ವಿಟ್ಲ ಪಶುವೈದ್ಯಆಸ್ಪ ತ್ರೆ: ಕಟ್ಟಡ ಕಾಮಗಾರಿ ಸ್ಥಗಿತ 


Team Udayavani, Dec 29, 2017, 4:58 PM IST

29-Dec-18.jpg

ವಿಟ್ಲ: ವಿಟ್ಲ ಪಶುವೈದ್ಯ ಆಸ್ಪತ್ರೆ 14 ಗ್ರಾಮಗಳ ವ್ಯಾಪ್ತಿಯನ್ನು ಹೊಂದಿದೆ. ಆದರೆ ಈ ಪ್ರಮುಖ ಆಸ್ಪತ್ರೆಗೆ ಸಹಾಯಕ ನಿರ್ದೇಶಕರಿಲ್ಲ, ಸಿಬಂದಿಯಿಲ್ಲ. ಹೊಸ ಕಟ್ಟಡ ನಿರ್ಮಾಣ ಹಂತದಲ್ಲಿದ್ದು, ಐದು ತಿಂಗಳಿಂದ ಕಾಮಗಾರಿ ಸ್ಥಗಿತಗೊಂಡಿದೆ.

ವಿಟ್ಲ, ವಿಟ್ಲಪಟ್ನೂರು, ವಿಟ್ಲ ಮುಟ್ನೂರು, ಇಡ್ಕಿದು, ಕುಳ, ಪುಣಚ, ಕೇಪು, ಅಳಿಕೆ, ಕೊಳ್ನಾಡು, ಸಾಲೆತ್ತೂರು, ಕನ್ಯಾನ, ಕರೋಪಾಡಿ, ಪೆರುವಾಯಿ, ಮಾಣಿಲ ಗ್ರಾಮಗಳಿಗೆ ಈ ಪಶುವೈದ್ಯ ಆಸ್ಪತ್ರೆಯ ವ್ಯಾಪ್ತಿಯಿದೆ. ಕೊಳ್ನಾಡಿನ ಕುಡ್ತಮುಗೇರು, ಕನ್ಯಾನ ಮತ್ತು ಪುಣಚ ಗ್ರಾಮದ ಪರಿಯಾಲ್ತಡ್ಕದಲ್ಲಿ ಉಪ ಕೇಂದ್ರಗಳಿವೆ. ವಿಟ್ಲದ ಸಹಾಯಕ ನಿರ್ದೇಶಕರಿಗೆ 2016ನೇ ಸಾಲಿನ ಸೆಪ್ಟಂಬರ್‌ ತಿಂಗಳಲ್ಲಿ ವರ್ಗಾವಣೆ ಆಗಿದೆ. ಆ ಬಳಿಕ ಹುದ್ದೆ ಖಾಲಿಯಿದೆ. ಕೇಪು ಗ್ರಾಮದ ಅಡ್ಯನಡ್ಕವನ್ನು ಕೇಂದ್ರವಾಗಿ ಇರಿಸಿಕೊಂಡು ಕೇಪು, ಪೆರುವಾಯಿ, ಮಾಣಿಲ ಗ್ರಾಮಗಳನ್ನು ಅಡ್ಯನಡ್ಕದ ಪಶು ವೈದ್ಯಾಧಿಕಾರಿ ಡಾ| ಪರಮೇಶ್ವರ ನಾಯ್ಕ ಅವರು ನೋಡಿಕೊಳ್ಳಬೇಕು. ಅವರಿಗೇ ವಿಟ್ಲದ ಪ್ರಭಾರ ವಹಿಸಲಾಗಿದೆ. ಎರಡೂ ಕಡೆ ಸಿಬಂದಿಯಿಲ್ಲ. ಒಬ್ಬರು ಪಶು ವೈದ್ಯಾಧಿಕಾರಿ ಮತ್ತು ಇಬ್ಬರು ಹಿರಿಯ ಪಶು ವೈದ್ಯಕೀಯ ಪರೀಕ್ಷಕರು ಇಷ್ಟೊಂದು ಗ್ರಾಮಗಳಿಗೆ ಓಡಾಡಬೇಕು. ಒಂದಿಬ್ಬರು ಗ್ರೂಪ್‌ ‘ಡಿ ‘ ಸಿಬಂದಿ ಇದ್ದಾರೆ. ಗುತ್ತಿಗೆ ಆಧಾರದಲ್ಲಿ ನಾಲ್ಕು ಮಂದಿಯಿದ್ದಾರೆ. ಅವರ ಗುತ್ತಿಗೆ ಡಿಸೆಂಬರ್‌ಗೆ ಕೊನೆಗೊಳ್ಳುತ್ತಿದೆ. ಮುಂದುವರಿಸಿದರೆ ಮಾತ್ರ ಇರುವ ಮೂರು-ನಾಲ್ಕು ಸಿಬಂದಿಯ ಭಾರ ಕಡಿಮೆಯಾಗುತ್ತದೆ.

