ಶ್ರೀರಂಗಪಟ್ಟಣಕ್ಕೂ ಬಂತು “ಟ್ರಿಣ್‌ ಟ್ರಿಣ್‌’ ಸೈಕಲ್‌


Team Udayavani, Dec 28, 2017, 4:39 PM IST

mand.jpg

ಮಂಡ್ಯ: ನಾಲ್ಕು ತಿಂಗಳ ಹಿಂದಷ್ಟೇ ಮೈಸೂರಿನಲ್ಲಿ ಆರಂಭಗೊಂಡ “ಮೈ ಟ್ರಿಣ್‌ ಟ್ರಿಣ್‌ ಡಾಟ್‌ ಕಾಂ’ ಮಾದರಿಯಲ್ಲೇ ಶ್ರೀರಂಗಪಟ್ಟಣದಲ್ಲೂ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶ ದಿಂದ “ಟ್ರಿಣ್‌ ಟ್ರಿಣ್‌’ ಸೈಕಲ್‌ಗ‌ಳು ರಿಂಗಣಿಸುತ್ತಿವೆ.

ಶ್ರೀರಂಗಪಟ್ಟಣದ ಬಸ್‌ ನಿಲ್ದಾಣದ ಬಳಿ ಮೊದಲ ಹಂತದಲ್ಲಿ 20 ಸೈಕಲ್‌ಗ‌ಳಿಗೆ ಚಾಲನೆ ನೀಡಲಾಗಿದೆ. ಪ್ರವಾಸೋದ್ಯಮ ಇಲಾಖೆ ಹಾಗೂ ನಮ್ಮ-ನಿಮ್ಮ ಸೈಕಲ್‌ ಫೌಂಡೇಶನ್‌ ಸಹಯೋಗದೊಂದಿಗೆ ಸೈಕಲ್‌ಗ‌ಳನ್ನು ಪ್ರವಾಸಿಗರಿಗೆ ಬಾಡಿಗೆಗೆ ನೀಡುತ್ತಿದ್ದು, ಪ್ರತಿ ಗಂಟೆಗೆ 10 ರೂ.ನಂತೆ ಸೈಕಲ್‌ಗ‌ಳನ್ನು ಸವಾರಿಗೆ ಕೊಡಲಾಗುತ್ತಿದೆ. ಪ್ರವಾಸಿಗರಿಂದ ಆಧಾರ್‌ ಕಾರ್ಡ್‌ನ ಝೆರಾಕ್ಸ್‌ ಪಡೆದು ಸೈಕಲ್‌ಗಳನ್ನು ನೀಡಲಾಗುತ್ತಿದೆ.

ರೈತ ಮುಖಂಡ ಕಿರಂಗೂರು ಪಾಪು ಅವರು ಶ್ರೀರಂಗಪಟ್ಟಣದಲ್ಲಿ ಟ್ರಿಣ್‌ ಟ್ರಿಣ್‌ ಸೈಕಲ್‌ಗ‌ಳಿಗೆ ಚಾಲನೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರವಾಸೋದ್ಯಮ ಇಲಾಖೆ ಸಚಿವರು, ಸಂಸದ ಸಿ.ಎಸ್‌.ಪುಟ್ಟರಾಜು, ಜಿಲ್ಲಾಧಿಕಾರಿ, ಪುರಸಭೆ ಅಧಿಕಾರಿಗಳಿಗೆ ಪತ್ರ ವ್ಯವಹಾರ ನಡೆಸಿದ್ದರು. ನಾಲ್ಕು ತಿಂಗಳ ಹೋರಾಟಕ್ಕೆ ಇದೀಗ ಜಯ ಸಿಕ್ಕಿದೆ.

