ಆಟೋ ರಿಕ್ಷಾಕ್ಕೆ ಸಾರಿಗೆ ಬಸ್ಸು ಢಿಕ್ಕಿ: 4 ವಿದ್ಯಾರ್ಥಿಗಳ ಸಾವು


Team Udayavani, Dec 28, 2017, 12:18 PM IST

Auto-Bus-collide-700.jpg

ಅಮರಾವತಿ : ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ರೇಪಾಡು ಗ್ರಾಮದಲ್ಲಿ ಇಂದು ಬೆಳಗ್ಗೆ ರಾಜ್ಯ ಸರಕಾರಿ ಸಾರಿಗೆ ಬಸ್ಸೊಂದು ಆಟೋ ರಿಕ್ಷಾಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ 10ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಮತ್ತು ಓರ್ವ ಆಟೋ ಡ್ರೈವರ್‌ ಸ್ಥಳದಲ್ಲೇ ಮೃತಪಟ್ಟು ಇತರ ಮೂವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡರು.

ದಟ್ಟನೆಯ ಮಂಜು ಮುಸುಕಿದ ರಸ್ತೆಯಲ್ಲಿ ಶ್ರೀಶೈಲಂ ಗೆ ಹೋಗುತ್ತಿದ್ದ ರಾಜ್ಯ ಸಾರಿಗೆ ಬಸ್ಸು ವಿದ್ಯಾರ್ಥಿಗಳನ್ನು ಶಾಲೆಗೆ ಒಯ್ಯುವ ಆಟೋ ರಿಕ್ಷಾಗೆ ಮುಖಾಮುಖೀ ಢಿಕ್ಕಿ ಹೊಡೆಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪೇರಚೇರ್ಲಾ ಎಂಬಲ್ಲಿನ ತಮ್ಮ ಶಾಲೆಗೆ ಎಂದಿನಂತೆ ರಿಕ್ಷಾದಲ್ಲಿ ನತದೃಷ್ಟ ವಿದ್ಯಾರ್ಥಿಗಳು ಹೋಗುತ್ತಿದ್ದಾಗ ಈ ದಾರುಣ ಅವಘಡ ಸಂಭವಿಸಿತು. ದಟ್ಟನೆಯ ಮಂಜಿನಿಂದಾಗಿ ಗೋಚರಣೆ ತುಂಬಾ ಕ್ಷೀಣವಾಗಿತ್ತು. ಮೇಲಾಗಿ ಈ ತಾಣವು ಅಪಘಾತಗಳ ವಲಯವೆಂಬ ಕುಖ್ಯಾತಿಯನ್ನೂ ಪಡೆದಿತ್ತು. 

ಮೃತ ವಿದ್ಯಾರ್ಥಿಗಳೆಲ್ಲರೂ ವೇಮಾವರಂ ಗ್ರಾಮದವರು. ಅವರನ್ನು ಗಾಯತ್ರಿ, ರೇಣುಕಾ, ಶೈಲಜಾ ಮತ್ತು ಕಾರ್ತಿಕ್‌ ರೆಡ್ಡಿ ಎಂದು ಗುರುತಿಸಲಾಗಿದೆ. ಆಟೋ ಡ್ರೈವರ್‌ ಹೆಸರು ಧನರಾಜ್‌ ಎಂದು ಗೊತ್ತಾಗಿದೆ.

ಗಾಯಾಳುಗಳಾಗಿರುವ ಇತರ ಮೂವರು ವಿದ್ಯಾರ್ಥಿಗಳನ್ನು ಗುಂಟೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಆರೋಗ್ಯ ಸಚಿವರ ಕಾರ್ಯಾಲಯ ತಿಳಿಸಿದೆ. 

ಸಮಾಜ ಕಲ್ಯಾಣ ಸಚಿವ ನಕ್ಕಾ ಆನಂದ ಬಾಬು ಅವರು ನರಸರಾವ್‌ಪೇಟೆಯಲ್ಲಿನ ಸರಕಾರಿ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳ ಪಾರ್ಥಿವ ಶರೀರವನ್ನು ಈ ಆಸ್ಪತ್ರೆಗೆ ತರಲಾಗಿದೆ.

ಅಸೆಂಬ್ಲಿ ಸ್ಪೀಕರ್‌ ಕೊಡೆಲಾ ಶಿವಪ್ರಸಾದ ರಾವ್‌, ಮಾನವ ಸಂಪನ್ಮೂಲ ಸಚಿವ ಗಂಟಾ ಶ್ರೀನಿವಾಸ್‌ ರಾವ್‌ ಮತ್ತು ಆರೋಗ್ಯ ಸಚಿವ ಕಮಿನೇನಿ ಶ್ರೀನಿವಾಸ್‌ ಅವರು ವಿದ್ಯಾರ್ಥಿಗಳ ಸಾವಿಗೆ ಶೋಕ, ಆಘಾತ ವ್ಯಕ್ತಪಡಿಸಿದ್ದಾರೆ. 

ಟಾಪ್ ನ್ಯೂಸ್

Byndoor  ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Byndoor ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

belBelthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

State Govt ದೇವೇಗೌಡರ ಬಲಿ ಪಡೆಯಲು ಸಂಚು: ಜೆಡಿಎಸ್‌ ಆರೋಪ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

Prajwal Revanna Case; ಸಿಬಿಐಗೆ ವಹಿಸಿದರೆ ಸರಕಾರದಲ್ಲಿ ಇರುವವರು ಜೈಲಿಗೆ

ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ

Govt ಕಚೇರಿಗಳಲ್ಲಿ ಇ-ಆಫೀಸ್‌ ತಂತ್ರಾಂಶ ಕಡ್ಡಾಯಕ್ಕೆ ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewqeqw

Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ

1-weweqwew

CRPF exits;ಮೇ 20 ರಿಂದ ಸಿಐಎಸ್ಎಫ್ ತುಕಡಿಗಳಿಂದ ಸಂಸತ್ತಿಗೆ ಭದ್ರತೆ

14-panaji

Panaji: ಅಪಾಯಕಾರಿ ಮರ ಕಡಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Byndoor  ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

Byndoor ಶಿರೂರು: ಕಡಿದು ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ಮೀನುಗಾರ ಮೃತ್ಯು

online

Online Fraud; ಬಳ್ಳಾರಿ ಮಹಿಳೆಗೆ 17 ಲಕ್ಷ ರೂ.ವಂಚನೆ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Surathkal; ಉದ್ಯಮಿಯ ಮೇಲೆ ಪತ್ನಿ, ಸಂಬಂಧಿಕರಿಂದ ಹಲ್ಲೆ, ಗೃಹಬಂಧನ

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

Moodabidri ಹೊಸಬೆಟ್ಟು: ಈಜುಕೊಳಕ್ಕೆ ಧುಮುಕಿದ ಯುವಕ ಸಾವು

belBelthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Belthangady: ಅಕ್ರಮ ಕಲ್ಲು ಗಣಿಗಾರಿಕೆ ಆರೋಪ; ಇಬ್ಬರ ವಿರುದ್ಧ ಪ್ರಕರಣ, ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.