ನಾವು ಸಂವಿಧಾನ ಬದಲಿಸಲು ಬಂದಿದ್ದೇವೆ: ಅನಂತಕುಮಾರ ಹೆಗಡೆ
Team Udayavani, Dec 25, 2017, 6:20 AM IST
ಕೊಪ್ಪಳ: ಜಾತ್ಯತೀತವನ್ನು ಒಪ್ಪಿಕೊಳ್ಳಬೇಕು ಎಂದು ಸಂವಿಧಾನ ಹೇಳಿದೆ. ಆದರೆ ಕಾಲಕ್ಕೆ ತಕ್ಕಂತೆ ಸಂವಿಧಾನ ಬದಲಾಗಿದೆ. ಮುಂದೆಯೂ ಬದಲಾಗುತ್ತೆ. ನಾವು ಸಂವಿಧಾನ ಬದಲಾಯಿಸಲು ಬಂದಿದ್ದೇವೆ. ಅದರಂತೆ ಸಂವಿಧಾನ ಬದಲಿಸುತ್ತೇವೆ ಎನ್ನುವ ಮೂಲಕ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತಕುಮಾರ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಜಿಲ್ಲೆಯ ಕುಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮದಲ್ಲಿ ಸಂವಿಧಾನದ ಬಗ್ಗೆ ಮಾತನಾಡಿದ ಅವರು, ಹಿಂದುತ್ವಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ನಾನೊಬ್ಬ ಹಿಂದೂ, ನಾನೊಬ್ಬ ಕ್ರೈಸ್ತ, ನಾನೊಬ್ಬ ಮುಸ್ಲಿಂ, ನಾನೊಬ್ಬ ಲಿಂಗಾಯತ ಎಂದರೆ ನನ್ನದು ಯಾವುದೇ ತಕರಾರಿಲ್ಲ. ಆದರೆ ನಾನೊಬ್ಬ ಜಾತ್ಯತೀತ ಎಂದರೆ ನನಗೆ ಆಗಲ್ಲ. ದೇಶದಲ್ಲಿ ಪ್ರಸ್ತುತ ಜಾತ್ಯತೀತ ಸಂಪ್ರದಾಯ ಬಂದಿದೆ. ನಾವು ಜಾತ್ಯತೀತರು ಎನ್ನುವವರು ತಮ್ಮ ಅಪ್ಪ-ಅಮ್ಮನ ರಕ್ತದ ಪರಿಚಯ ಇಲ್ಲದಂತೆ ಕಾಣುತ್ತದೆ. ಅವರ ರಕ್ತದ ಬಗ್ಗೆ ನನಗೆ ಸ್ವಲ್ಪ ಸಂಶಯ ಬರುತ್ತಿದೆ. ಅವರಿಗೆ ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ಪರಿಚಯವಿದ್ದಂತೆ ಕಾಣುತ್ತಿಲ್ಲ. ಆ ನನ್ನ ಮಕ್ಕಳಿಗೆ ಎನ್ನುವ ಪದ ಬಳಸುವ ಮೂಲಕ ಜಾತ್ಯತೀತರ ವಿರುದ್ಧ ಹರಿಹಾಯ್ದರು.
ದೇಶದ ಸಂವಿಧಾನವು ಜಾತ್ಯತೀತವನ್ನು ಒಪ್ಪಿಕೊಳ್ಳಬೇಕು ಎಂದು ಹೇಳಿದೆ. ಆದರೆ ಸ್ಮೃತಿಗಳು, ಶಾಸನಗಳು, ಸಂವಿಧಾನ ಕಾಲ ಕಾಲಕ್ಕೆ ತಕ್ಕಂತೆ ಬದಲಾಗಿದೆ. ಪ್ರಸ್ತುತ ದೇಶದಲ್ಲಿ ಅಂಬೇಡ್ಕರ್ ಸ್ಮೃತಿಯಿದೆ. ಮುಂದೆ ಸಂವಿಧಾನ ಬದಲಾಗುತ್ತೆ. ನಾವು ಸಂವಿಧಾನ ಬದಲಿಸಲು ಬಂದಿದ್ದು. ಅದಕ್ಕೆ ಬದ್ಧರಾಗಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