ಕೈದಾಳದಲ್ಲಿ ಜಕಣಾಚಾರಿಯ 5ನೇ ಸಂಸ್ಮರಣಾ ದಿನಾಚರಣೆ


Team Udayavani, Jan 2, 2018, 12:18 PM IST

yaddi.jpg

ತುಮಕೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಬಜೆಟ್‌ ಅಧಿವೇಶನದಲ್ಲಿಯೇ ಹಿಂದುಳಿದ ವರ್ಗಗಳಲ್ಲಿನ 103 ಕಾಯಕ ಸಮುದಾಯಗಳ ಅಭಿವೃದ್ಧಿಗೆ  ಸಾವಿರ ಕೋಟಿ ರೂ. ತೆಗೆದಿಡಲಾಗುವುದು ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಭರವಸೆ ನೀಡಿದರು.

ತಾಲೂಕಿನ ಕೈದಾಳದಲ್ಲಿ ಸೋಮವಾರ ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾದಿಂದ ಏರ್ಪಡಿಸಲಾಗಿದ್ದ 5 ನೇ ರಾಜ್ಯಮಟ್ಟದ ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಹಿಂದುಳಿದ ಜನಾಂಗಗಳಿಗೆ ಶಕ್ತಿ ನೀಡಬೇಕು.

ಈ ನಿಟ್ಟಿನಲ್ಲಿ ಈ ಸಮುದಾಯಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತೇನೆ. ಕಾಯಕ ಸಮುದಾಯಗಳನ್ನು ಸಂಘಟಿಸಿ ಸರ್ಕಾರದಿಂದ ಅವರಿಗೆ ಸಿಗಬೇಕಾಗಿರುವ ಸವಲತ್ತುಗಳನ್ನು ಕೊಡಿಸುವ ಜವಾಬ್ದಾರಿ ಕೆ.ಪಿ.ನಂಜುಂಡಿ ಮೇಲಿದೆ. ಬಿಜೆಪಿ ಅಧಿಕಾರಕ್ಕೆ ಬಂದರೆ ಕೆ.ಪಿ.ನಂಜುಂಡಿಯವರನ್ನು ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡುತ್ತೇನೆ.

ಜ.1ರಂದು ಅಮರಶಿಲ್ಪಿ ಜಕಣಾಚಾರಿಯವರ ಸಂಸ್ಮಾರಣಾ ದಿನಾಚರಣೆಯನ್ನು ಸರ್ಕಾರದಿಂದಲೇ ಆಚರಿಸಲು ನಿರ್ಧಾರ ಕೈಗೊಳ್ಳುತ್ತೇನೆ ಎಂದು ಘೋಷಿಸಿದರು. ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಿಶ್ವಕರ್ಮ ಪೀಠಾಧಿಪತಿಗಳ ಒಕ್ಕೂಟದ ಅಧ್ಯಕ್ಷರಾದ ಕಾಳಹಸ್ತೇಂದ್ರ ಸ್ವಾಮಿ, ಭೋವಿ ಸಮಾಜದ ಸಿದ್ದರಾಮೇಶ್ವರಮಾಹ ಸ್ವಾಮಿ, ಮಡಿವಾಳ ಸಮುದಾಯದ ಬಸವ ಮಾಚಿದೇವ ಸ್ವಾಮಿ,

ಛಲವಾದಿ ಸಮುದಾಯದ ಬಸವನಾಗಿದೇವ ಮಹಾಸ್ವಾಮಿ, ರೆಡ್ಡಿ ಸಮುದಾಯದ ಬಸವರಾಜ ಮಹಾಸ್ವಾಮಿ, ದೊಂಬಿದಾಸರ ಸಮಾಜದ ರಾಜಯೋಗಿ ವಿದ್ವಾನ್‌ ಕರುಣಾಕರ ಮಹಾಸ್ವಾಮಿ, ತಿಗಳ ಸಮುದಾಯದ ಜ್ಞಾನಾನಂದ ಪುರಿ ಮಹಾಸ್ವಾಮಿ, ಕುಂಚಿಟಿಗ ಸಮಾಜದ ಶಾಂತವೀರ  ಮಹಾಸ್ವಾಮಿ ಸೇರಿದಂತೆ ಹಿಂದುಳಿದ ವರ್ಗಗಳ ಹಲವಾರು ಮಠಗಳ ಸ್ವಾಮೀಜಿಗಳು ವಹಿಸಿದ್ದರು.

ಸಿದ್ಧಗಂಗಾಶ್ರೀಗೆ ಭಾರತ ರತ್ನಕ್ಕೆ ಮನವಿ: ಇದೇ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಬಿಎಸ್‌ವೈ, ಸಿದ್ಧಗಂಗಾ ಮಠದ ಹಿರಿಯ ಶ್ರೀಗಳಾದ ಡಾ.ಶಿವಕುಮಾರ ಸ್ವಾಮೀಜಿಗೆ ಭಾರತರತ್ನ ನೀಡುವಂತೆ ಕೇಂದ್ರ ಸಕಾರಕ್ಕೆ ಮನವಿ ಮಾಡಿದ್ದೇವೆ ಎಂದರು.

ಟಾಪ್ ನ್ಯೂಸ್

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.