ತಲೈವಾ ಪಾಲಿಟಿಕ್ಸ್ ಎಂಟ್ರಿ; ಹೊಸ ಪಕ್ಷ ಕಟ್ತಾರೆ ರಜನಿ!
Team Udayavani, Dec 31, 2017, 9:24 AM IST
ಚೆನ್ನೈ: ಕಳೆದ ಕೆಲ ದಿನಗಳಿಂದ ತಮಿಳುನಾಡು ಸೇರಿದಂತೆ ರಾಷ್ಟ್ರಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಸೂಪರ್ಸ್ಟಾರ್ ರಜನಿಕಾಂತ್ ಅವರ ರಾಜಕೀಯ ರಂಗ ಪಾದಾರ್ಪಣೆ ಭಾನುವಾರ ಖಚಿತಗೊಂಡಿದ್ದು ಹೊಸ ಪಕ್ಷ ಕಟ್ಟುತ್ತಿರುವುದಾಗಿ ಘೋಷಣೆ ಮಾಡಿದ್ದಾರೆ.
ಕಳೆದ 6 ದಿನಗಳಿಂದ ರಾಘವೇಂದ್ರ ಹಾಲ್ನಲ್ಲಿ ಅಭಿಮಾನಿಗಳೊಂದಿಗೆ ಸಂವಾದ ನಡೆಸುತ್ತಿರುವ ರಜನಿಕಾಂತ್ ವರ್ಷಾಂತ್ಯಕ್ಕೆ ಕೋಟ್ಯಂತರ ಅಭಿಮಾನಿಗಳ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.
ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ರಜನಿಕಾಂತ್ ‘ನಾನು ರಾಜಕೀಯಕ್ಕೆ ಪ್ರವೇಶ ಮಾಡುತ್ತಿದ್ದೇನೆ. ರಾಜಕೀಯ ಕ್ಷೇತ್ರ ಬಹಳಷ್ಟು ಹದಗೆಟ್ಟಿದೆ. ದೇಶದಲ್ಲಿ ಪ್ರಜಾಪ್ರಭುತ್ವಕ್ಕಾಗಿ ಹೋರಾಡಬೇಕಾಗಿದೆ. ಜಾತಿ,ಮತ ಭೇಧವಿಲ್ಲದ ಹೊಸ ಪಕ್ಷ ಕಟ್ಟುತ್ತಿದ್ದೇನೆ’ ಎಂದರು.
ತಮಿಳುನಾಡಿನ ಜನತೆಗಾಗಿ,ಅಭಿವೃದ್ಧಿಗಾಗಿ ಹೋರಾಟ ಮಾಡುವುದಾಗಿ ಘೋಷಣೆ ಮಾಡಿದರು.
‘ಕಮರ್ಣ್ಯೇ ವಾದಿಕಾರಸ್ತೇ ಮಾಫಲೇಶು ಕದಾಚನ, ಎಂದು ಭಗವಾನ್ ಶ್ರೀಕೃಷ್ಣ ಭಗವದ್ಗೀತೆಯಲ್ಲಿ ಹೇಳಿದ್ದಾನೆ. ಅಂದರೆ ನಿನ್ನ ಕೆಲಸವನ್ನು ನೀನು ಶ್ರದ್ಧೆಯಿಂದ ಮಾಡು, ಪ್ರತಿಫಲವನ್ನು ಅಪೇಕ್ಷಿಸಬೇಡ. ಯುದ್ಧ ಕ್ಷೇತ್ರದಲ್ಲಿ ಹೋರಾಟ ಮಾಡಬೇಕಿದೆ. ಮಡಿದರೆ ವೀರ ಸ್ವರ್ಗ. ನಾನು ಯುದ್ಧಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇನೆ ಇನ್ನು ಅಂಬನ್ನು (ಬಾಣಗಳು) ಬಿಡುವುದು ಮಾತ್ರ ಬಾಕಿ’ ಎಂದು ತಮ್ಮದೇ ಶೈಲಿಯಲ್ಲಿ ಡೈಲಾಗ್ ಹೊಡೆದರು.
‘ಮುಂದಿನ ಲೋಕಸಭಾ ಚುನಾವಣೆಯ ಒಳಗೆ ಪಕ್ಷದ ಕುರಿತಾಗಿನ ಸಂಪೂರ್ಣ ವಿವರ ನೀಡುತ್ತೇನೆ. ನಾವು ತಮಿಳುನಾಡಿನ ಎಲ್ಲಾ 235 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡುತ್ತೇವೆ’ ಎಂದರು.
ನನ್ನದು ಬಿಲ್ಡಪ್ ಜಾಸ್ತಿ ಆಯೀತೆ?
ತಮ್ಮಮಾತಿನ ವೇಳೆ ನನ್ನುದು ಸ್ವಲ್ಪ ಬಿಲ್ಡಪ್ ಜಾಸ್ತಿ ಆಯೀತೆ ಎಂದರು. ಈ ವೇಳೆ ಅಭಿಮಾನಿಗಳು ಕೇಕೆ ಹಾಕಿ ಸಂಭ್ರಮಿಸಿದರು.
ರಜನಿಕಾಂತ್ ರಾಜಕೀಯ ಎಂಟ್ರಿಯಾಗುತ್ತಿದ್ದಂತೆ ಚೆನ್ನೈ ಸೇರಿದಂತೆ ತಮಿಳುನಾಡಿನಾದ್ಯಂತ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿ ಕೇಕೆ ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್
MUST WATCH
ಹೊಸ ಸೇರ್ಪಡೆ
Kollywood: ಕಮಲ್ ಹಾಸನ್ ʼಇಂಡಿಯನ್ -2ʼ ಬಿಡುಗಡೆ ಮುಂದೂಡಿಕೆ; ಈ ತಿಂಗಳಿನಲ್ಲಿ ರಿಲೀಸ್?
Bellary; ಸಿದ್ದರಾಮಯ್ಯ ಹುಚ್ಚು ರಾಜಕಾರಣಕ್ಕೆ ದೊಡ್ಡ ಬೆಲೆ ತೆರಬೇಕಾಗುತ್ತದೆ: ಸದಾನಂದ ಗೌಡ
Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ
Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್
ʼಟಾಕ್ಸಿಕ್ʼ ಅಪ್ಡೇಟ್ಗಾಗಿ ಸೋಶಿಯಲ್ ಮೀಡಿಯಾದಲ್ಲಿ ಮತ್ತಷ್ಟು ಆ್ಯಕ್ಟಿವ್ ಆಗ್ತಾರಾ ಯಶ್?