ನೂರೆಂಟು ನಿರೀಕ್ಷೆಯ ಹೊಸ ನೆಂಟಸ್ಥಿಕೆ


Team Udayavani, Jan 1, 2018, 3:10 PM IST

vij-2.jpg

ವಿಜಯಪುರ: ಹಲವು ಏಳು-ಬೀಳುಗಳ ಕೊಡುಗೆ ನೀಡಿ ಕಾಲುತೆಗೆದ ಹದಿನೇಳು, ಇದೀಗ ನೂರೆಂಟು ಕನಸುಗಳ ನಿರೀಕ್ಷೆಯಲ್ಲಿ ಹದಿನೆಂಟರ ನೆಂಟಸ್ತನಕ್ಕೆ ಜಿಲ್ಲೆ ತೆರೆದುಕೊಳ್ಳುತ್ತಿದೆ.

ಜಿಲ್ಲೆಯಲ್ಲಿ ಕಳೆದ 2017ರಲ್ಲಿ ಚಾಲನೆ ಪಡೆದಿರುವ ಕೆರೆ ತುಂಬುವ ಯೋಜನೆ 2018ರಲ್ಲಿ ಸಂಪೂರ್ಣಗೊಳ್ಳುವ ನಿರೀಕ್ಷೆ ಇದೆ. ಜಿಲ್ಲೆಯನ್ನು ಸಮಗ್ರ ನೀರಾವರಿ ಮಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಏತ ನೀರಾವರಿಗಳಲ್ಲಿ ಮುಳವಾಡ, ಚಿಮ್ಮಲಗಿ ಯೋಜನೆಯ ಬಹುತೇಕ ಕಾಮಗಾರಿಗಳು ಪೂರ್ಣಗೊಂಡಿದ್ದು, ಕೆಲವು ಭಾಗದಲ್ಲಿ ಪ್ರಾಯೋಗಿಕವಾಗಿ ನಾಲೆಗೆ ನೀರು ಹರಿದಿದೆ. ಮತ್ತೆ ಕೆಲವು ಕಡೆಗಳಲ್ಲಿ ನಾಲೆಗಳ ಮೂಲಕ ಜಿಲ್ಲೆಯ ನೂರೆಂಟು ಕೆರೆಗಳಿಗೆ ನೀರು ತುಂಬಿಸುವ ಕಾರ್ಯವೂ ಭರದಿಂದ ಸಾಗಿದೆ. 2018ರಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆ ಪೂರ್ಣಗೊಳ್ಳುವ ಜೊತೆಗೆ, ರೈತರ ಜಮೀನಿಗೆ ನೀರು ಹರಿಸುವಲ್ಲಿ ಈ ಯೋಜನೆಗಳು ನೆರವಾಗುತ್ತವೆ ಎಂದು ನಿರೀಕ್ಷೆ ರೈತರಲ್ಲಿದೆ.

ಇದಲ್ಲದೇ ಜಿಲ್ಲೆಯಲ್ಲಿ ಅತ್ಯಂತ ಎತ್ತರದ ಪ್ರದೇಶ ಎನಿಸಿರುವ ತಿಕೋಟಾ ಭಾಗಕ್ಕೆ ನೀರುವ ಹರಿಸುವ ಮಹತ್ವಾಕಾಂಕ್ಷೆಯ ಬಬಲೇಶ್ವರ-ತುಬಚಿ ಯೋಜನೆ ಕಾಮಗಾರಿಯೂ ಪೂರ್ಣಗೊಳ್ಳುವ ಕನಸು ಹೊತ್ತಿರುವ ರೈತರು, ಚಡಚಣ, ಪೀರಾಪುರ-ಬೂದಿಹಾಳ ಮಾತ್ರವಲ್ಲ ನಾಗರಬೆಟ್ಟ ಯೋಜನೆಯೂ ಕೈಗೂಡಿ ಜಿಲ್ಲೆ ಸಂಪೂರ್ಣ ನೀರಾವರಿ ಆಗುವ ನಿರೀಕ್ಷೆಯಲ್ಲಿದ್ದಾರೆ.

ಇನ್ನು ವಿಶ್ವವಿಖ್ಯಾತಿ ಪಡೆದಿರುವ ಐತಿಹಾಸಿಕ ಗೋಲಗುಮ್ಮಟ, ಆಗ್ರಾದಲ್ಲಿ ಬಿಳಿ ತಾಜಮಹಲ್‌ ನಿರ್ಮಾಣಕ್ಕೆ ಪ್ರೇರಣೆ ನೀಡಿದ ಕರಿತಾಜ್‌ ಎಂದೇ ಪ್ರಖ್ಯಾತಿ ಪಡೆದಿರುವ ಇಬ್ರಾಹಿಂ ರೋಜಾ, ನಿರ್ಮಾಣ ಕಾರ್ಯ ಅರ್ಧಕ್ಕೆ ನಿಂತರೂ ಜಗತ್ತಿನ ಜನರ ಅಚ್ಚರಿಗೆ ಕಾರಣವಾಗಿರುವ ಬಾರಾ ಕಮಾನ್‌ ಹೀಗೆ ಐತಿಹಾಸಿಕ ನೂರಾರು ಸ್ಮಾರಕಗಳು ಜಿಲ್ಲೆಯಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮನ್ನು ಕಾಣಲು ಬರುವ ನಿರೀಕ್ಷೆ ಹೊತ್ತಿವೆ.

