ಕೈದಾಳದಲ್ಲಿ ಜಕಣಾಚಾರಿಯ 5ನೇ ಸಂಸ್ಮರಣಾ ದಿನಾಚರಣೆ
Team Udayavani, Jan 2, 2018, 12:18 PM IST
ತುಮಕೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಬಜೆಟ್ ಅಧಿವೇಶನದಲ್ಲಿಯೇ ಹಿಂದುಳಿದ ವರ್ಗಗಳಲ್ಲಿನ 103 ಕಾಯಕ ಸಮುದಾಯಗಳ ಅಭಿವೃದ್ಧಿಗೆ ಸಾವಿರ ಕೋಟಿ ರೂ. ತೆಗೆದಿಡಲಾಗುವುದು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.
ತಾಲೂಕಿನ ಕೈದಾಳದಲ್ಲಿ ಸೋಮವಾರ ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾದಿಂದ ಏರ್ಪಡಿಸಲಾಗಿದ್ದ 5 ನೇ ರಾಜ್ಯಮಟ್ಟದ ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಹಿಂದುಳಿದ ಜನಾಂಗಗಳಿಗೆ ಶಕ್ತಿ ನೀಡಬೇಕು.
ಈ ನಿಟ್ಟಿನಲ್ಲಿ ಈ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ಕಾಯಕ ಸಮುದಾಯಗಳನ್ನು ಸಂಘಟಿಸಿ ಸರ್ಕಾರದಿಂದ ಅವರಿಗೆ ಸಿಗಬೇಕಾಗಿರುವ ಸವಲತ್ತುಗಳನ್ನು ಕೊಡಿಸುವ ಜವಾಬ್ದಾರಿ ಕೆ.ಪಿ.ನಂಜುಂಡಿ ಮೇಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೆ.ಪಿ.ನಂಜುಂಡಿಯವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುತ್ತೇನೆ.
ಜ.1ರಂದು ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮಾರಣಾ ದಿನಾಚರಣೆಯನ್ನು ಸರ್ಕಾರದಿಂದಲೇ ಆಚರಿಸಲು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಘೋಷಿಸಿದರು. ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಿಶ್ವಕರ್ಮ ಪೀಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಕಾಳಹಸ್ತೇಂದ್ರ ಸ್ವಾಮಿ, ಭೋವಿ ಸಮಾಜದ ಸಿದ್ದರಾಮೇಶ್ವರಮಾಹ ಸ್ವಾಮಿ, ಮಡಿವಾಳ ಸಮುದಾಯದ ಬಸವ ಮಾಚಿದೇವ ಸ್ವಾಮಿ,
ಛಲವಾದಿ ಸಮುದಾಯದ ಬಸವನಾಗಿದೇವ ಮಹಾಸ್ವಾಮಿ, ರೆಡ್ಡಿ ಸಮುದಾಯದ ಬಸವರಾಜ ಮಹಾಸ್ವಾಮಿ, ದೊಂಬಿದಾಸರ ಸಮಾಜದ ರಾಜಯೋಗಿ ವಿದ್ವಾನ್ ಕರುಣಾಕರ ಮಹಾಸ್ವಾಮಿ, ತಿಗಳ ಸಮುದಾಯದ ಜ್ಞಾನಾನಂದ ಪುರಿ ಮಹಾಸ್ವಾಮಿ, ಕುಂಚಿಟಿಗ ಸಮಾಜದ ಶಾಂತವೀರ ಮಹಾಸ್ವಾಮಿ ಸೇರಿದಂತೆ ಹಿಂದುಳಿದ ವರ್ಗಗಳ ಹಲವಾರು ಮಠಗಳ ಸ್ವಾಮೀಜಿಗಳು ವಹಿಸಿದ್ದರು.
ಸಿದ್ಧಗಂಗಾಶ್ರೀಗೆ ಭಾರತ ರತ್ನಕ್ಕೆ ಮನವಿ: ಇದೇ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಬಿಎಸ್ವೈ, ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ನೀಡುವಂತೆ ಕೇಂದ್ರ ಸಕಾರಕ್ಕೆ ಮನವಿ ಮಾಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ
Liquid Nitrogen ಪಾನ್ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ
Arrest: ಬಾರ್ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ
Bengaluru: ಶಾಸಕ ಮಹಾಂತೇಶ್ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ
Road Mishap: ನೈಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು