ಕ್ಲೇ ಪ್ಲೇಯಲ್ಲಿ ಮೂಡಿದ ಕಲಾಕೃತಿಗಳು


Team Udayavani, Dec 29, 2017, 11:16 AM IST

29-11.jpg

ಮಣ್ಣಲ್ಲಿ ಹುಟ್ಟಿ, ಮಣ್ಣಲ್ಲಿ ಬೆಳೆದ ಪ್ರತಿಯೊಂದು ಜೀವಿಗಳು ಕೊನೆಗೆ ಮಣ್ಣಲ್ಲಿ ಮಣ್ಣಾಗುವುದೇ ಪ್ರಕೃತಿಯ ನಿಯಮ. ಹಾಗಾಗಿ ಮಣ್ಣಿನ ಜತೆಗೆ ನಮ್ಮ ನಂಟು ನಿತ್ಯ ನಿರಂತರ. ಅನ್ನ ಮತ್ತು  ನೆಲೆ ನೀಡುವ ಮಣ್ಣಿನಲ್ಲಿ ಸುಂದರ ಕಲಾಕೃತಿಗಳನ್ನು ಸೃಷ್ಟಿಸಲು ನಮಗೆ ಪ್ರಕೃತಿಯೇ ಪ್ರೇರಣೆ. ಎಳೆಯ ಮಗುವಿನ ಮೊದಲ ಆಟವೇ ಮಣ್ಣಿನ ಜೊತೆಗೆ. ಹಾಗಾಗಿ ಎಳೆಯ ರೊಂದಿಗೆ ಹಿರಿಯರಿಗೂ ಮಣ್ಣಿನೊಂದಿಗೆ ಭಾವನಾತ್ಮಕ ಸಂಬಂಧ ಬೆಸೆದು, ಕಲಾಕೃತಿಗಳ ಸೃಷ್ಟಿಗೆ ಅವಕಾಶ ಮಾಡಿಕೊಟ್ಟದ್ದು ಮಣಿಪಾಲದ ತ್ರಿವರ್ಣ ಕಲಾಕೇಂದ್ರ. ಕ್ಲೇ ಪ್ಲೇ ಎನ್ನುವ ಮೂರು ದಿನಗಳ ಶಿಬಿರದಲ್ಲಿ, ಐದರಿಂದ- ಅರುವತ್ತು ವರುಷದ ವರೆಗಿನ ಸುಮಾರು ಅರುವತ್ತು ¤ಮಂದಿ ಕಲಾಸಕ್ತರು ಒಂದಾಗಿ ಬೆರೆತು, ತಮ್ಮ ಸುತ್ತಲಿನ ಪ್ರಾಣಿ, ಪಕ್ಷಿ, ಪರಿಕರಗಳ ಸಹಿತ ಅಳಿದ ಜೀವ ಸಂಕುಲಗಳನ್ನು ಮರು ಸೃಷ್ಟಿಸಿದರು. ಹಾಗೆಯೇ ಸಾಮಾಜಿಕ ಪಿಡುಗಿನ ಬಗ್ಗೆ ಸಂದೇಶ ನೀಡುವ ಅನಕ್ಷರತೆ, ತಂಬಾಕು ಸೇವನೆ, ಮಾದಕ ದ್ರವ್ಯ ಸೇವನೆ ಮುಂತಾದ ಸೃಜನಾತ್ಮಕ ಕಲಾಕೃತಿಗಳ ಜೊತೆಗೆ ವಿವಿಧ ಭಾವನೆಗಳ ಮುಖವಾಡಗಳು, ಕೋಟೆ-ಕೊತ್ತಲಗಳು, ಕಲಾತ್ಮಕ ಹೂ ಕುಂಡಗಳು, ಗುಡಿಸಲು- ಮನೆಗಳು, ಪಕ್ಷಿಗಳ ಪೊಟರೆಗಳು ಹೀಗೆ ಹತ್ತು ಹಲವು ಮಾದರಿಗಳು ಇಲ್ಲಿದ್ದು ಕಲಾ ಪ್ರೇಮಿಗಳ ಮನಸೂರೆಗೊಂಡವು. ಇವರಿಗೆ ಮಾರ್ಗದರ್ಶಕರಾಗಿ ಬಾಸುಮ ಕೊಡಗು, ಸುರೇಶ ಪಿ. ಕಾರ್ಕಳ, ದೇವರಾಜ ನಾಯಕ್‌, ಪರ್ಕಳ ಹಾಗೂ ಕಲಾಕೇಂದ್ರದ ಶಿಕ್ಷಕಿಯರಾದ ಪವಿತ್ರ ಮತ್ತು ನಯನ ಸಹಕರಿಸಿದರು. ಕಳೆದ ಮೂರು ವರುಷಗಳಿಂದ ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಈ ಕೇಂದ್ರದ ನಿರ್ದೇಶಕ, ಕಲಾವಿದ ಹರೀಶ್‌ ಸಾಗಾ ಮತ್ತು ಬಳಗ ಅಭಿನಂದನಾರ್ಹರು. 

ಕೆ. ದಿನಮಣಿ ಶಾಸ್ತ್ರೀ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ನಾಟಕವಾದ ತಮಿಳು ಮಹಾಕಾವ್ಯದ ಕನ್ನಗಿ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಭರತಮುನಿ ಜಯಂತ್ಯುತ್ಸವದಲ್ಲಿ ರಂಜಿಸಿದ ನೃತ್ಯ ರೂಪಕ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ಸರ್ವೇಜನಾಃ ಕಾಂಚನಮಾಶ್ರಯಂತೇ 51ನೇ ಪ್ರದರ್ಶನ

ದೇಶಾಭಿಮಾನ ಸಾರುವ ಮಾನಸಗಂಗಾ

ದೇಶಾಭಿಮಾನ ಸಾರುವ ಮಾನಸಗಂಗಾ

karakushala-

ಪುಟ್ಟಕರಗಳಿಂದ ಮೂಡಿದ ಕರಕುಶಲ ಕಲಾಕೃತಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.