ಪ್ರೇಕ್ಷಣೀಯ ಸ್ಥಳಗಳು: ಶ್ರೀರಂಗಪಟ್ಟಣ ಪಟ್ಟಣ ವ್ಯಾಪ್ತಿಯಲ್ಲಿ ಪರಿಸರ ಮಾಲಿನ್ಯ ತಡೆಗಟ್ಟುವ ಉದ್ದೇಶ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಟ್ರಿಣ್‌ ಟ್ರಿಣ್‌ ಸೈಕಲ್‌ಗ‌ಳಿಗೆ ಚಾಲನೆ ನೀಡಲಾಗಿದೆ. ಐತಿಹಾಸಿಕ ಸ್ಥಳವಾದ
ಶ್ರೀರಂಗಪಟ್ಟಣದಲ್ಲಿ ಶ್ರೀರಂಗನಾಥ ಸ್ವಾಮಿ ದೇವಸ್ಥಾನ ಮಾತ್ರವಲ್ಲದೇ ಮೂಡಲಬಾಗಿಲು ಶ್ರೀ ಆಂಜನೇಯಸ್ವಾಮಿ ದೇವಸ್ಥಾನ, ಕ್ಷಣಾಂಬಿಕಾ ಜ್ಯೋತಿರ್ಮಹೇಶ್ವರ ಸ್ವಾಮಿ ದೇವಸ್ಥಾನ, ಶ್ರೀ ಗಂಗಾಧರೇಶ್ವರ ಸ್ವಾಮಿ, ಶ್ರೀ ನಿಮಿಷಾಂಬ ದೇಗುಲಗಳಿವೆ. 

ಅದೇ ರೀತಿ ರಂಗನತಿಟ್ಟು ಪಕ್ಷಿಧಾಮ, ದರಿಯಾದೌಲತ್‌, ಟಿಪ್ಪುಸುಲ್ತಾನ್‌ ಮಡಿದ ಸ್ಥಳ, ಕರ್ನಲ್‌ ಬೇಲಿಯ ಸೆರೆಮನೆ,
ಮದ್ದಿನ ಮನೆಗಳು, ಕೋಟೆ ಬುರುಜುಗಳು, ಸುಲ್ತಾನ್‌ ಭತ್ತೇರಿ, ಗುಂಬಜ್‌, ಸಂಗಮ, ಗೋಸಾಯ್‌ಘಾಟ್‌ ಸೇರಿದಂತೆ ಅನೇಕ ಸ್ಥಳಗಳು ಪ್ರವಾಸಿಗರನ್ನು ಕೈಬೀಸಿ ಸೆಳೆಯುತ್ತಿವೆ.

ಪುರಾಣ ಪುಣ್ಯಕ್ಷೇತ್ರ ಎನ್ನಿಸಿರುವ ಶ್ರೀರಂಗಪಟ್ಟಣಕ್ಕೆ ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹೊರಗಿನಿಂದ ಆಗಮಿಸುತ್ತಿದ್ದಾರೆ. ಪರಿಣಾಮ ಪಟ್ಟಣ ಸದಾ ವಾಹನ ದಟ್ಟಣೆಗಳಿಂದ ತುಂಬಿಕೊಂಡಿದೆ. ಇದರಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ಆರಂಭಿಸಲಾಗಿರುವ ಟ್ರಿಣ್‌ ಟ್ರಿಣ್‌ ಸೈಕಲ್‌ ಸವಾರಿ ಪ್ರವಾಸಿಗರನ್ನು ಆಕರ್ಷಿಸುವ ನಿರೀಕ್ಷೆ ಇದೆ.

ಹೊಸ ಅನುಭವ: ಮೊದಲ ಹಂತದಲ್ಲಿ 20 ಸೈಕಲ್‌ಗ‌ಳನ್ನು ಪ್ರವಾಸಿಗರಿಗಾಗಿ ತರಲಾಗಿದೆ. ಮೊದಲ ದಿನವೇ ಪ್ರವಾಸಿಗರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಹತ್ತಕ್ಕೂ ಹೆಚ್ಚು ಸೈಕಲ್‌ಗ‌ಳಿಗೆ ಬೇಡಿಕೆ ಬಂದಿದ್ದು, ಪ್ರವಾಸಿಗರು ಉತ್ಸಾಹದಿಂದ ಸೈಕಲ್‌ ಏರಿ ಹೊಸ ರೀತಿಯ ಅನುಭವ ಪಡೆದುಕೊಳ್ಳುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಸೈಕಲ್‌ಗ‌ಳಿಗೆ ಬರುವ ಬೇಡಿಕೆಯನ್ನು ಆಧರಿಸಿ ನಾಲ್ಕರಿಂದ ಐದು ಸ್ಥಳಗಳಲ್ಲಿ ಆರಂಭಿಸುವ ದಿಕ್ಕಿನಲ್ಲಿ ಚಿಂತನೆ ನಡೆಸಲಾಗಿದೆ.

