆ ಸತೀಶ್‌, ಜಿಲ್ಲಾ ಗೌರವಾಧ್ಯಕ್ಷ ಧನಂಜಯಾರಾಧ್ಯ, ಹುಣಸೂರು ಘಟಕದ ತಾಲೂಕು ಅದ್ಯಕ್ಷ ಬೆಟ್ಟೇಗೌಡ, ವಿದ್ಯಾರ್ಥಿ ರೈತ ಸಂಘದ ಅಧ್ಯಕ್ಷ ಲಕ್ಷ್ಮಣ್‌ಗೌಡ, ಚಕ್ರವರ್ತಿ ಲೋಕೇಶ್‌, ಕಾರ್ಯದರ್ಶಿ ವೆಂಕಟೇಶ್‌, ರಮೇಶ್‌, ದಿವಂಗತ ಡಿ.ಕೆ.ರವಿ ತಂದೆ ಕರಿಯಪ್ಪ, ತಾಯಿ ಗೌರಮ್ಮ ಮತ್ತಿತರರು ಹಾಜರಿದ್ದರು.

ಮಧುಗಿರಿಯಲ್ಲಿ ರೈತ ದಿನಾಚರಣೆ
ಮಧುಗಿರಿ: ಪ್ರಸ್ತುತ ರೈತರು ಅನುಭವಿಸುತ್ತಿರುವ ಸಮಸ್ಯೆ ಪರಿಹಾರಕ್ಕೆ ರೈತಸಂಘ ಮಾತ್ರ ಶ್ರಮಿಸುತ್ತಿದ್ದು, ರಾಷ್ಟ್ರೀಯ ಪಕ್ಷಕ್ಕೆ ಸೀಮಿತರಾದ ನಾವುಗಳು ಇಂದು ರೈತರ ಸಮಸ್ಯೆಯ ಬಗ್ಗೆ ಮಾತಾಡಲು ಆಗುತ್ತಿಲ್ಲ ಎಂದು ಜಿ.ಪಂ. ಸದಸ್ಯ ಜಿ.ಜೆ.ರಾಜಣ್ಣ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಜಿಪಂ, ತಾಪಂ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ಮಾಜಿಪ್ರಧಾನಿ ದಿ.ಚೌದರಿ ಚರಣ್‌ಸಿಂಗ್‌ ಜಯಂತಿಯ ಅಂಗವಾಗಿ ನಡೆದ ರೈತ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ನಾವು ರಾಷ್ಟ್ರೀಯ ಪಕ್ಷದವರಾಗಿದ್ದು ರೈತರ ಸಮಸ್ಯೆ ಪರಿಹರಿಸಲು ಅಸಹಾಯಕರಾಗಿದ್ದೇವೆ.

