ಅವರು ಅಕ್ಕಿ ಲಾರಿ ಹಿಡಿದರೆ.. ಇವರು ಪರಿಶೀಲಿಸಿ ಬಿಟ್ಟರು
Team Udayavani, Dec 31, 2017, 11:07 AM IST
ಆಳಂದ: ಅಕ್ರಮವಾಗಿ ಅನ್ನಭಾಗ್ಯದ ಅಕ್ಕಿಯಲ್ಲಿ ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದೆ ಎಂದು ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಲಾರಿಯೊಂದನ್ನು ತಡೆದು ಪೊಲೀಸರಿಗೆ ಒಪ್ಪಿಸಿದರೆ, ಪೊಲೀಸರು ದಾಖಲೆಗಳಲ್ಲವು ಸರಿಯಾಗಿದ್ದವು ಪರಿಶೀಲಿಸಿ ಬಿಡಲಾಗಿದೆ ಎಂದು ತಿಳಿಸಿದ್ದಾರೆ.
ತಾಲೂಕಿನ ಖಜೂರಿ ಗಡಿಯಲ್ಲಿ ಜಯ ಕರ್ನಾಟಕ ಸಂಘಟನೆ ತಾಲೂಕು ಅಧ್ಯಕ್ಷ ಬಸವರಾಜ ಎಸ್. ಕೊರಳ್ಳಿ, ಖಜೂರಿ ಗ್ರಾಮ ಘಟಕದ ಅಧ್ಯಕ್ಷ ಕುಮಾರ ಬಂಡೆ ನೇತೃತ್ವದಲ್ಲಿ ಕಾರ್ಯಕರ್ತರು ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಲಾರಿಯಲ್ಲಿ ಸಾಗಿಸುತ್ತಿರುವುದನ್ನು ಪತ್ತೆ ಹಚ್ಚಿ, ತಡೆದು ನಿಲ್ಲಿಸಿ, ಪೊಲೀಸರ ವಶಕ್ಕೆ ಒಪ್ಪಿಸಿದರು.
ಲಾರಿಯಲ್ಲಿನ ಅಕ್ಕಿಯನ್ನು ಎಲ್ಲಿಂದ ಹಾಗೂ ಎಲ್ಲಿಗೆ ಪೂರೈಸಲಾಗುತ್ತಿತ್ತು ಎನ್ನುವ ಕುರಿತು ತನಿಖೆ ಕೈಗೊಳ್ಳಬೇಕು. ಇದರ ಹಿಂದೆ ದೊಡ್ಡ ಜಾಲವಿದ್ದು, ಸಮರ್ಪಕ ತನಿಖೆ ಆಗಬೇಕು ಎಂದು ಸಂಘಟಕರು ಆಗ್ರಹಿಸಿದರು.
ಸಂಘಟನೆಯ ಮುಖಂಡ ಶರಣು ಪಾಟೀಲ ಕೊಡಲಂಗರಗಾ, ಉಪಾಧ್ಯಕ್ಷ ಗುರು ಬಂಗರಗಿ ಹಾಗೂ ಖಜೂರಿ ಜಯ ಕರ್ನಾಟಕ ಸಂಘಟನೆಯ ಕಾರ್ಯಕರ್ತರು ಲಾರಿ ತಡೆ ಹಿಡಿಯುವ ಸಂದರ್ಭದಲ್ಲಿದ್ದರು.
ನೋಟಿಸ್ ಜಾರಿ: ಜಯ ಕರ್ನಾಟಕ ಸಂಘಟನೆ ಕಾರ್ಯಕರ್ತರು ಅಕ್ಕಿ ಲಾರಿ ಹಿಡಿದ ಬಗ್ಗೆ ತಿಳಿಸಿದಾಗ ಸಂಬಂಧಿತ ಆಹಾರ ಇಲಾಖೆ ಶಿರಸ್ತೇದಾರ ದತ್ತಪ್ಪ ಅವರನ್ನು ಪರಿಶೀಲನೆಗೆ ಕಳುಹಿಸಿಕೊಡಲಾಗಿತ್ತು. ಆದರೆ ಸ್ಥಳಕ್ಕೆ ಹೋದಾಗ ಲಾರಿಯೇ ಇರಲಿಲ್ಲ ಎಂದು ದತ್ತಪ್ಪ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ನೋಟಿಸ್
ನೀಡಲಾಗಿದೆ ಎಂದು ತಹಶೀಲ್ದಾರ್ ಬಸವರಾಜ ಎಂ. ಬೆಣ್ಣೆಶಿರೂರ ತಿಳಿಸಿದ್ದಾರೆ.
ಸುಳ್ಳು: ತಡೆದ ಲಾರಿಗೆ ದಾಖಲೆಗಳಿವೆ. ಲಾರಿ ಸೊಲ್ಲಾಪುರದಿಂದ ಅಹ್ಮದಾಬಾದ್ಗೆ ಹೊರಟಿತ್ತು, ದಾಖಲೆ ಪರಿಶೀಲಿಸಿ ಬಿಡಲಾಗಿದೆ ಎಂದು ಪಿಎಸ್ಐ ಸುರೇಶ ಬಾಬು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