ಉಡುಪಿ ಶ್ರೀಕೃಷ್ಣನ ಗರ್ಭಗುಡಿಗೆ ಚಿನ್ನದ ಗೋಪುರ: ಪಲಿಮಾರು ಶ್ರೀ 


Team Udayavani, Dec 29, 2017, 12:37 PM IST

29-20.jpg

ಮಂಗಳೂರು: ಉಡುಪಿ ಶ್ರೀಕೃಷ್ಣನ ಪೂಜಾ ಪರ್ಯಾಯದ ಕಾಲದಲ್ಲಿ ಶ್ರೀ ಕೃಷ್ಣನ ಗರ್ಭಗುಡಿಗೆ ಸುಮಾರು 32 ಕೋ.ರೂ. ವೆಚ್ಚದಲ್ಲಿ ಚಿನ್ನದ ಗೋಪುರ ವನ್ನು ನಿರ್ಮಿಸುವ ಸಂಕಲ್ಪ ಮಾಡಲಾಗಿದೆ ಎಂದು ಭಾವೀ ಪರ್ಯಾಯ ಪಲಿಮಾರು ಮಠಾಧೀಶರಾದ ಶ್ರೀ ವಿದ್ಯಾಧೀಶತೀರ್ಥ ಶ್ರೀಪಾದರು ತಿಳಿಸಿದ್ದಾರೆ.

ಮಂಗಳೂರು ಕದ್ರಿ ಮಲ್ಲಿಕಾ ಬಡಾವಣೆಯಲ್ಲಿ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಅವರ ನಿವಾಸದಲ್ಲಿ ತುಲಾಭಾರ ಸೇವೆ ಸ್ವೀಕರಿಸಿದ ಬಳಿಕ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಕರಾವಳಿ ಶೈಲಿಯಲ್ಲಿರುವ ಶ್ರೀಕೃಷ್ಣನ ಗರ್ಭಗುಡಿಗೆ ತಿರುಪತಿ ವೆಂಕಟೇಶನ ಗರ್ಭಗೋಪುರದ ಪ್ರತಿಬಿಂಬ ವನ್ನು ಮೂಡಿಸುವ ಇಚ್ಛೆಯಿದೆ. ಇದಕ್ಕಾಗಿ ಪ್ರತೀ ಚದರ ಅಡಿಗೆ 40 ಗ್ರಾಂ ಚಿನ್ನದ ಅಗತ್ಯವಿದ್ದು, 2,500 ಚದರ ಅಡಿಗೆ 100 ಕೆಜಿ ಚಿನ್ನದ ಅಗತ್ಯವಿದೆ ಎಂದರು.

ತುಳಸೀ ಧಾಮ
ಹಸಿರಿನ ಬಗ್ಗೆ ಹಾಗೂ ಪರಿಸರ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸುವುದಕ್ಕಾಗಿ ಶ್ರೀಕೃಷ್ಣನಿಗೆ ಪರ್ಯಾಯ ಕಾಲದಲ್ಲಿ ಪ್ರತಿನಿತ್ಯ ಲಕ್ಷ  ತುಳಸಿ ಅರ್ಚನೆ ಮಾಡುವ ಯೋಜನೆ ಹೊಂದಿದ್ದು, ಇದಕ್ಕಾಗಿ ತುಳಸಿಯನ್ನು ಬೆಳೆಸಲು ಭಕ್ತರಿಗೆ ಮನವಿ ಸಲ್ಲಿಸಲಾಗಿದೆ. ತುಳಸಿಯನ್ನು ವಿಪುಲವಾಗಿ ಬೆಳೆಸುವುದರಿಂದ ವಾತಾವರಣ ಶುದ್ಧಗೊಳ್ಳುತ್ತದೆ. ಹಸಿರಿನ ಬಗ್ಗೆ ಜಾಗೃತಿಯೂ ಹುಟ್ಟುತ್ತವೆ. ಹೀಗಾಗಿ ತುಳಸಿ ಗಿಡ ಬೆಳೆಯುವಂತೆ ನಾವು ಮನವಿ ಸಲ್ಲಿಸುತ್ತಿದ್ದೇವೆ. ಜತೆಗೆ ಪೆರಂಪಳ್ಳಿಯಲ್ಲಿ 10 ಎಕ್ರೆ ಜಾಗದಲ್ಲಿ ತುಳಸಿ ಧಾಮ ನಿರ್ಮಿಸಲು ನಮಗೆ ಅವಕಾಶ ದೊರೆತಿದೆ. ಈ ಮೂಲಕ ಪ್ರತೀ ದಿನ ಲಕ್ಷ ತುಳಸೀ ಅರ್ಚನೆಯನ್ನು ಮಾಡಲು ಉಡುಪಿ ಮಠದಲ್ಲಿ ಮಾಡಲು ನಿರ್ಧರಿಸಲಾಗಿದೆ ಎಂದರು.

