ಪತ್ರಕರ್ತ ಬದಲಾವಣೆಗೆ ಒಗ್ಗಲಿ


Team Udayavani, Dec 29, 2017, 3:18 PM IST

ray-3.jpg

ರಾಯಚೂರು: ಪ್ರಜಾಪ್ರಭುತ್ವ, ಪತ್ರಿಕೋದ್ಯಮ ಒಬ್ಬರಿಂದ ಹುಟ್ಟಿ ಕೊಂಡಿದ್ದಲ್ಲ. ಈ ಎರಡು ರಂಗಗಳು ಆರಂಭದಿಂದ ಈವರೆಗೆ ಬದಲಾಗುತ್ತಲೇ ಇದ್ದು, ಪತ್ರಕರ್ತರು ಅದಕ್ಕೆ ಹೊಂದಿಕೊಳ್ಳುವ ಗುಣ ಬೆಳೆಸಿ ಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಈಶ್ವರ ದೈತೋಟ ಹೇಳಿದರು. ನಗರದ ಸ್ಪಿಲ್‌ ಪತ್ರಿಕೋದ್ಯಮ ಕಾಲೇಜಿನಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಸಹಯೋಗದಲ್ಲಿ ಗುರುವಾರ ನಡೆದ ಮಾಧ್ಯಮ ಹಬ್ಬದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಸ್ಪಷ್ಟ ಗುರಿ ಹೊಂದಿ ಅದಕ್ಕೆ ತಕ್ಕಂತೆ ಶ್ರಮಿಸಬೇಕು. ತಂತ್ರಜ್ಞಾನ ಬೆಳೆದಂತೆ
ಸುದ್ದಿಯ ನಿಖರತೆ ಕಡಿಮೆ ಆಗುತ್ತಿದೆ ಎಂದು ವಿಷಾದಿಸಿದ ಅವರು, ಸಮಯಪ್ರಜ್ಞೆ, ಸಂಯಮದಿಂದ ಕೆಲಸ ಮಾಡುವ ರೂಢಿ ಬೆಳೆಸಿಕೊಳ್ಳಿ ಎಂದು ಸಲಹೆ ನೀಡಿದರು.

ಪತ್ರಿಕೋದ್ಯಮದಲ್ಲಿ ಸಾಕಷ್ಟು ಹುದ್ದೆಗಳು ಸೃಷ್ಟಿಯಾಗುತ್ತಿವೆ. ಅದನ್ನು ಕೇವಲ ವೃತ್ತಿ ಎಂದು ಭಾವಿಸದೇ, ಮಹತ್ತರ ಹೊಣೆ, ಗೌರವದ ಹುದ್ದೆ ಎಂಬ ಪ್ರಜ್ಞೆ ಇರಲಿ. 1959ರಲ್ಲಿ ದೂರದರ್ಶನ ಪರಿಚಯವಾದಾಗ ದೇಶದಲ್ಲಿ ಕೇವಲ 26 ಟಿವಿಗಳಿದ್ದವು.

ಆದರೆ, ಇಂದು 18 ಕೋಟಿ ಟಿವಿಗಳಿವೆ. ಭಾರತ ತಂತ್ರಜ್ಞಾನದಲ್ಲಿ ಸಾಕಷ್ಟು ಮುಂದುವರಿದಿದೆ. ಇಂಥ ಕಾಲಘಟ್ಟದಲ್ಲಿ ಪತ್ರಿಕೋದ್ಯಮವನ್ನು ಸವಾಲೆಂದು ತಿಳಿದು ಕೆಲಸ ಮಾಡಿ ಎಂದರು.

ನಗರಸಭೆ ಪ್ರಭಾರ ಅಧ್ಯಕ್ಷ ಜಯಣ್ಣ ಮಾತನಾಡಿ, ಪತ್ರಕರ್ತರು ಬದ್ಧತೆ, ಆತ್ಮಸಾಕ್ಷಿಯಿಂದ ಕಾರ್ಯ ನಿರ್ವಹಿಸಬೇಕು. ಪ್ರಜ್ಞಾಪೂರ್ವಕವಾಗಿ ಬರೆಯುವ ಮೂಲಕ ಬರವಣಿಗೆ ಪಕ್ವ ಮಾಡಿಕೊಳ್ಳಬೇಕು ಎಂದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯ ನಾಗತಿಹಳ್ಳಿ ನಾಗರಾಜ ಮಾತನಾಡಿ, ಮಾಧ್ಯಮ ಕ್ಷೇತ್ರದಲ್ಲಿ ವಿಫುಲ ಉದ್ಯೋಗಾವಕಾಶಗಳಿದ್ದು, ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದರು. ಬಾಲಂಕು ಆಸ್ಪತ್ರೆಯ ಡಾ| ಶ್ರೀಧರರೆಡ್ಡಿ ಮಾತನಾಡಿದರು. ಹಿರಿಯ ಪರ್ತಕರ್ತ ಬಸವರಾಜ ಸ್ವಾಮಿ ಅಧ್ಯಕ್ಷತೆ ವಹಿಸಿದ್ದರು.

ಪತ್ರಕರ್ತ ಬಿ.ವೆಂಕಟಸಿಂಗ್‌ ಪ್ರಾಸ್ತಾವಿಕ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯೆ ಪ್ರಭಾವತಿ, ಉಪನ್ಯಾಸಕ
ಚನ್ನಬಸವಣ್ಣ, ಆಂಜನೇಯ, ಸಾಹಿತಿ ಅಯ್ಯಪ್ಪ ತುಕ್ಕಾಯಿ, ಅಯ್ಯಪ್ಪಯ್ಯ ಹುಡಾ, ಬಿ.ಜಿ. ಹುಲಿ ಸೇರಿ ಇತರರು
ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.