ವಿಟ್ಲದಲ್ಲಿ ಔಷಧ ವಿತರಣೆ
ವಿಟ್ಲ ಆಸ್ಪತ್ರೆಯಲ್ಲಿ ಹಸುವಿನ ಅನಾರೋಗ್ಯ, ನಾಯಿ, ಕೋಳಿ, ಆಡು ಮತ್ತಿತರ ಸಾಕುಪ್ರಾಣಿಗಳ ಅನಾರೋಗ್ಯ ನಿವಾರಣೆಗೆ ಸರಕಾರದಿಂದ ಸಾಕಷ್ಟು ಔಷಧ ವಿತರಣೆ ಮಾಡಲಾಗುತ್ತಿದೆ. ಉಚಿತವಾಗಿ ಲಭ್ಯವಿದೆ. ಹೆಚ್ಚಿನ ಸಾರ್ವಜನಿಕರು, ಹೈನುಗಾರರು ಇವುಗಳ ಪ್ರಯೋಜನ ಪಡೆದು ಕೊಳ್ಳುತ್ತಾರೆ. ಆದರೆ ಔಷಧಿ ವಿತರಣೆಗೆ ಜಾನುವಾರು ಅಧಿಕಾರಿ, ಪರೀಕ್ಷಕರು ವ್ಯವಸ್ಥೆ ಮಾಡುತ್ತಾರೆ. ಸ್ಥಳದಲ್ಲಿ ಆಗಬೇಕಾದ ಚಿಕಿತ್ಸೆಗೆ ಕರ್ತವ್ಯದಲ್ಲಿರುವ ಸಿಬಂದಿ ಭೇಟಿ ನೀಡಿ, ಈ 14 ಗ್ರಾಮಗಳನ್ನು ನಿಭಾಯಿಸುವ ವಿಧಾನ ಸಾಕಷ್ಟು ಮೆಚ್ಚುಗೆ ಪಡೆದಿದೆ. ಆದರೆ ಒತ್ತಡದ ಪರಿಣಾಮ ಇವರೆಲ್ಲರ ಆರೋಗ್ಯ ಏರುಪೇರಾಗುತ್ತಿದೆ. 

50 ಸೆಂಟ್ಸ್‌ ಜಾಗ
ವಿಟ್ಲ ಪಶುವೈದ್ಯ ಆಸ್ಪತ್ರೆಗೆ 50 ಸೆಂಟ್ಸ್‌ ಜಾಗವಿದೆ. ಅದರಲ್ಲಿ ಪುರಾತನ ಹಂಚಿನ ಮಾಡಿನ ಕಟ್ಟಡವಿದೆ. ಕುಡ್ತಮುಗೇರು ಕೇಂದ್ರಕ್ಕೆ ಸರಕಾರದಿಂದ ಮಂಜೂರಾದ 5 ಸೆಂಟ್ಸ್‌ ಜಾಗವಿದೆ. ಕಟ್ಟಡಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪುಣಚ ಮತ್ತು ಅಡ್ಯನಡ್ಕದಲ್ಲಿಯೂ ಸ್ವಂತ ಜಾಗವಿದೆ. ಅಡ್ಯನಡ್ಕದಲ್ಲಿ ಕಟ್ಟಡವಿದೆ. ಕನ್ಯಾನದಲ್ಲಿ ಗ್ರಾ.ಪಂ. ಕಟ್ಟಡದಲ್ಲಿ ಕೇಂದ್ರ ಕಾರ್ಯ ನಿರ್ವಹಿಸುತ್ತಿದೆ.