ಅಖಂಡ ನಾಮ ಸಂಕೀರ್ತನೆ
ಪ್ರತೀ ದಿನ ಶ್ರೀ ಉಡುಪಿ ಮಠದ ದೇವರ ಮುಂಭಾಗ  ತಾಳತಟ್ಟಿ ಅಖಂಡ ನಾಮ ಸಂಕೀರ್ತನೆಗೆ ಉದ್ದೇಶಿಸಲಾಗಿದೆ. ದಿನಕ್ಕೆ 6 ಭಜನ ಮಂಡಳಿಯಂತೆ 2 ವರ್ಷಈ ಸೇವೆ ನಡೆಯಲಿದೆ. ಇದರಲ್ಲಿ ಬೇರೆ ಬೇರೆ ನಾಮ ಸಂಕೀರ್ತನೆ ತಂಡ, ಭಜನ ತಂಡಗಳು ಭಾಗವಹಿಸಲಿವೆ. ಇದರಿಂದಾಗಿ ದೇವಸ್ಥಾನದ ಪಾವಿತ್ರ್ಯ ವೃದ್ಧಿ ಹಾಗೂ ಸಮಾಜದಲ್ಲಿ ಜಾಗೃತಿ ಉಂಟಾಗಲು ಸಾಧ್ಯ ಎಂದರು.

ತುಳು ಲಿಪಿಯಲ್ಲಿ ಲಭ್ಯವಿರುವ ಮಹಾಭಾರತದ ಕೃತಿಯನ್ನು ಪ್ರಥಮ ಬಾರಿಗೆ ಶ್ಲೋಕಾರ್ಥವನ್ನು ಪ್ರತ್ಯೇಕವಾಗಿ ದೇವನಾಗರಿ ಲಿಪಿಗೆ ಪರಿವರ್ತಿಸಿ ಕನ್ನಡಭಾಷೆಗೆ ತರ್ಜುಮೆ ಮಾಡಿಸುವ ಯೋಜನೆಯನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ಮಹಾಭಾರತದ 18 ಪರ್ವಗಳು 40 ಸಂಪುಟಗಳಲ್ಲಿ ಮುಂದಿನ ಪರ್ಯಾಯ ಅವಧಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ. ಜತೆಗೆ ಮಠದ ಶಾಖೆಗಳಲ್ಲಿ ಅವಕಾಶಗಳಿರುವಲ್ಲಿ ಗೋಶಾಲೆಗಳನ್ನು ನಿರ್ಮಿಸಿ ದೇಶೀಯ ಗೋಸಂತತಿ ರಕ್ಷಣೆ ಹಾಗೂ ಪ್ರಗತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು. ಎಸ್‌. ಪ್ರದೀಪ್‌ ಕುಮಾರ್‌ ಕಲ್ಕೂರ ಸೇರಿ ದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗ ವಹಿಸಿದ್ದರು.

ಸಾವಿರ ಕೋಟಿ ಶ್ರೀ ರಾಮ ನಾಮ ಯಜ್ಞ
ಏಕಾಗ್ರತೆಯ ಸಾಧನೆಗಾಗಿ ಸಾವಿರ ಕೋಟಿ ಶ್ರೀರಾಮ ನಾಮ ಲೇಖನ ಯಜ್ಞವನ್ನು ಆಯೋಜಿಸಲಾಗಿದೆ. ಇದರಲ್ಲಿ ಸಮಸ್ತ ಆಸ್ತಿಕ ಜನರೂ ಭಾಗವಹಿಸಬಹುದು. 1 ಪುಸ್ತಕದಲ್ಲಿ 10,000ದಷ್ಟು ಶ್ರೀ ರಾಮ ನಾಮ ಬರೆಯಲು ಅವಕಾಶವಿದೆ. ಸಾವಿರ ಕೋಟಿಯಾದ ಮೇಲೆ ಈ ಪುಸ್ತಕವನ್ನು ಹರಿದ್ವಾರದ ಗಂಗಾತೀರದ ಬಡೇಹನುಮಾನ್‌ ದೇವಸ್ಥಾನದಲ್ಲಿ ಪೂಜೆಗೆ ಇಡಲಾಗುವುದು ಎಂದು ಪಲಿಮಾರು ಶ್ರೀಗಳು ಹೇಳಿದರು.

ಟಾಪ್ ನ್ಯೂಸ್

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.