ದೂರದ ಊರಿನಿಂದ ಬರುವವರು ವಾಹನ ದಟ್ಟಣೆಯಲ್ಲಿ ಸಾಗಲಾರದೆ ತಮ್ಮ ವಾಹನಗಳನ್ನು ಒಂದೆಡೆ ಪಾರ್ಕಿಂಗ್‌ ಮಾಡಿ ಸೈಕಲ್‌ಗ‌ಳನ್ನು ಏರಿ ಸಾಗುತ್ತಿದ್ದಾರೆ. ಟ್ರಿಣ್‌ ಟ್ರಿಣ್‌ ಸೈಕಲ್‌ ಮೈಸೂರಿನಲ್ಲಿ ಯಶಸ್ವಿಯಾಗಿದ್ದು, ಇಲ್ಲಿಯೂ ಅದೇ ಮಾದರಿಯಲ್ಲಿ ಸ್ಪಂದನೆ ಸಿಗಬಹುದೆಂದು ನಿರೀಕ್ಷಿಸಲಾಗಿದೆ.

ಇನ್ನೆರಡು ಸ್ಥಳ ಗುರುತು: ಸಾರ್ವಜನಿಕ ಬಸ್‌ ನಿಲ್ದಾಣದ ಬಳಿ ಒಂದು ಟ್ರಿಣ್‌ ಟ್ರಿಣ್‌ ಸೈಕಲ್‌ ಕೇಂದ್ರ ತೆರೆಯಲಾಗಿದ್ದು, ನಾಳೆಯಿಂದ ಶ್ರೀ ನಿಮಿಷಾಂಬ ದೇವಸ್ಥಾನ, ರೈಲು ನಿಲ್ದಾಣದ ಬಳಿಯೂ ಸೈಕಲ್‌ಗ‌ಳಿಗೆ ಚಾಲನೆ ನೀಡಲಾಗುವುದು. ಸದ್ಯ ಸೈಕಲ್‌ ಗಳ ನಿಲ್ದಾಣಕ್ಕೆ ವ್ಯವಸ್ಥೆ ಮಾಡಿಲ್ಲ. ಸಾರ್ವಜನಿಕ ಬಸ್‌ ನಿಲ್ದಾಣದ ಬಳಿ ಬಿಸಿಲಿನಲ್ಲೇ ಸೈಕಲ್‌ಗ‌ಳನ್ನು ನಿಲ್ಲಿಸಲಾಗಿದೆ. ಯಾವುದೇ ನಾಮಫ‌ಲಕವನ್ನೂ ಅಳವಡಿಸಲಾಗಿಲ್ಲ. ಶೀಘ್ರದಲ್ಲೇ ಟ್ರಿಣ್‌ ಟ್ರಿಣ್‌ ಸೈಕಲ್‌ಗ‌ಳಿಗೆ ಸಮರ್ಪಕ ನಿಲ್ದಾಣ ವ್ಯವಸ್ಥೆ ಮಾಡುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಪ್ರವಾಸಿಗರಿಗೆ ಅನುಕೂಲ: ಟ್ರಿಣ್‌ ಟ್ರಿಣ್‌ ಸೈಕಲ್‌ನಿಂದ ಪ್ರವಾಸಿಗರಿಗೆ ಹೆಚ್ಚಿನ ಅನುಕೂಲವಾಗಿದೆ. ಶ್ರೀರಂಗಪಟ್ಟಣ ಸೇರಿದಂತೆ ಸುತ್ತಮುತ್ತ ಹಲವಾರು ಪ್ರೇಕ್ಷಣೀಯ ಸ್ಥಳಗಳಿವೆ. ಅಲ್ಲಿಗೆ ವಾಹನಗಳಲ್ಲಿ ತೆರಳುವುದರಿಂದ ಪರಿಸರ ಮಾಲಿನ್ಯ ಸೃಷ್ಟಿಯಾಗುತ್ತಿತ್ತು. ಇದೀಗ ಪ್ರವಾಸಿ ಸ್ಥಳಗಳಿಗೆ ಸೈಕಲ್‌ ವ್ಯವಸ್ಥೆ ಆರಂಭಿಸಿರುವುದರಿಂದ ಪ್ರವಾಸಿಗರಿಗೆ ಅನುಕೂಲವಾಗಿದೆ. ಅಧಿಕಾರಿಗಳು ಇನ್ನೂ ಎರಡು ಸ್ಥಳಗಳನ್ನು ಗುರುತಿಸಿದ್ದು, ಸದ್ಯದಲ್ಲೇ ಅಲ್ಲಿಯೂ ಚಾಲನೆ ಸಿಗಲಿದೆ.

„ ಮಂಡ್ಯ ಮಂಜುನಾಥ್‌

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.