ಕಟ್ಟಡ ನಿರ್ಮಾಣ ಸ್ಥಗಿತ
ವಿಟ್ಲ ಪಶುವೈದ್ಯ ಆಸ್ಪತ್ರೆಗೆ 18.90 ಲಕ್ಷ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ. 14 ಗ್ರಾಮಗಳ ಪ್ರಮುಖ ಕೇಂದ್ರವಾಗಿರುವ ವಿಟ್ಲಕ್ಕೆ ಈ ಕಟ್ಟಡ ಚಿಕ್ಕದಾಯಿತೆಂಬ ಅಭಿಪ್ರಾಯ ಕೃಷಿಕರದ್ದು. ಜತೆಗೆ, ಅದರ ಕಾಮಗಾರಿಯೂ ಐದು ತಿಂಗಳಿಂದ ಸ್ಥಗಿತಗೊಂಡಿದೆ. ಕರ್ನಾಟಕ ರೂರಲ್‌ ಇನ್‌ಫ್ರಾಸ್ಟ್ರಕ್ಚರ್‌ ಡೆವಲೆಪ್‌ಮೆಂಟ್‌ ಲಿಮಿಟಿಡ್‌ (ಕೆಆರ್‌ಐಡಿಎಲ್‌) ಈ ಕಟ್ಟಡದ ಗುತ್ತಿಗೆದಾರರು. ಆರ್‌ಐಡಿಎಫ್‌ ಸ್ಕೀಮ್‌ನಲ್ಲಿ ಕಟ್ಟಡ ನಿರ್ಮಾಣವಾಗುತ್ತಿದೆ. ಕೆಆರ್‌ಐಡಿಎಲ್‌ ಉಪಗುತ್ತಿಗೆದಾರರನ್ನು ನೇಮಿಸಿದ್ದು, ಅನುದಾನ ಬಿಡುಗಡೆ ಆಗದಿರುವುದೇ ಕಾಮಗಾರಿ ಸ್ಥಗಿತಗೊಳಿಸಲು ಕಾರಣ ಎಂಬ ಮಾತು ಕೇಳಿಬರುತ್ತಿದೆ.

ಗ್ರಾಮ 14, ಚಿಕಿತ್ಸಕರು ಮೂವರು
ಹಿರಿಯ ಪಶು ವೈದ್ಯಕೀಯ ಪರೀಕ್ಷಕರೊಬ್ಬರಿಗೆ ಕುಡ್ತಮುಗೇರು ಕೇಂದ್ರಕ್ಕೆ 3 ದಿನ ಮತ್ತು ವಿಟ್ಲಕ್ಕೆ 3 ದಿನ ಓಡಾಡಬೇಕು. ಕನ್ಯಾನದ ಪರೀಕ್ಷಕರು 2 ದಿನ ಪುಣಚಕ್ಕೆ ಓಡಾಡಬೇಕು. ಪಶು ವೈದ್ಯಾಧಿಕಾರಿ ಮತ್ತು ಹಿರಿಯ ಪಶುವೈದ್ಯಕೀಯ ಪರೀಕ್ಷಕರು 14 ಗ್ರಾಮಗಳಿಗೂ ಓಡಾಡಬೇಕು. ಜಾನುವಾರುಗಳ ಆರೋಗ್ಯ ಕಾಪಾಡಲು ಇವರು ಹಗಲು ರಾತ್ರಿಯೆನ್ನದೆ ಕರ್ತವ್ಯ ನಿರ್ವಹಿಸಬೇಕು. ಸರಕಾರದ ಕೆಲವೊಂದು ಯೋಜನೆಗಳಿಗೆ ಸಂಬಂಧಪಟ್ಟಂತೆ
ಸಹಾಯಧನ ಅರ್ಜಿ ಆಹ್ವಾನಿಸಿ, ಅವುಗಳ ಮಾರ್ಗದರ್ಶನ ಮಾಡಬೇಕು. ದಾಖಲೆಗಳನ್ನು ಸಿದ್ಧಪಡಿಸಬೇಕು. ಹೈನು
ಗಾರರ, ಸಾಕುಪ್ರಾಣಿಗಳ ಮಾಲಕರ ದೂರವಾಣಿ ಕರೆಗಳನ್ನು ಸ್ವೀಕರಿಸಿ, ತತ್‌ ಕ್ಷಣದ ಪರಿಹಾರ ಸೂಚಿಸಬೇಕು. ಕಠಿನ
ಪರಿಸ್ಥಿತಿಯಲ್ಲಿ ಸ್ಥಳಕ್ಕೆ ಧಾವಿಸಬೇಕು. ಹುಚ್ಚು ನಾಯಿ ನಿರೋಧಕ ಲಸಿಕೆ ಹಾಕಲು ಶಿಬಿರಗಳನ್ನು ಆಯೋಜಿಸಬೇಕು. ಜತೆಗೆ 14 ಗ್ರಾಮಗಳ ಗ್ರಾಮಸಭೆಗಳಲ್ಲಿ ವರ್ಷಕ್ಕೆ ಎರಡು ಬಾರಿ ಭಾಗಿಯಾಗಬೇಕು. ಪ್ರತೀ ತಿಂಗಳ ಸಭೆ, ವಿಶೇಷ ಸಭೆಗಳಲ್ಲಿ ಭಾಗವಹಿಸಬೇಕು.

