ಹೊಸ ವರ್ಷಕ್ಕೆ ಸುದೀಪ್‌ ಮೊದಲ ಸಿನ್ಮಾ ಬಿಡುಗಡೆ


Team Udayavani, Dec 31, 2017, 11:00 AM IST

sudweep.jpg

ಇನ್ನೇನು ಹೊಸ ವರ್ಷಕ್ಕೆ ಒಂದೇ ದಿನ ಬಾಕಿ. ಈ ಹೊಸ ವರ್ಷದಲ್ಲಿ ಈಗಾಗಲೇ ತಿಳಿದಿರುವಂತೆ ಸಾಲು ಸಾಲು ಸ್ಟಾರ್‌ ಚಿತ್ರಗಳು ಬಿಡುಗಡೆಯಾಗುತ್ತಿವೆ. ಸುದೀಪ್‌ ಅಭಿನಯದ ಚಿತ್ರವೊಂದು ಹೊಸ ವರ್ಷದ ಮೊದಲ ತಿಂಗಳಲ್ಲಿ ತೆರೆಕಾಣುತ್ತಿರುವುದು ವಿಶೇಷ. ಹೌದು. ಸುದೀಪ್‌, ಗುರುನಂದನ್‌ ಅಭಿನಯದ “ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ವಿಶೇಷ ಪಾತ್ರದ ಮೂಲಕ ಕಾಣಿಸಿಕೊಂಡಿದ್ದಾರೆ.

ಸುಮಾರು ನಾಲ್ಕು ದಿನಗಳ ಕಾಲ ಆ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಸುದೀಪ್‌ ಅವರದು ಯಾವ ಪಾತ್ರ, ಅದು ಹೇಗೆಲ್ಲಾ ಇರುತ್ತೆ ಎಂಬುದಕ್ಕೆ ಸಿನಿಮಾ ಬರುವವರೆಗೆ ಕಾಯಬೇಕು. ಅಂದಹಾಗೆ, ಈ ಚಿತ್ರವನ್ನು ಜನವರಿ 19 ರಂದು ಬಿಡುಗಡೆ ಮಾಡಲು ನಿರ್ಮಾಪಕ ಕೆ.ಎ.ಸುರೇಶ್‌ ನಿರ್ಧರಿಸಿದ್ದಾರೆ.  ಸುದೀಪ್‌ ಅವರು “ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ನಟಿಸಿದ್ದೇನೋ ನಿಜ.

ಈಗಲ್‌ಟನ್‌ ರೆಸಾರ್ಟ್‌ನಲ್ಲಿ ಅವರ ಅಭಿನಯದ ದೃಶ್ಯಗಳನ್ನು ನಿರ್ದೇಶಕ ನರೇಶ್‌ಕುಮಾರ್‌ ಚಿತ್ರಿಸಿಕೊಂಡಾಗಿದೆ. ಚಿತ್ರದ ದ್ವಿತೀಯಾರ್ಧದಲ್ಲಿ ಸುದೀಪ್‌ ಅವರ ಹಲವು ಮಹತ್ವದ ದೃಶ್ಯಗಳಿದ್ದು, ಅದೊಂದು ಸ್ಟೈಲಿಶ್‌ ಆಗಿರುವ ಪಾತ್ರ ಎಂದಷ್ಟೇ ಹೇಳಬಹುದು. ಸುದೀಪ್‌ ಅವರ ಎಂಟ್ರಿಯಿಂದ “ರಾಜು ಕನ್ನಡ ಮೀಡಿಯಂ’ಗೆ ಸಖತ್‌ ಮೈಲೇಜ್‌ ಸಿಕ್ಕಿರುವುದಂತೂ ಹೌದು.

ಈ ಮೂಲಕ ಕೇವಲ ನಿರ್ಮಾಪಕರಷ್ಟೇ ಅಲ್ಲ, ನಾಯಕ ಗುರುನಂದನ್‌ಗೂ ಖುಷಿಯಾಗಿದೆ. ಈಗಾಗಲೇ ಚಿತ್ರಕ್ಕೆ ಬೇಡಿಕೆ ಹೆಚ್ಚಿದ್ದು, ರಾಜ್ಯ ಸೇರಿದಂತೆ ವಿದೇಶಗಳಲ್ಲೂ ಚಿತ್ರ ಬಿಡುಗಡೆಗೆ ವಿತರಕರು  ಹಕ್ಕು ಕೇಳಿದ್ದಾರೆ. ಈ ಹಿಂದೆ ಸುದೀಪ್‌ ಅವರ ಹುಟ್ಟುಹಬ್ಬಕ್ಕೆ  ಚಿತ್ರತಂಡ ಬಿಡುಗಡೆ ಮಾಡಿದ ಟೀಸರ್‌ ಭರ್ಜರಿ ಹಿಟ್ಸ್‌ ಆಗಿದ್ದು, ರಿಲೀಸ್‌ ಆದ ಒಂದೇ ವಾರಕ್ಕೆ ಸುಮಾರು 10 ಲಕ್ಷ ಜನರು ಟೀಸರ್‌ ವೀಕ್ಷಿಸಿದ್ದರು.

ಹಾಗಾಗಿ, ಚಿತ್ರದ ಮೇಲೆ ಒಂದಷ್ಟು ನಿರೀಕ್ಷೆ ಕೂಡ ಜಾಸ್ತಿಯಾಗಿತ್ತು. “ರಾಜು ಕನ್ನಡ ಮೀಡಿಯಂ’ ಚಿತ್ರದಲ್ಲಿ ಗುರುನಂದನ್‌ ನಾಯಕರಾದರೆ, ಅವರಿಗೆ ಆಶಿಕಾ, ಆವಂತಿಕಾ ಶೆಟ್ಟಿ ನಾಯಕಿಯರು. ಆ್ಯಂಜಲೀನಾ ಎಂಬ ರಷ್ಯದ ಮಾಡೆಲ್‌ ನಟಿಸಿರುವುದು ಇನ್ನೊಂದು ವಿಶೇಷ. ಜೊತೆಗೆ, ಪ್ರಥಮ್‌ ಕೂಡಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕಿರಣ್‌ ರವೀಂದ್ರನಾಥ್‌ ಸಂಗೀತವಿದೆ. ಶೇಖರ್‌ಚಂದ್ರ ಅವರ ಛಾಯಾಗ್ರಹಣವಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.