ಧವನ್‌ ಪತ್ನಿಯ ಹೊರದಬ್ಬಿದ ಎಮಿರೇಟ್ಸ್‌ ವಿಮಾನ


Team Udayavani, Dec 30, 2017, 6:15 AM IST

Dhawan-800.jpg

ಮುಂಬೈ: ಇತ್ತೀಚೆಗೆ ಖ್ಯಾತ ಬ್ಯಾಡ್ಮಿಂಟನ್‌ ಆಟಗಾರ್ತಿ ಪಿ.ವಿ.ಸಿಂಧು ತಮ್ಮ ಜತೆಗೆ ಅನುಚಿತ ವರ್ತನೆ ತೋರಿದ ಏರ್‌ ಇಂಡಿಗೊ ಸಂಸ್ಥೆ ಸಿಬ್ಬಂದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಕಿಟ್‌ಬ್ಯಾಗ್‌ ವಿವಾದಕ್ಕೆ ಒಳಗಾಗಿದ್ದ ಈ ಘಟನೆ ಇನ್ನೂ ಮಾಸಿಲ್ಲ. ಇದೀಗ ಅಂತಹುದೇ ಒಂದು ಅವಮಾನಕ್ಕೆ ಭಾರತ ಕ್ರಿಕೆಟ್‌ ತಂಡದ ಆರಂಭಿಕ ಬ್ಯಾಟ್ಸ್‌ಮನ್‌ ಶಿಖರ್‌ ಧವನ್‌ ಹಾಗೂ ಕುಟುಂಬ ಒಳಗಾಗಿದೆ. ದುಬೈನಲ್ಲಿ ಅರಬ್‌ ಎಮಿರೇಟ್ಸ್‌ ವಿಮಾನ ಏರುವ ಮೊದಲು ಘಟನೆ ನಡೆದಿದ್ದು ಆಂಗ್ಲ ಮಾಧ್ಯಮಗಳಲ್ಲಿ ವರದಿಯಾಗಿದೆ. ಅಷ್ಟೇ ಅಲ್ಲ ಸ್ವತಃ ಶಿಖರ್‌ ಧವನ್‌ ಟ್ವೀಟರ್‌ನಲ್ಲಿ ಘಟನೆಗೆ ಕಾರಣವಾದ ಅರಬ್‌ ಎಮಿರೇಟ್ಸ್‌ ವಿಮಾನಯಾನ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಧವನ್‌ ಅವರ ಕುಟುಂಬ ಸದಸ್ಯರ (ಹೆಂಡತಿ ಆಯೀಷಾ, ಇಬ್ಬರು ಮಕ್ಕಳು) ಜನ್ಮ ದಿನಾಂಕ ದಾಖಲಾತಿ ಇಲ್ಲ ಎನ್ನುವ ಕಾರಣಕ್ಕೆ ಧವನ್‌ ಪತ್ನಿ ಆಯೀಷಾ ಹಾಗೂ ಇಬ್ಬರು ಪುಟ್ಟ ಮಕ್ಕಳಿಗೆ ಸಂಸ್ಥೆ ಸಿಬ್ಬಂದಿಗಳು ವಿಮಾನವೇರಲು ಅವಕಾಶ ನೀಡಿರಲಿಲ್ಲ. ಇದು ವಿವಾದಕ್ಕೆ ಕಾರಣವಾಗಿದೆ.

ಏನಿದು ಘಟನೆ?: ಭಾರತ ತಂಡ ಸುದೀರ್ಘ‌ ಸರಣಿಗಾಗಿ ಮುಂಬೈನಿಂದ ಬುಧವಾರ ದುಬೈ ಮೂಲಕ ದಕ್ಷಿಣ ಆಫ್ರಿಕಾಕ್ಕೆ ತೆರಳಬೇಕಿತ್ತು. ಬಹುತೇಕ ಆಟಗಾರರು ತಮ್ಮ ಪತ್ನಿ ಮತ್ತು ಮಕ್ಕಳೊಂದಿಗೆ ಪ್ರಯಾಣ ನಡೆಸಿದ್ದರು. ಭಾರತದಿಂದ ದುಬೈ ಮೂಲಕ ಆಫ್ರಿಕಾಕ್ಕೆ ತೆರಳಬೇಕಿತು. ಆದರೆ ದುಬೈನಲ್ಲಿ ಭಾರತ ಆಟಗಾರ ಧವನ್‌ ದಂಪತಿಗೆ ಸಂಕಟ ಎದುರಾಯಿತು. ಅರಬ್‌ ಎಮಿರೇಟ್ಸ್‌ ವಿಮಾನದಲ್ಲಿ ಬೋರ್ಡಿಂಗ್‌ ಆಗುತ್ತಿದ್ದ ವೇಳೆ ಧವನ್‌ ಪತ್ನಿ ಆಯೀಷಾ ಹಾಗೂ ಇಬ್ಬರು ಮಕ್ಕಳ ಜನ್ಮ ದಿನಾಂಕ ದಾಖಲಾತಿ ತೋರಿಸುವಂತೆ ಸಿಬ್ಬಂದಿಗಳು ತಿಳಿಸಿದ್ದಾರೆ.ಆದರೆ ತಕ್ಷಣಕ್ಕೆ ಅವರ ಬಳಿ ದಾಖಲಾತಿ ಇರಲಿಲ್ಲ.

ಈ ವೇಳೆ ಧವನ್‌ ಅಧಿಕಾರಿಗಳಿಗೆ ಪರಿಸ್ಥಿತಿಯನ್ನು ವಿವರಿಸಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಅಧಿಕಾರಿಯೊಬ್ಬ ಧವನ್‌ ಜತೆ ಅನುಚಿತ ವರ್ತನೆ ತೋರಿದ್ದಾನೆ ಎಂದು ಧವನ್‌ ಟ್ವೀಟರ್‌ನಲ್ಲಿ ದೂರಿದ್ದಾರೆ. ಬಳಿಕ ಸಮಸ್ಯೆ ಬಗೆಹರಿಯದಿದ್ದಾಗ ಧವನ್‌ ಅವರ ಪತ್ನಿ ಆಯೀಷಾ ಮತ್ತು ಇಬ್ಬರು ಮಕ್ಕಳು ದುಬೈನಲ್ಲಿ ಉಳಿಯಬೇಕಾಯಿತು. ಭಾರತ ತಂಡದ ಉಳಿದ ಸದಸ್ಯರು ಪ್ರಯಾಣ ಮುಂದುವರಿಸಿದರು.

ಈ ಬಗ್ಗೆ ಧವನ್‌ ಟ್ವೀಟರ್‌ನಲ್ಲಿ ಅಸಮಾಧಾನ ಹೊರಹಾಕಿದ್ದು ಹೀಗೆ…” ಮುಂಬೈನಲ್ಲಿ ವಿಮಾನ ಹತ್ತುವ ಮೊದಲೇ ಅರಬ್‌ ಎಮಿರೇಟ್ಸ್‌ನವರು ನಮಗೆ ಮಾಹಿತಿ ನೀಡಬೇಕಿತ್ತು. ಅದನ್ನು ಬಿಟ್ಟು ಅರ್ಧದಾರಿಯಲ್ಲಿ ಕುಟುಂಬ ಸದಸ್ಯರನ್ನು ವಿಮಾನದಿಂದ ಹೊರಹಾಕಿರುವುದು ಎಷ್ಟು ಸರಿ. ಅಷ್ಟೇ ಅಲ್ಲ ಓರ್ವ ಸಿಬ್ಬಂದಿ ನಮ್ಮೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ್ದಾನೆ. ಸದ್ಯ ನನ್ನ ಕುಟುಂಬ ದುಬೈನಲ್ಲಿ ಇದೆ. ದಾಖಲಾತಿ ಪತ್ರಗಳು ಅವರ ಕೈಗೆ ತಲುಪಿದ ಬಳಿಕವಷ್ಟೇ ಅವರಿಗೆ ಆಫ್ರಿಕಾಕ್ಕೆ ಬರಲು ಸಾಧ್ಯವಾಗಲಿದೆ. ಒಟ್ಟಾರೆ ಘಟನೆ ಬಹಳ ಬೇಸರ ತಂದಿದೆ ಎಂದು ಧವನ್‌ ತಿಳಿಸಿದ್ದಾರೆ.

ಮೊದಲ ಟೆಸ್ಟ್‌ಗೆ ಧವನ್‌ ಅನುಮಾನ
ಶಿಖರ್‌ ಧವನ್‌ ಎಡಗಾಲಿನ ಪಾದದ ಗಾಯಕ್ಕೆ ತುತ್ತಾಗಿದ್ದಾರೆ. ಹೀಗಾಗಿ ಇವರು ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಆಡುವ ಸಾಧ್ಯತೆ ಕಡಿಮೆ. ಆಫ್ರಿಕಾಕ್ಕೆ ಹೊರಡುವ ಮೊದಲೇ ಇವರು ಗಾಯಗೊಂಡಿದ್ದರು. ಸದ್ಯ ಫಿಸಿಯೋ ಪೆಟ್ರಿಕ್‌ ಫ‌ಹಾರ್ಟ್‌ ಇವರನ್ನು ಎಂಆರ್‌ಐ ಸ್ಕ್ಯಾನ್‌ಗೆ ಒಳಪಡಿಸಿದ್ದಾರೆ. ಇದರ ವರದಿ ಇನ್ನಷ್ಟೇ ರಾಷ್ಟ್ರೀಯ ಆಯ್ಕೆ ಸಮಿತಿ ಕೈ ಸೇರಬೇಕಿದೆ.

ಟಾಪ್ ನ್ಯೂಸ್

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

2-thirthahalli

ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

1-sirsi

Modi ಬಂದಿದ್ದು ಕಾಂಗ್ರೆಸ್‌ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.