ಮಹದಾಯಿ ಧರಣಿ; ಬಿಎಸ್ ವೈ ಸಂಧಾನ ವಿಫಲ, ರೈತರ ಆಕ್ರೋಶ
Team Udayavani, Dec 26, 2017, 5:49 PM IST
ಬೆಂಗಳೂರು: ಮಹದಾಯಿ ಕಳಸಾ ಬಂಡೂರಿ ಯೋಜನೆ ವಿಚಾರದಲ್ಲಿ ಬಿಜೆಪಿ ಕಚೇರಿ ಮುಂದೆ ಬುಧವಾರ ಹೈಡ್ರಾಮಾ ನಡೆಯಿತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಖಡಕ್ ಸೂಚನೆ ಬಳಿಕ ಮಹದಾಯಿ ಹೋರಾಟಗಾರರನ್ನು ಭೇಟಿಯಾಗಿ ಸಂಧಾನ ಮಾತುಕತೆ ನಡೆಸಿದರೂ ಕೂಡಾ ವಿಫಲವಾಗಿದೆ.
ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಮಹದಾಯಿ ಹೋರಾಟಗಾರರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಭೇಟಿಯಾಗಿದ್ದರು.
ಬಿಎಸ್ ವೈ ಸಂಧಾನ ವಿಫಲ:
ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರೇಶ್ ಸೊಬರದಮಠ ಅವರಲ್ಲಿ ಬಿಎಸ್ ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ ಅವರು ಸುಮಾರು 10 ನಿಮಿಷಗಳ ಕಾಲ ಚರ್ಚೆ ನಡೆಸಿದರು, ಆದರೆ ಯಡಿಯೂರಪ್ಪನವರ ಸಂಧಾನಕ್ಕೆ ರೈತರು ಬಗ್ಗಿಲ್ಲ. ಕೊನೆಗೂ ಸಂಧಾನ ವಿಫಲವಾದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಕೈಮುಗಿದು ಪ್ರತಿಭಟನಾ ಸ್ಥಳದಿಂದ ನಿರ್ಗಮಿಸಿದ್ದರು. ಬಿಎಸ್ ವೈ ಜತೆಗಿನ ಚರ್ಚೆ ಬಳಿಕ ಮಹದಾಯಿ ಹೋರಾಟಗಾರರು ಕಣ್ಣೀರು ಹಾಕಿದರು, ಅಲ್ಲದೇ ಧರಣಿ ನಿರತರು ಬಿಜೆಪಿ ವಿರುದ್ಧ ಬಾಯಿಬಡಿದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.
ಯಡಿಯೂರಪ್ಪ ನಾ ಹಾಗೇ ಹೇಳಿಯೇ ಇಲ್ಲ ಅಂದ್ರು!
ಮಹದಾಯಿ ಹೋರಾಟಗಾರರ ಜತೆ ಸಂಧಾನ ವಿಫಲವಾದ ಬಳಿಕ ವೀರೇಶ್ ಸೊಬರದಮಠ ಸುದ್ದಿಗಾರರ ಜತೆ ಮಾತನಾಡಿ, 15 ದಿನದೊಳಗೆ ಮಹದಾಯಿ ವಿವಾದ ಬಗೆಹರಿಸುವುದಾಗಿ ಹೇಳಿದ್ದೀರಿ. ಅದರ ಆದೇಶ ಪ್ರತಿಯನ್ನು ಕೊಡಿ ಎಂದಾಗ, ಅದೆಲ್ಲಾ ನಮ್ಮಿಂದ ಆಗಲ್ಲ. ಇದೇ ಪತ್ರವನ್ನು ತೆಗೆದುಕೊಳ್ಳಿ ಎಂದು ಹೇಳಿದರು, ಅದಕ್ಕೆ ನಾವು ಒಪ್ಪಿಲ್ಲ. ಅಲ್ಲದೇ ನಾ ಇತ್ಯರ್ಥಪಡಿಸುತ್ತೇನೆ ಎಂದು ಹೇಳಿಯೇ ಇಲ್ಲ ಎಂದು ಸುಳ್ಳು ಹೇಳಿದರು ಎಂಬುದಾಗಿ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