ತಾಲೂಕಿನಲ್ಲಿ ರೈತರ ಜಮೀನಿನಲ್ಲಿ ಹಾದು ಹೋಗಿರುವ ವಿದ್ಯುತ್‌ ಕಂಬಗಳ ಪ್ರಕರಣಕ್ಕೆ ಪರಿಹಾರ ಕೊಡಿಸಲು ನಮ್ಮಿಂದಾಗಲಿಲ್ಲ. ಆದರೆ ರೈತಸಂಘ ಹೋರಾಟದಿಂದ ಈಗಾಗಲೇ ರೂ.5 ಕೋಟಿಯಷ್ಟು ಹಣವನ್ನು ರೈತರಿಗೆ ಕೊಡಿಸಿದ್ದು ಸಾಮಾನ್ಯ ಕೆಲಸವಲ್ಲ. ರೈತರು ಸಹ ಪುರಾತನ ಬೆಳೆ ಪದ್ದತಿಗೆ ಮಾರುಹೋಗದೆ ಸಾವಯವ ಪದ್ದತಿಯಲ್ಲಿ ಮಿಶ್ರ ಬೆಳೆಗಳನ್ನು ಬೆಳೆದು, ಆರ್ಥಿಕವಾಗಿ ಅಭಿವೃದ್ದಿಯಾಗಬೇಕು ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪರಶುರಾಮ್‌ ಪ್ರಾಸ್ತಾವಿಕವಾಗಿ ಮಾತಾಡಿ, ಪ್ರಸ್ತುತ ವರ್ಷದಿಂದ ಸಿರಿಧಾನ್ಯ ಬೆಳೆಯಲು ಹಾಗೂ ಕಟಾವು ಮಾಡಲು ಎಕರಗೆ 2500 ಸಾವಿರ ಸಹಾಯಧನ ನೀಡಲು ಉದ್ದೇಶಿಸಿದೆ. ತಾಲೂಕಿನಲ್ಲಿ 500 ಹೆಕ್ಟೇರ್‌ ಸಿರಿಧಾನ್ಯ ಬೆಳೆಯಲಾಗುತ್ತಿದ್ದು, ರೈತರಿಗೆ ವಿವಿಧ ಅನುದಾನದಲ್ಲಿ ರೂ.5 ಲಕ್ಷದವರೆಗೂ ಸಹಾಯಧನ ಲಭ್ಯ. ತಾಲೂಕಿನ 3 ಹೋಬಳಿಯಲ್ಲಿ ಕೃಷಿಯಂತ್ರಧಾರೆ ಸ್ಥಾಪಿಸಿ ಯಂತ್ರಗಳನ್ನು ಬಾಡಿಗೆ ನೀಡಲಾಗುತ್ತಿದೆ ಎಂದರು. 

 ಕಾರ್ಯಕ್ರಮದಲ್ಲಿ ರೇಷ್ಮೇ, ಮೀನುಗಾರಿಕೆ ಹಾಗೂ ತೋಟಗಾರಿಕೆ ಇಲಾಖೆಗಳ ಸೌಲಭ್ಯಗಳ ಕುರಿತು ಆಯಾ ಅಧಿಕಾರಿಗಳು ಮಾಹಿತಿ ನೀಡಿದರು. 15 ಎಕರೆ ಪ್ರದೇಶದಲ್ಲಿ ಸಿರಿಧಾನ್ಯ ಬೆಳೆದ ಎಪಿಎಂಸಿ ಅಧ್ಯಕ್ಷ ಪಿ.ಟಿ.ಗೋವಿಂದಪ್ಪನವರನ್ನು ಸನ್ಮಾನಿಸಲಾಯಿತು.

ತಾ.ಪಂ. ಉಪಾಧ್ಯಕ್ಷ ಲಕ್ಷ್ಮೀನರಸಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮಣ್ಣ, ಸದಸ್ಯ ದೊಡ್ಡಯ್ಯ, ಗೋಪಾಲಯ್ಯ, ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ರಂಗಸ್ವಾಮಿ, ತಾಲೂಕು ಅಧ್ಯಕ್ಷ ಗೋವಿಂದರೆಡ್ಡಿ, ಸದಸ್ಯ ಮುದ್ದಹರಿಯಪ್ಪ, ರೈತಸಂಘದ ದೊ

ಟಾಪ್ ನ್ಯೂಸ್

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ

veerappa-moily

Prajwal case; ಪಾತ್ರ ಯಾರದ್ದು ಮುಖ್ಯವಲ್ಲ; ಅಭಿನಯ ಮಾಡಿದ್ದು ಮುಖ್ಯ; ವೀರಪ್ಪ ಮೊಯ್ಲಿ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !

Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi: ಪರಿಸರ ಸ್ನೇಹಿ ಸಿಎನ್‌ಜಿ ಬಸ್‌ ಸಂಚಾರ-ಸಿಎನ್‌ಜಿ ಲಭ್ಯತೆ ಸಮಸ್ಯೆ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

ಬರಪೀಡಿತ ಪಟ್ಟಿಯಲ್ಲಿ ಸೇರಿದ ಕಾರ್ಕಳಕ್ಕೆ 152 ಕೆರೆಗಳೇ ಶ್ರೀರಕ್ಷೆ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

Davanagere; ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರಿಗೆ ಮಾತೃ ವಿಯೋಗ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.