NDA vs UPA: ಹೆಚ್ಚು ಉಗ್ರರ ಹತ್ಯೆ, ಕಡಿಮೆ ಉಗ್ರದಾಳಿ: ವರದಿ


Team Udayavani, Jan 2, 2018, 7:11 PM IST

Army-force-700.jpg

ಹೊಸದಿಲ್ಲಿ : ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿದ್ದ  ಯುಪಿಎ ಅವಧಿಗೆ (2010-13) ಹೋಲಿಸಿದರೆ ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ ನಾಲ್ಕು ವರ್ಷಗಳ (2014-17) ಎನ್‌ಡಿಎ ಆಡಳಿತಾವಧಿಯಲ್ಲಿ ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರಸಂಬಂಧಿ ಘಟನೆಗಳ ಸಂಖ್ಯೆ ಕಡಿಮೆ ಎಂದು ಸರಕಾರದ ಅಧಿಕೃತ ವರದಿ ತಿಳಿಸಿದೆ. 

ಎಎನ್‌ಐ ಸುದ್ದಿ ಸಂಸ್ಥೆಗೆ ಸಿಕ್ಕಿರುವ ಅಧಿಕೃತ ಅಂಕಿ ಅಂಶಗಳ ಪ್ರಕಾರ 2010-13ರ ಮನಮೋಹನ್‌ ಸಿಂಗ್‌ ಅವಧಿಯಲ್ಲಿ ಜಮ್ಮು ಕಾಶ್ಮೀರದಲ್ಲಿ 1,218 ಉಗ್ರ ಸಂಬಂಧಿ ಘಟನೆಗಳು ವರದಿಯಾಗಿದ್ದವು; ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ (2014-17) ಇದು 1,094ಕ್ಕೆ ಇಳಿದಿದೆ.

ಮನಮೋಹನ್‌ ಸಿಂಗ್‌ ಅವಧಿಯಲ್ಲಿ 471 ಉಗ್ರರನ್ನು ಹೊಡೆದುರುಳಿಸಲಾಗಿದ್ದರೆ ಮೋದಿ ಅವರು ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 580 ಉಗ್ರರನ್ನು ಮಟಾಶ್‌ ಮಾಡಲಾಗಿದೆ. 

ಇದೇ ರೀತಿ 2014-17ರ ಮೋದಿ ಅವಧಿಯಲ್ಲಿ ಉಗ್ರ ಸಂಬಂಧಿ ಘಟನೆಗಳಲ್ಲಿ ಸಿಲುಕಿ ಮೃತ ಪಟ್ಟ ಪೌರರ ಸಂಖ್ಯೆ 100; ಮನಮೋಹನ್‌ ಸಿಂಗ್‌ ಕಾಲದಲ್ಲಿ ಇದು 108 ಆಗಿತ್ತು. 

ಜಮ್ಮು ಕಾಶ್ಮೀರದಲ್ಲಿ ಉಗ್ರರ ಮೇಲೆ ತಮ್ಮ ಸರಕಾರ ಬಲವಾದ ಪ್ರಹಾರವನ್ನೇ ಇಕ್ಕಿದೆ ಎಂದು ಮೋದಿ ಸರಕಾರ ಪದೇ ಪದೇ ಹೇಳಿಕೊಂಡಿತ್ತು. ಉಗ್ರವಾದ ಎನ್ನುವುದು ಈಗ ಜಾಗತಿಕ ಬೆದರಿಕೆಯಾಗಿರುವುದರಿಂದ ಸರಕಾರವು ಇದಕ್ಕೆ ಇನ್ನೂ ಪರಿಣಾಮಕಾರಿಯಾದ ಶಾಶ್ವದ ಪರಿಹಾರವನ್ನು ಕಂಡುಕೊಳ್ಳಲು ಉದ್ದೇಶಿಸಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

“ಪಾಕಿಸ್ಥಾನದ ಮೇಲೆ ನಾವೇ  ಮೊದಲಾಗಿ ಗುಂಡು ಹಾರಿಸಬಾರದು ಎಂದು ನಾನು ಗಡಿಯಲ್ಲಿನ ನಮ್ಮ ಯೋಧರಿಗೆ ಹೇಳಿದ್ದೇನೆ. ಆದರೆ ಅವರು ನಮ್ಮ ಮೇಲೆ ದಾಳಿ ಮಾಡಿದಾಗ ನಾವು ಯಾವುದೇ ಮುಲಾಜಿಲ್ಲದೆ ಅದಕ್ಕಿಂತಲೂ ಉಗ್ರ ಪ್ರತ್ಯುತ್ತರ ನೀಡಬೇಕು ಎಂದು ಕೂಡ ಹೇಳಿದ್ದೇನೆ. ಭಾರತ ಈಗ ದುರ್ಬಲ ದೇಶವಾಗಿ ಉಳಿದಿಲ್ಲ; ಅದೀಗ ಅತ್ಯಂತ ಬಲಿಷ್ಠ ದೇಶವಾಗಿದೆ’ ಎಂದು ರಾಜನಾಥ್‌ ಸಿಂಗ್‌ ಹೇಳಿದ್ದಾರೆ. 

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದ ಪ್ರಕಾರ ಜಮ್ಮು ಕಾಶ್ಮೀರದಲ್ಲಿ ಭಯೋತ್ಪಾದನೆ ಕಡಿಮೆಯಾಗಲು ನಾಲ್ಕು ಮುಖ್ಯ ಕಾರಣಗಳಿವೆ : ಅವೆಂದರೆ ಕೇಂದ್ರ ಕೈಗೊಂಡ ನೋಟು ಅಮಾನ್ಯ ಕ್ರಮ, ಎನ್‌ಐಎ ತನಿಖೆ, ಉನ್ನತ ಉಗ್ರರ ಹತ್ಯೆ, ದಿನೇಶ್ವರ್‌ ಶರ್ಮಾ ಮೂಲಕ ನಡೆಸಲಾದ ಸಂಧಾನ ಯತ್ನ .

ಟಾಪ್ ನ್ಯೂಸ್

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

Shiradi Ghat: ಶಿರಾಡಿ ಘಾಟ್ ನಲ್ಲಿ ಭೀಕರ ಅಪಘಾತ; ಬಂಟ್ವಾಳ ಮೂಲದ ತಾಯಿ ಮಗ ದುರ್ಮರಣ

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

6-pan

Liquid Nitrogen ಪಾನ್‌ ಸೇವಿಸಿ ಬಾಲಕಿ ಹೊಟ್ಟೆಯಲ್ಲಿ ರಂಧ್ರ

5-arrest

Arrest: ಬಾರ್‌ನಲ್ಲಿ ಮಾರಕಾಸ್ತ್ರ ತೋರಿಸಿ ಬೆದರಿಕೆ: ಇಬ್ಬ ರ ಸೆರೆ

4-bng

Bengaluru: ಶಾಸಕ ಮಹಾಂತೇಶ್‌ ಕೌಜಲಗಿ ಕಾರಿಗೆ ಡಿಕ್ಕಿ ಹೊಡೆದ ಚಾಲಕ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.