ಮಳೆಯಲ್ಲಿ ಮಿಂದೆದ್ದವರು!


Team Udayavani, Jan 5, 2018, 11:08 AM IST

05-17.jpg

ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆಗಿದ್ದು ಗೊತ್ತೇ ಇದೆ. ಅಲ್ಲಿ ಭಾರತೀಯರ ನಿಗೂಡ ಕಣ್ಮರೆ ಆಗಿದ್ದೂ ಉಂಟು. ಈ ವಿಷಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಚರ್ಚೆಗಳು ಆಗಿದ್ದು ನಿಜ. ಅಂಥದ್ದೇ ವಿಷಯ ಇಟ್ಟುಕೊಂಡು ಒಂದು ಚಿತ್ರ ಮಾಡಿ, ಅದನ್ನು ತೆರೆಗೆ ತರಲು ಸಜ್ಜಾಗಿದ್ದಾರೆ ನಿರ್ದೇಶಕ ಜನಾರ್ದನ್‌. ಆ ಚಿತ್ರಕ್ಕೆ ಅವರು ಇಟ್ಟುಕೊಂಡಿರುವ ಹೆಸರು “ನೀನಿಲ್ಲದ ಮಳೆ’. ಜನವರಿ 12 ಕ್ಕೆ ರಾಜ್ಯ ಮತ್ತು ವಿದೇಶದಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ, ಚಿತ್ರದ ಟ್ರೇಲರ್‌ ಹಾಗು ವೀಡಿಯೋ ಹಾಡನ್ನು ಬಿಡುಗಡೆ ಮಾಡುವ ಮೂಲಕ ಚಿತ್ರತಂಡದೊಂದಿಗೆ ಮಾತುಕತೆಗೆ ಕುಳಿತರು ಜನಾರ್ದನ್‌.

“ಈ ಚಿತ್ರ ಮಾಡೋಕೆ ಸಾಕಷ್ಟು ಕಷ್ಟಪಟ್ಟಿದ್ದೇವೆ. ಅನೇಕ ಅಡಚಣೆಗಳ ನಡುವೆಯೂ ಒಂದೊಳ್ಳೆಯ ಸಿನಿಮಾ ಮಾಡಿದ ತೃಪ್ತಿ ನಮ್ಮದು. ಚಿತ್ರ ತಡವಾಗಿದೆ. ಒಂದಲ್ಲ, ಎರಡಲ್ಲ, ಮೂರಲ್ಲ, ನಾಲ್ಕು ವರ್ಷಗಳ ಕಾಲ ತಡವಾಗಿ ಈ ಚಿತ್ರ ತೆರೆಗೆ ಬರುತ್ತಿದೆ. ತಡವಾಗೋಕೆ ಹಲವು ಕಾರಣಗಳು. ಮೊದಲೇ ಹೇಳಿದಂತೆ ಇದೊಂದು ಭಾರತೀಯ ವಿದ್ಯಾರ್ಥಿಗಳ ಮೇಲಿನ ಹಲ್ಲೆ ಹಾಗೂ ನಿಗೂಢ ಕಣ್ಮರೆ ಸುತ್ತ ನಡೆಯುವ ಕಥೆ. ಬಹುತೇಕ ಅಮೆರಿಕದಲ್ಲಿ ಚಿತ್ರೀಕರಿಸಿದ್ದೇವೆ. ವಿಜಯ್‌ಚೆಂಡೂರ್‌ ಮತ್ತು ಇಂದ್ರಸೇನ ನನ್ನೊಂದಿಗೆ ಕಥೆ, ಚಿತ್ರಕಥೆಗೆ ಸಹಾಯ ಮಾಡಿದ್ದಾರೆ. ಅಮೆರಿಕದಲ್ಲಿ ಚಿತ್ರೀಕರಿಸುವ ವೇಳೆ ಪ್ರಿಯಾಭಾರತಿ, ಸತೀಶ್‌ ಅವರು ಸಾಕಷ್ಟು ಸಹಾಯ ಮಾಡಿದ್ದರಿಂದಲೇ ಚಿತ್ರ ಚೆನ್ನಾಗಿ ಮೂಡಿಬರಲು ಸಾಧ್ಯವಾಗಿದೆ. ಮೈನಸ್‌ 10 ಡಿಗ್ರಿಯಲ್ಲಿ ಚಿತ್ರೀಕರಿಸಿದ್ದೇವೆ. 28 ದಿನಗಳ ಕಾಲ ಅಲ್ಲಿನ ವೈಟ್‌ಹೌಸ್‌, ಕ್ಯಾಪಿಟಲ್‌ ಬಿಲ್ಡಿಂಗ್‌ ಸುತ್ತಮುತ್ತ ಚಿತ್ರೀಕರಿಸಿದ್ದೇವೆ. ಅಷ್ಟೊಂದು ಚಳಿ ಇದ್ದರೂ, ಐದೈದು ಜಕೀìನ್‌ ಧರಿಸಿ ಕೆಲಸ ಮಾಡಿದ್ದೇವೆ. ಚಿತ್ರ ನೋಡಿ ಹೊರಬಂದವರಿಗೆ ಒಂದೊಳ್ಳೆಯ ಸಂದೇಶವಂತೂ ಇದೆ. ನಿರ್ಮಾಪಕರ ಪ್ರೋತ್ಸಾಹದಿಂದ ಚಿತ್ರ ಚೆನ್ನಾಗಿ ಮೂಡಿಬಂದಿದೆ’ ಅಂದರು ಜನಾರ್ದನ್‌.

ನಾಯಕಿ ವ್ಯಾಲರಿಗೆ ಇದು ಮೊದಲ ಕನ್ನಡ ಚಿತ್ರ. ಈ ಹಿಂದೆ ಅಮೆರಿಕದಲ್ಲಿ ಹಲವು ಶಾರ್ಟ್‌ಫಿಲ್ಮ್ಗಳಲ್ಲಿ ನಟಿಸಿದ ಅನುಭವ ವ್ಯಾಲರಿಗಿದೆ. ಅವರಿಲ್ಲಿ ಗೃಹಮಂತ್ರಿ ಮಗಳ ಪಾತ್ರ ನಿರ್ವಹಿಸಿದ್ದಾರಂತೆ. ಕನ್ನಡ ಸಿನಿಮಾದಲ್ಲಿ ನಟಿಸಿ, ಸಾಕಷ್ಟು ಕಲಿಯೋಕೆ ಸಾಧ್ಯವಾಗಿದೆ ಎಂಬುದು ವ್ಯಾಲರಿ ಮಾತು.
ನಿರ್ಮಾಪಕ ಶೈಲೇಂದ್ರ ಕೆ.ಬೆಲ್ದಾಳ್‌ ಅವರಿಗೆ ಒಳ್ಳೆಯ ಕಥೆ ಅನಿಸಿದ್ದರಿಂದ ಅವರು ನಿರ್ಮಾಣಕ್ಕೆ ಮುಂದಾದರಂತೆ. ಈಗಿನ ಯೂತ್ಸ್ ಹೇಗೆ ವಿದೇಶದಲ್ಲಿ ಶೋಕಿಗೆ ಬಿದ್ದು ಲೈಫ್ ಹಾಳು ಮಾಡಿಕೊಳ್ಳುತ್ತಾರೆ ಅನ್ನೋದನ್ನು ಹೇಳಲಾಗಿದೆ. ಸಂಕ್ರಾಂತಿಗೆ ಚಿತ್ರ ಬಿಡುಗಡೆಯಾಗಲಿದೆ. ನಿಮ್ಮೆಲ್ಲರ ಸಹಕಾರ ಇರಲಿ ಅಂದರು ಅವರು.

ಮತ್ತೂಬ್ಬ ನಿರ್ಮಾಪಕ ದೇವರಾಜ್‌ ಅವರು, ಆರ್‌.ಚಂದ್ರು ಜತೆಗೆ ನಿರ್ದೇಶಕರಾಗಬೇಕು ಅಂತ ಇಲ್ಲಿಗೆ ಬಂದರಂತೆ. ಆದರೆ, ಇವರು ಆಗಿದ್ದು ಮಾತ್ರ ನಿರ್ಮಾಪಕ. “ಚಿತ್ರ ತಡವಾಯ್ತು. ಅದಕ್ಕೆ ಕಾರಣಗಳು ಸಾಕಷ್ಟಿವೆ. ಮೊದಲ ಅನುಭವ ಆಗಿದ್ದರಿಂದ ಇಷ್ಟೆಲ್ಲಾ ತಡವಾಗಿದೆ. ಬಜೆಟ್‌ ಅಂದುಕೊಂಡಿದ್ದಕ್ಕಿಂತ ಜಾಸ್ತಿಯಾಗಿದೆ ಎಂದರು ಅವರು. ತಬಲಾ ನಾಣಿ, ಲಕ್ಕಿ ಶಂಕರ್‌ ಇಲ್ಲಿ ಹೀರೋ ಜತೆಗೆ ಪತ್ರಕರ್ತರಾಗಿ ಕಾಣಿಸಿಕೊಂಡಿದ್ದಾರಂತೆ. ಇಲ್ಲಿ ಸಂದೇಶ ಇರುವುದರಿಂದ ಪ್ರತಿಯೊಬ್ಬರಿಗೂ ಸಲ್ಲುವ ಚಿತ್ರವಿದು ಅಂದರು ಅವರು. ಕ್ಯಾಮೆರಾಮೆನ್‌ ನಿರಂಜನ್‌ಬಾಬು, ಸಂಗೀತ ನಿರ್ದೇಶಕ ಇಂದ್ರಸೇನ ಚಿತ್ರದ ಬಗ್ಗೆ ಹೇಳಿಕೊಳ್ಳುವ ಹೊತ್ತಿಗೆ ಮಾತುಕತೆಗೆ ಬ್ರೇಕ್‌ ಬಿತ್ತು. ಇದಕ್ಕೂ ಮುನ್ನ ಮಾಜಿ ಪೊಲೀಸ್‌ ಅಧಿಕಾರಿ ನಾಗರಾಜ್‌ ಟ್ರೇಲರ್‌ ಬಿಡುಗಡೆ ಮಾಡಿದರೆ, ಗಾಯಕ ಆಲೂರು ನಾಗಪ್ಪ ವೀಡಿಯೋ ಸಾಂಗ್‌ ಬಿಡುಗಡೆ ಮಾಡಿ ಶುಭಕೋರಿದರು.

ಟಾಪ್ ನ್ಯೂಸ್

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

ಯಾರಿಗೆ ಹೇಳೋಣ ನಮ್‌ ಪ್ರಾಬ್ಲಂ… ಸಿನಿಮಾ ಕೊರತೆಯಿಂದ ಥಿಯೇಟರ್‌ಗಳು ತಾತ್ಕಾಲಿಕ ಸ್ಥಗಿತ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

Dhruva Sarja ಮಾರ್ಟಿನ್‌ ರಿಸಲ್ಟ್ ಚಂದನವನಕ್ಕೆ ಹೆಮ್ಮೆ ತರಲಿದೆ…ನಿರ್ಮಾಪಕ ಉದಯ್‌ ಮೆಹ್ತಾ

movies

Sandalwood; ಇಂದು ತೆರೆಗೆ ಬರುತ್ತಿದೆ ನಾಲ್ಕು ಸಿನಿಮಾಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.