ಅಪಘಾತದಲ್ಲಿ ಮೃತಪಟ ಮಾದಿಗ ಕುಟುಂಬಕ್ಟೆ ನೆರವು


Team Udayavani, Dec 30, 2017, 1:59 PM IST

VIJ-2.jpg

ಬಸವನಬಾಗೇವಾಡಿ: ಹುಬ್ಬಳ್ಳಿಯ ಮಾದಿಗ ಸಮಾವೇಶಕ್ಕೆ ತೆರಳುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಪಟ್ಟಣದ ಮಾದಿಗ ಸಮಾಜದವರ ಕುಟುಂಬಗಳಿಗೆ ರಾಜ್ಯಸರಕಾರ ಎಲ್ಲ ರೀತಿ ಸಹಾಯ, ಸಹಕಾರ ನೀಡಲು ಬದ್ಧವಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ಹೇಳಿದರು. ಶುಕ್ರವಾರ ಪಟ್ಟಣದ ಚನ್ನಬಸವೇಶ್ವರ ನಗರಕ್ಕೆ ಭೇಟಿ ನೀಡಿ ಮೃತ ಕುಟುಂಬದವರ, ಪೌರ ಕಾರ್ಮಿಕರ, ಅಂಗವಿಕಲರ ಹಾಗೂ ವಿವಿಧ ಸಂಘಟನೆಗಳ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು.

ಕಳೆದ ವರ್ಷ ಡಿ. 11, 2016ರಂದು ಹುಬ್ಬಳ್ಳಿಗೆ ತೆರಳುತ್ತಿದ್ದ ವೇಳೆ ಮಾದಿಗ ಸಮಾಜದ 6 ಜನ ಹಾಗೂ ಲಿಂಗಾಯತ ಸಮಾಜದ ವ್ಯಕ್ತಿಯೊಬ್ಬ ಅಪಘಾತದಲ್ಲಿ ಮೃತಪಟ್ಟು 7 ಜನರು ಗಂಭೀರ ಗಾಯಗೊಂಡದ್ದರು. 

ಸಂತ್ರಸ್ತ ಕುಟುಂಬಗಳಿಗೆ ರಾಜ್ಯ ಸರಕಾರದಿಂದ ತಲಾ ಎರಡು ಎಕರೆ ಜಮೀನು ಹಾಗೂ ಸರಕಾರದ ವಿವಿಧ ಸಾಲ ಸೌಲಭ್ಯಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ| ಎಂ.ಬಿ. ಪಾಟೀಲ, ಬಸವನಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಮಾದಿಗ ಮಹಾಸಭಾ ಸೇರಿದಂತೆ ಅನೇಕ ಜನರು ಸಹಾಯಹಸ್ತ ಚಾಚಿದ್ದಾರೆ ಎಂದರು.

ರಾಜ್ಯ ಸರಕಾರದಿಂದ ಮೃತರ ಕುಟುಂಬದವರಿಗೆ ತಲಾ ಎರಡು ಎಕರೆ ಜಮೀನು ನೀಡಲು ಭರವಸೆ ನೀಡಲಾಗಿತ್ತು. ಆದರೆ ಬಸವನಬಾಗೇವಾಡಿ ಪಟ್ಟಣ ಹಾಗೂ ತಾಲೂಕಿನಲ್ಲಿ ಈಗಾಗಲೇ ಜಮೀನನ್ನು ಗುರುತಿಸಲಾಗಿದೆ. ಆದರೆ ಖಾಸಗಿ ಜಮೀನಿನ ಮಾಲೀಕರು ಹೆಚ್ಚಿನ ಬೆಲೆ ಬೇಡಿಕೆ ಇಟ್ಟಿದ್ದರಿಂದ ವಿಳಂಬವಾಗಿರುವುದಕ್ಕೆ ವಿಷಾಧಿ ಸುತ್ತೇನೆ. ಶೀಘ್ರದಲ್ಲೇ ಮೃತರ ಕುಟುಂಬದವರಿಗೆ ಜಮೀನು ನೀಡುವ ಭರವಸೆ ನೀಡಿದರು.

