ಲ್ಯಾಪ್‌ಟಾಪ್‌, ಅಂಕಪಟ್ಟಿಯಲ್ಲಿ ಅವ್ಯವಹಾರ ನಡೆದಿಲ್ವಂತೆ !


Team Udayavani, Dec 28, 2017, 9:24 AM IST

28-11.jpg

ಕೊಪ್ಪಳ: ಕಳೆದ ಕೆಲವು ತಿಂಗಳಿಂದ ಲ್ಯಾಪ್‌ಟಾಪ್‌, ಅಂಕಪಟ್ಟಿ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎನ್ನುವುದು ಭಾರಿ ಸುದ್ದಿಯಾಗಿತ್ತು. ಆದರೆ ಇವೆರಡಲ್ಲೂ ಯಾವುದೇ ಅವ್ಯವಹಾರ ನಡೆದಿಲ್ಲ ಎನ್ನುವ ಅಚ್ಚರಿಯ ಮಾಹಿತಿ ಹೊರಬಿದ್ದಿದೆ. ಕಾಲೇಜು ಶಿಕ್ಷಣ ಇಲಾಖೆಯೇ ಸ್ವತಃ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಈ ಕುರಿತು ಸ್ವತಃ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರೇ
ದಾಖಲೆಗಳನ್ನು ಬಿಡುಗಡೆ ಮಾಡಿದ್ದಾರೆ.

ಉನ್ನತ ಶಿಕ್ಷಣ ಇಲಾಖೆಯು ಪದವಿ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ವಿತರಣೆ ಮಾಡಬೇಕೆನ್ನುವ ಯೋಜನೆ ಆರಂಭಿಸಿತು. ಆದರೆ ಲ್ಯಾಪ್‌ಟಾಪ್‌ ಟೆಂಡರ್‌ ಕರೆಯುವ ಮುನ್ನವೇ ಅಕ್ರಮ ನಡೆದಿದೆ ಎನ್ನುವ ಕೂಗು ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ವಾಗ್ಧಾಳಿಗೆ ಸಿಲುಕಿದ ಸರ್ಕಾರ ತನಿಖೆಗೆ ಸದನ ಸಮಿತಿಗೆ ವಹಿಸಿತ್ತು. ತನಿಖೆಗೆ ರಚಿಸಿದ್ದ ಸದನ ಸಮಿತಿಯೇ ಈಗ ಲ್ಯಾಪ್‌ಟಾಪ್‌ ಖರೀದಿಗೆ ಹಸಿರು ನಿಶಾನೆ ತೋರಿದೆ. 1.5 ಲಕ್ಷ ಲ್ಯಾಪ್‌ಟಾಟ್‌ಗಳ ಖರೀದಿಗೆ ಟೆಂಡರ್‌ ಪ್ರಕ್ರಿಯೆ ಆರಂಭಿಸಿ, 45 ದಿನದೊಳಗೆ ಲ್ಯಾಪ್‌ಟಾಪ್‌ ನೀಡಬೇಕು ಎಂದು ಕಟ್ಟಾಜ್ಞೆ ಮಾಡಿದೆ.

9 ಕೋಟಿ ರೂ. ಉಳಿತಾಯ: ನೈಜವಾಗಿ ದಾಖಲೆಗಳ ಪ್ರಕಾರ ಲ್ಯಾಪ್‌ ಟಾಪ್‌ ಖರೀದಿಯಲ್ಲಿ ಸರ್ಕಾರಕ್ಕೆ 9 ಕೋಟಿ ಉಳಿತಾಯ  ವಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಹೇಳುತ್ತಿದೆ ಎಂದು ಸ್ವತಃ ಸಚಿವ ಬಸವರಾಜ ರಾಯರಡ್ಡಿ ಅವರೇ ಒಪ್ಪಿಕೊಂಡಿದ್ದಾರೆ. ಕಾಲೇಜು ಶಿಕ್ಷಣ ಇಲಾಖೆ ಲ್ಯಾಪ್‌ಟಾಪ್‌ ಖರೀದಿಗೆ 14,500 ರೂ.ಗೆ ಏಜೆನ್ಸಿ ನೀಡಿದ್ದರೆ, ಅದೇ ಲ್ಯಾಪ್‌ಟಾಪ್‌ಅನ್ನು ತಾಂತ್ರಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ನೀಡಲು 17,500 ರೂ. ದರವನ್ನು ಏಜೆನ್ಸಿ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ, ಒಂದೇ ಲ್ಯಾಪ್‌ಟಾಪ್‌ನಲ್ಲಿ ದರದಲ್ಲಾದ ವ್ಯತ್ಯಾಸ ಗಮನಿಸಿ, ತಾಂತ್ರಿಕ ಶಿಕ್ಷಣ ವಿದ್ಯಾರ್ಥಿಗಳಿಗೆ ಕರೆದಿದ್ದ ಟೆಂಡರ್‌ ರದ್ದು ಮಾಡಿ ಕೇವಲ 14,500 ರೂ.ಗೆ ಖರೀದಿಸಿದೆ. ದಾಖಲೆಗಳ ಪ್ರಕಾರ, ಸರ್ಕಾರಕ್ಕೆ ಬರೊಬ್ಬರಿ 9 ಕೋಟಿ ರೂಪಾಯಿ ಉಳಿತಾಯವಾಗಿದೆ ಎಂದು ಸಚಿವರೇ ಒಪ್ಪಿಕೊಳ್ಳುತ್ತಿದ್ದಾರೆ.

ಅಂಕಪಟ್ಟಿಯಲ್ಲೂ ಉಳಿತಾಯ: ವಿವಿಧ ವಿಶ್ವ ವಿದ್ಯಾಲಯಗಳು ಅಂಕಪಟ್ಟಿಗಳಿಗಾಗಿ ಮುದ್ರಣ ಕಾಗದ ಖರೀದಿ ಮಾಡುವ ವೇಳೆ ದರದಲ್ಲಿ ವ್ಯತ್ಯಾಸವಿತ್ತು. ವಿವಿಗಳು ಬೇಕಾಬಿಟ್ಟಿ ದರದಲ್ಲಿ ಖರೀದಿ ಮಾಡುತ್ತಿದ್ದವು. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ನಿಗಾ ವಹಿಸಿ ಮುದ್ರಣ ಕಾಗದ ಖರೀದಿ ತಡೆದು ಎಂಎಸ್‌ಐಎಲ್‌ ಮೂಲಕ ಖರೀದಿಗೆ ಆದೇಶ ಹೊರಡಿಸಿತ್ತು. ಆದೇಶ ಹೊರ ಬೀಳುತ್ತಿದ್ದಂತೆ ವಿವಿಗಳಿಗೆ ಇದು ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ಮೊದಲು ವಿವಿಗಳು ಖರೀದಿ ಮಾಡುತ್ತಿದ್ದ ಮುದ್ರಣ ಕಾಗದ ಹಾಗೂ ಎಂಎಸ್‌ಐಎಲ್‌ನ ದರಪಟ್ಟಿ ಗಮನಿಸಿದಾಗ, ವ್ಯತ್ಯಾಸ ಕಂಡು ಬಂದಿದೆ. ಇದರಿಂದಲೂ ಸರ್ಕಾರಕ್ಕೆ 2 ಕೋಟಿ ರೂ. ಉಳಿತಾಯವಾಗಿದೆ. ಕಡಿಮೆ ದರವಿರದಿದ್ದರೂ ಹೆಚ್ಚಿನ ದರದಲ್ಲಿ ವಿವಿಧ ವಿವಿಗಳು ಮುದ್ರಣ ಕಾಗದ ಖರೀದಿಸಿವೆ ಎನ್ನುವುದು ಎಂಎಸ್‌ಐಎಲ್‌ನ ನಿಖರ ದಾಖಲೆಗಳ ಲೆಕ್ಕಾಚಾರದಲ್ಲಿ ಸತ್ಯ ಬೆಳಕಿಗೆ ಬಂದಿದೆ.

ಲ್ಯಾಪ್‌ಟಾಪ್‌ ಹಾಗೂ ಅಂಕಪಟ್ಟಿಯ ಮುದ್ರಣ ಕಾಗದ ಖರೀದಿಯಲ್ಲಿ ಯಾವುದೇ ಅಕ್ರಮವಾಗಿಲ್ಲ. ಎಂಎಸ್‌ಐಲ್‌ ಮೂಲಕ ಖರೀದಿಯಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ಉಳಿತಾಯವಾಗಿದೆ. ಈ ಕುರಿತು ಎಂಎಸ್‌ಐಎಲ್‌ ಮತ್ತು ಶಿಕ್ಷಣ ಇಲಾಖೆ ನೀಡಿದ ವರದಿಯಲ್ಲಿಯೇ ಗೊತ್ತಾಗಿದೆ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಲ್ಯಾಪಾಟಾಪ್‌ ವಿತರಣೆ ಮಾಡಬೇಕಿರುವುದರಿಂದ ಟೆಂಡರ್‌ ಕರೆಯಲಾಗಿದೆ.
 ●ಬಸವರಾಜ ರಾಯರಡ್ಡಿ, ಉನ್ನತ ಶಿಕ್ಷಣ ಸಚಿವ

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.