ಕಲಾವಿದರು ಸಂಘಟಿತರಾದರೆ ಕಲೆಗೆ ಪ್ರೇರಣೆ: ಆಲಗೂಡಕರ್‌


Team Udayavani, Dec 30, 2017, 11:46 AM IST

gul-7.jpg

ಕಲಬುರಗಿ: ಜಾನಪದ ಗೀತೆ, ಶರಣರ ವಚನಗಳು, ದಾಸವಾಣಿ, ಭಾವಗೀತೆಗಳು ಉಳಿದು ಬೆಳೆದು ಬರುವಲ್ಲಿ
ಕಲಾವಿದರ ಆಸಕ್ತಿ ಹಾಗೂ ಸತತ ಪ್ರಯತ್ನವೇ ಕಾರಣವಾಗಿದೆ. ಅಲ್ಲದೇ ಕಲಾವಿದರು ಸಂಘಟಿತರಾಗಿ ಸವಲತ್ತು ಪಡೆದಲ್ಲಿ ಕಲೆಗೂ ಪ್ರೇರಣೆ ದೊರಕಿದಂತಾಗುತ್ತದೆ ಎಂದು ಪಂಚಪೀಠದ ವಾರ್ತಾ ಪ್ರತಿನಿಧಿ ಸಿದ್ರಾಮಪ್ಪ ಆಲಗೂಡಕರ್‌ ಹೇಳಿದರು.

ನಗರದ ಮೌನೇಶ್ವರ ದೇವಸ್ಥಾನ ಸರಸ್ವತಿಪುರದಲ್ಲಿ ಕರ್ನಾಟಕ ಕಲಾ ಸಾಹಿತ್ಯ ಸಂಸ್ಕೃತಿ ಸೇವಾ ಸಂಸ್ಥೆಯಿಂದ ಹಮ್ಮಿಕೊಳ್ಳಲಾಗಿದ್ದ ಸಂಗೀತ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕಲಾವಿದರ ಪ್ರತಿಭೆ ಗುರುತಿಸಿ ಸಮಾಜ ಸರಕಾರ ಗೌರವಿಸಬೇಕು. ಕಲೆಯಿಂದ ಸಾಕ್ಷಾತ್ಕಾರ ಪಡೆಯುವಂತೆ ಆಗಬೇಕು. ಕಲಾಸಕ್ತರು ಕಲೆಯಲ್ಲಿ ಇನ್ನು ಹೆಚ್ಚಿನ ಸಂಶೋಧನೆ ಮಾಡಬೇಕು. ಅದನ್ನು ಸಮಾಜಕ್ಕೆ ಪರಿಚಯಿಸಬೇಕು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ರಾಜೆ ಶಿವಶರಣಪ್ಪ ವಕೀಲರು ಮಾತನಾಡಿ, ಅನೇಕ ಸಂಗೀತ ಉಪಾಸಕರು ಸಾಧನೆ ಮಾಡಿ, ಗಾನಗಂಧರ್ವರಾಗಿ ಗಾನ ಪಂಡೀತರಾಗಿ, ಸಂಗೀತ ದಿಗ್ಗಜರೆನಿಸಿಕೊಂಡು ಹೋಗಿದ್ದಾರೆ ಎಂದರು. ಸಂಸ್ಥೆಯ ಅಧ್ಯಕ್ಷ ಬಾಬುರಾವ ಕೋಬಾಳ, ಕಲಾವಿದರ ಬದುಕು ಅನುಕರಣೀಯ ಆಗಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಗುರುನಾಥ ಶಾಸ್ತ್ರೀ ನೆಲೋಗಿ, ಪಶುಪಕ್ಷಿಗಳು ತಮ್ಮ ಭಾಷೆಯಲ್ಲಿ ಸುಂದರವಾಗಿ ಹಾಡಿ ಆನಂದಿಸುತ್ತಿವೆ. ಸಂಗೀತದಲ್ಲಿ ಅಪಾರವಾದ ಶಕ್ತಿ ಅಡಗಿದೆ. ಸಂಗೀತ ಕಲಿಯುವುದರಿಂದ, ಹಾಡುವುದರಿಂದ, ಕೇಳುವುದರಿಂದ ಮನುಷ್ಯರಿಗೆ ಆಯುಷ್ಯ, ಆನಂದ, ಆರೋಗ್ಯ ತಂದುಕೊಡುತ್ತದೆ ಎಂದು ಹೇಳಿದರು.

ಹಿರಿಯ ಶಿಲ್ಪಿ ಕಲಾವಿದರಾದ ಈರಣ್ಣಾ ಕಂಬಾರ, ಇಸ್ಮಾಯಿಲ್‌ಸಾಬ್‌ ಲದಾಫ್‌, ಕೃಷ್ಣಯ್ಯ, ಮಡಿಕಟ್ಟು, ಚಂದ್ರಕಲಾ ಟೆಂಗಳಿ ಮುಂತಾದವರಿದ್ದರು. ನಂತರ ನಡೆದ ಸಂಗೀತ ಸಂಭ್ರಮ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಆಕಾಶವಾಣಿ ಕಲಾವಿದರಾದ ಗುರುಶಾಂತಯ್ಯ ಸ್ಥಾವರಮಠ, ಕಾಳಪ್ಪ ಭಂಟನಳ್ಳಿ ವಾಣಿಶ್ರೀ ವಾಲಿಕಾರ, ದತ್ತರಾಜ ಕಲಶೆಟ್ಟಿ, ಕಸ್ತೂರಿ ಡಿ, ಘಟ್ಟಿಕಾರ್‌, ರಾಚಯ್ಯಸ್ವಾಮಿ ಮಠಪತಿ, ಗಂಗಾಧರ ಎಚ್‌. ಪಾಟೀಲ, ರೇವಣಯ್ಯ ಸ್ವಾಮಿ ಸುಂಟನೂರ, ಸೋಮಯ್ಯ ಸಿಧನೂರ, ಸುಮಂಗಲಾ ಕೋರಿ, ಚೇತನ ಬಿ.ಕೆ., ಗುರುಲಿಂಗಯ್ನಾ ಬಸವಂತವಾಡಿ, ಪ್ರಶಾಂತ ಗೋಲ್ಡಸ್ಮಿತ್‌ ವೀರಭದ್ರಯ್ಯ ಸ್ಥಾವರಮಠ, ಶ್ರೀಮಂತ ಚಿಂಚನಸೂರ, ಪ್ರಶಾಂತ ಕಲಬುರಗಿ ಸುಗಮ ಸಂಗೀತ, ತತ್ವಪದ ಜಾನಪದ ಗೀತೆ ದಾಸವಾಣಿ, ವಚನ ಗಾಯನ ಹಾಡಿ, ಜನಮನ ಸೆಳೆದರು.

ಟಾಪ್ ನ್ಯೂಸ್

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

1-dddasd

Kalaburagi: ಬಿಜೆಪಿ ಕಾರ್ಯಕರ್ತನ ಮೇಲೆ ಮರಣಾಂತಿಕ ಹಲ್ಲೆ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.