ಮೃತ ಹಾಗೂ ಗಾಯಗೊಂಡ ಕುಟುಂಬದ ಸದಸ್ಯರಲ್ಲಿ ಯಾರಿಗಾದರು ಉದ್ಯೋಗ ಕೊಡುವ ನಿಟ್ಟಿನಲ್ಲಿ ಈಗಾಗಲೇ ಡಾ| ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮ ಅಧಿ ಕಾರಿಗಳ ಜೊತೆ ಮಾತನಾಡಿದ್ದೇನೆ. ಅವರು ಕೂಡಾ ಸಹಾಯ ಸಹಕಾರ ನೀಡುವುದಾಗಿ ಹೇಳಿದ್ದಾರೆ. ಸಾಲ ಸೌಲಭ್ಯ ಸೇರಿದಂತೆ ರಾಜ್ಯ ಸರಕಾರದ ಅನೇಕ ಸೌಲತ್ತು ಒದಗಿಸಲು ನಾನು ಮತ್ತು ಶಾಸಕ ಶಿವಾನಂದ ಪಾಟೀಲ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದರು. 

ಪೌರ ಕಾರ್ಮಿಕರ ನೌಕರಿಯನ್ನು ಕಾಯಂ ಮಾಡಿ ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿ ಮಾಡಿದ್ದರಿಂದ ನೆಮ್ಮದಿಯ ಜೀವನ ನಡೆಸುವಂತಾಗಿದೆ. ಮಹಿಳಾ ಸ್ವಸಹಾಯ ಗುಂಪುಗಳು ಸೇರಿದಂತೆ ಇತರರಿಗೆ ಸಾಲ ಸೌಲಭ್ಯ ಒದಗಿಸುವ ಮೂಲಕ ಆರ್ಥಿಕವಾಗಿ ಮುಂದೆ ಬರಲು ಸರಕಾರ ಕ್ರಮ ಕೈಗೊಂಡಿದೆ ಎಂದರು. 

ಪುರಸಭೆ ಉಪಾಧ್ಯಕ್ಷ ಸಂಜೀವ ಕಲ್ಯಾಣಿ ಮಾತನಾಡಿ, ಮೃತ ಹಾಗೂ ಗಾಯಾಳು ಕೆಲ ಕುಟುಂಬಗಳಿಗೆ ಸಚಿವ ಎಂ.ಬಿ. ಪಾಟೀಲ, ಶಾಸಕ ಶಿವಾನಂದ ಪಾಟೀಲ ತಲಾ 50 ಸಾವಿರ ನೀಡಿದ್ದಾರೆ. ಈ ಎಲ್ಲ ಕುಟುಂಬಗಳಿಗೆ ಪುರಸಭೆ ವತಿಯಿಂದ ಮನೆ ಕಟ್ಟಡಕ್ಕಾಗಿ 1.80 ಹಣ ಮಂಜೂರಾಗಿದೆ ಎಂದು ಹೇಳಿದರು. 

ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ, ಶೇಖರ ಗೊಳಸಂಗಿ, ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ರವಿ ರಾಠೊಡ, ಪುರಸಭೆ ಸದಸ್ಯ ಕಮಲಸಾಬ ಕೊರಬು, ಮುದುಕು ಬಸರಕೊಡ, ಸಂಗನಬಸು ಪೂಜಾರಿ, ಮುತ್ತಣ್ಣ ಬೆಣ್ಣೂರ, ಸುರೇಶ ಮಣ್ಣೂರ, ಅಶೋಕ ಚಲವಾದಿ, ತಮ್ಮಣ್ಣ ಕಾನಾಗಡ್ಡಿ, ಅರವಿಂದ ಸಾಲವಾಡಗಿ, ವೈ.ಎಸ್‌. ಮ್ಯಾಗೇರಿ, ರಮೇಶ
ಮ್ಯಾಗೇರಿ, ಆರ್‌.ಕೆ. ಬಾಗೇವಾಡಿ, ಸಂಗಪ್ಪ ಕಲ್ಯಾಣಿ, ಬಸಗೊಂಡ ಹಾದಿಮನಿ, ಮಲ್ಲಪ್ಪ ಪೂಜಾರಿ, ಅಶೋಕ
ಕರೆಕಲ್ಲ, ಕನಕೇಶ ಬಾಗೇವಾಡಿ, ರಾಜು ಫಿರಂಗಿ, ಮಲ್ಲು ದೇವರಮನಿ, ಪುರಸಭೆ, ಸಮಾಜಕಲ್ಯಾಣ, ಡಾ| ಬಿ.ಆರ್‌. ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧಿಕಾರಿಗಳು ಇದ್ದರು.

