ಬೇಜವಾಬ್ದಾರಿ ಅಧಿಕಾರಿಗಳವಿರುದ್ಧ ಕ್ರಮಕ್ಕೆ ಆಗ್ರಹ
Team Udayavani, Jan 1, 2018, 3:52 PM IST
ಕೆಂಭಾವಿ: ಪುರಸಭೆ ಸಿಬ್ಬಂದಿ ನಾಗರಿಕರಿಗೆ ಸಂಬಂಧಪಟ್ಟ ಮನೆ ವರ್ಗಾವಣೆ, ಖಾತಾ ನಕಲು, ಕಟ್ಟಡ ಪರ್ಮಿಶನ್ಗಳನ್ನು ನಿಗದಿತ ಸಮಯದೊಳಗೆ ನೀಡದೆ ಬೇಜವಾಬ್ದಾರಿ ತೋರುತ್ತಿದ್ದಾರೆ ಎಂದು ಆರೋಪಿಸಿ ಕೆಂಭಾವಿ ಅಭಿವೃದ್ಧಿ ಸಂಘದ ಪದಾಧಿಕಾರಿಗಳು ಶನಿವಾರ ಮುಖ್ಯಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ಯುವ ಮುಖಂಡ ಚಾಂದ ಪಾಶಾ, ಅಧಿಕಾರಿಗಳಿಗೆ ಯಾವ ಯಾವ ದಾಖಲಾತಿಗಳನ್ನು ಯಾವ ನಿಗದಿತ ಸಮಯದೊಳಗೆ ನೀಡಬೇಕು ಎಂಬ ಅರಿವಿಲ್ಲ. ಈ ಕುರಿತಂತೆ ನೋಟಿಸ್ ಬೋರ್ಡ್ ಮೇಲೆ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡಿಲ್ಲ. ಅಧಿಕಾರಿಗಳಿಗೆ ಕೇಳಿದರೆ ಬೇಜವಾಬ್ದಾರಿ ಉತ್ತರ ನೀಡುತ್ತಾರೆ ಎಂದು ದೂರಿದ್ದಾರೆ.
ಪುರಸಭೆ ಕಾರ್ಯಾಲಯಕ್ಕೆ ಶೀಘ್ರದಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಹನುಮಯ್ಯ ಗುತ್ತೇದಾರ, ಸೋಮನಾಥ ಬಡಿಗೇರ, ಕೃಷ್ಣಪ್ಪ ತಳವಾರ, ನರಸಿಂಗಪ್ಪ ಗೌಡೂರ, ಸಚಿನ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