ಕೆಆರ್‌ಐಡಿಎಲ್‌ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ, ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಾಡಿಲ್ಲ ಎಂಬ ಆರೋಪವಿದೆ. ಕಟ್ಟಡ ಕಾಮಗಾರಿ ಸ್ಥಗಿತಗೊಂಡಿರುವುದು, ಸಿಬಂದಿ ಕೊರತೆಗಳ ಬಗ್ಗೆ ಮೇಲಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳ ಗಮನಕ್ಕೆ ತರಲಾಗಿದೆ.
–  ಡಾ| ಹೆನ್ರಿ ಲಸ್ರಾದೋ
   ಸಹಾಯಕ ನಿರ್ದೇಶಕರು, ಬಂಟ್ವಾಳ ತಾಲೂಕು ಪಶುಸಂಗೋಪನೆ ಇಲಾಖೆ

  ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

1-qweewq

IPL ಇಂದು ಲೀಗ್‌ ಪಂದ್ಯಗಳಿಗೆ ತೆರೆ: KKR vs RR ಟೇಬಲ್‌ ಟಾಪರ್‌ಗಳ ಸೆಣಸಾಟ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ

Siddaramaiah ಸರಕಾರಕ್ಕೆ ನಾಳೆಗೆ 1ವರ್ಷ; ಸಂಭ್ರಮಾಚರಣೆಗೆ ಚುನಾವಣೆ ನೀತಿ ಸಂಹಿತೆ ಅಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Bantwal ಖೋಟಾ ನೋಟು ವಿನಿಮಯ ದಂಧೆ ಪ್ರಕರಣ ; ಆರೋಪಿಗಳಿಂದ 506 ಖೋಟಾ ನೋಟುಗಳ ವಶ

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

Uppinangady ಮರದಿಂದ ಬಿದ್ದು ಗಾಯಗೊಂಡ ವ್ಯಕ್ತಿ ಸಾವು

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Bantwal ಎರಡೂಕಾಲು ಎಕ್ರೆ ವಿಸ್ತೀರ್ಣ; ಅಭಿವೃದ್ಧಿ ಆಗದೇ ಜೀರ್ಣ

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

Dharmasthala ಯಾತ್ರಾರ್ಥಿ ಮಹಿಳೆಯ ಬ್ಯಾಗಿನಿಂದ ಚಿನ್ನಾಭರಣ ಕಳವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

Kundapura ತಾಯಿಯ ಶವದೊಂದಿಗೆ 72 ಗಂಟೆ ಕಳೆದಿದ್ದ ಪುತ್ರಿ!

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ಎಸೆಸೆಲ್ಸಿ ಪಾಠಕ್ಕೆ ತ್ರಿವಳಿ ಪರೀಕ್ಷೆ ಅಡ್ಡಿ !

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

ನಾನು 100 ಕೋ.ರೂ. ಆಮಿಷ ಒಡ್ಡಿದ್ದರೆ ಲೋಕಾಯುಕ್ತಕ್ಕೆ ದೂರು ಕೊಡಿ: ಡಿಕೆಶಿ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.