ಇದೇ ಸಂದರ್ಭದಲ್ಲಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಬಸವ ಭವನಕ್ಕೆ ಈಗಾಗಲೇ 6 ಕೋಟಿ ಹಣ ಬಿಡುಗಡೆಯಾಗಿ ಕಾಮಗಾರಿ ಪ್ರಾರಂಭವಾಗಿದೆ. ಇನ್ನು ಹೆಚ್ಚವರಿ 2 ಕೋಟಿ ಹಣ ನೀಡುವಂತೆ ಶಾಸಕ ಶಿವಾನಂದ ಪಾಟೀಲ ಅವರ ಸೂಚನೆಯಂತೆ ಸ್ಥಳೀಯ ಮುಖಂಡರು ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ
ಅವರಿಗೆ ಮನವಿ ಸಲ್ಲಿಸಿದರು. ಇದಕ್ಕೆ ಸಚಿವರು ಹಣ ಬಿಡುಗಡೆಗೊಳಿಸುವ ಭರವಸೆ ನೀಡಿದರು.

ಟಾಪ್ ನ್ಯೂಸ್

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

hardik pandya and natasa stankovic getting divorced?

Divorced? ಮುರಿದು ಬಿತ್ತಾ ಹಾರ್ದಿಕ್- ನತಾಶಾ ಸಂಬಂಧ? 70% ಆಸ್ತಿ ಕಳೆದುಕೊಳ್ತಾರಾ ಪಾಂಡ್ಯ?

10-gundlupete

Gundlupete: ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಯುವಕ ಆತ್ಮಹತ್ಯೆ

8-dharmasthala

CM Siddaramaiah: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

IPL 2024; Who can get Orange Cap- Purple Cap? Here is the list

IPL 2024; ಯಾರಿಗೆ ಸಿಗಬಹುದು ಆರೆಂಜ್ ಕ್ಯಾಪ್- ಪರ್ಪಲ್ ಕ್ಯಾಪ್? ಇಲ್ಲಿದೆ ಪಟ್ಟಿ

7-gundlupete

Gundlupete: ಕಲುಷಿತ ನೀರು ಸೇವಿಸಿ ಮೂರು ಹಸುಗಳ ಸಾವು

thief

ಸಿನಿಮಾ ಶೈಲಿಯಲ್ಲಿ ಚಲಿಸುತ್ತಿದ್ದ ಟ್ರಕ್‌ನಿಂದ ಕಳ್ಳತನ… ವಿಡಿಯೋ ನೋಡಿ ಬೆಚ್ಚಿಬಿದ್ದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

police crime

Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್‍ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ

11-mammootty

Mammootty: ಎರಡು ವಿಭಿನ್ನ ಕಾಲಘಟ್ಟದ ಸಿನೆಮಾದಲ್ಲಿ ನಟ ಮಮ್ಮೂಟಿ

hardik pandya and natasa stankovic getting divorced?

Divorced? ಮುರಿದು ಬಿತ್ತಾ ಹಾರ್ದಿಕ್- ನತಾಶಾ ಸಂಬಂಧ? 70% ಆಸ್ತಿ ಕಳೆದುಕೊಳ್ತಾರಾ ಪಾಂಡ್ಯ?

10-gundlupete

Gundlupete: ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಯುವಕ ಆತ್ಮಹತ್ಯೆ

9-uv-fusion

Traffic Signal: ಬದುಕು ರೂಪಿಸಿದ ಟ್ರಾಫಿಕ್‌ ಸಿಗ್ನಲ್‌ಗ‌ಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.