ಗೋಲಗುಮ್ಮಟ ಸ್ಮಾರಕವನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರಿಸಬೇಕು. ಭಾರತೀಯ ಪುರಾತತ್ವ ಇಲಾಖೆಯ ವೃತ್ತ ಕಚೇರಿಯನ್ನು ಧಾರವಾಡದಿಂದ ವಿಜಯಪುರಕ್ಕೆ ಸ್ಥಳಾಂತರಿಸಬೇಕು ಎಂಬ ಬೇಡಿಕೆ ದಶಕದಿಂದ ಕೇಳಿ ಬರುತ್ತಿದೆ. ಆದರೆ ನಿತ್ಯವೂ ದೇಶ-ವಿದೇಶದ ಸಾವಿರಾರು ಪ್ರವಾಸಿಗರು ಜಿಲ್ಲೆಗೆ ಆಗಮಿಸುತ್ತಾರೆ. ಆದರೆ ಜಿಲ್ಲೆಯ ಪ್ರವಾಸಿ ಶ್ರೀಮಂತಿಕೆಯ ಮಾಹಿತಿ ನೀಡಿಕೆಯ ಕೊರತೆ, ಸೌಲಭ್ಯಗಳ ಕೊರತೆ ಕಾರಣ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿ ನಿರೀಕ್ಷೆಯಂತೆ ಬೆಳವಣಿಗೆ ಕಂಡಿಲ್ಲ. ಹೀಗಾಗಿ ಹೊಸ ಕನಸುಗಳೊಂದಿಗೆ ಬರುತ್ತಿರುವ ಹದಿನೆಂಟು ಹೊಸ ನೆಂಟಸ್ಥಿಕೆ ಸ್ಮರಣೆಯಾಗಿಸಿಕೊಳ್ಳುವ ನಿರೀಕ್ಷೆ ಇದೆ.

ಇನ್ನು ಕೇಂದ್ರ ಸರ್ಕಾರ ಅನುದಾನದಲ್ಲಿ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕೂಡಗಿ ಬಳಿ ತಲೆ ಎತ್ತಿರುವ ಎನ್‌ಟಿಪಿಸಿ ಸ್ಥಾವರ ಈಗಾಗಲೇ ಎರಡು ಘಟಕಗಳು ವಿದ್ಯುತ್‌ ಉತ್ಪಾದನೆ ಆರಂಭಿಸಿವೆ. ಇದೀಗ ಮೂರನೇ ಘಟಕ 2018 ಮಾರ್ಚ್‌ ಮಧ್ಯಾವ ಧಿಯಲ್ಲಿ ವಿದ್ಯುತ್‌ ಉತ್ಪಾದನೆ ಆರಂಭಿಸುವ ನಿರೀಕ್ಷೆ ಇದೆ. ಆ ಮೂಲಕ ಮೊದಲ ಹಂತದ ಮೂರು ಘಟಕಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. 

ಇನ್ನು ಸದರಿ ಕೇಂದ್ರಕ್ಕೆ ಕಲ್ಲಿದ್ದಲು ಪೂರೈಕೆಗಾಗಿಯೇ ಪ್ರತ್ಯೇಕ ರೈಲು ಮಾರ್ಗ ನಿರ್ಮಾಣಕ್ಕೆ ಮುಂದಾಗಿರುವ ಎನ್‌ಟಿಪಿಸಿ ಸಂಸ್ಥೆ, ಇದಕ್ಕಾಗಿ ರೂಪಿಸಿರುವ ಹುಟಗಿ-ಗದಗ ಮಧ್ಯೆ ಜೋಡಿ ಮಾರ್ಗದ ನಿರ್ಮಾಣ ಕಾರ್ಯ ನಡೆದಿದೆ. ಉಷ್ಣ ವಿದ್ಯುತ್‌ ಸ್ಥಾವರಕ್ಕೆ ಅಗತ್ಯ ಇರುವ ಕಲ್ಲಿದ್ದಲು ಪೂರೈಕೆಗೆ ಪ್ರತ್ಯೇಕ ರೈಲು ಮಾರ್ಗ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, 2018ರಲ್ಲಿ ಪೂರ್ಣಗೊಳ್ಳುವ ವಿಶ್ವಾಸ ಕೇಂದ್ರದ ಅಧಿಕಾರಿಗಳದ್ದು.

ಇದರ ಹೊರತಾಗಿ ಜಿಲ್ಲೆಯ ರೈತರ ಅದರಲ್ಲೂ ದ್ರಾಕ್ಷಿ-ದಾಳಿಂಬೆ ಬೆಳೆಗಾರರ ಸಾಲ ಮನ್ನಾ, ಸ್ಥಳೀಯ ಮಾರುಕಟ್ಟೆಗಾಗಿ ಇ-ಖರೀದಿ ಕೇಂದ್ರದ ಪುನಶ್ಚೇತನ ಹೀಗೆ ಹಲವು ಕನಸುಗಳು ಹೊಸ ವರ್ಷದಲ್ಲಾದರೂ ಈಡೇರುತ್ತವೆ ಎಂಬ ನಿರೀಕ್ಷೆಯಲ್ಲಿದ್ದಾರೆ. 

„ಜಿ.ಎಸ್‌.ಕಮತರ

ಟಾಪ್ ನ್ಯೂಸ್

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.