ಜಾತಿ, ಮತ ಭೇದ ಬಿಟ್ಟು ಒಂದಾಗಿ: ಭಾಗವತ್ ಕರೆ
Team Udayavani, Jan 6, 2018, 10:30 AM IST
ಉಜ್ಜಯಿನಿ: ಭಾರತದ ನಾಗರಿಕರು ಜಾತಿ, ಮತ, ವಿಚಾರ ಭೇದ ಮರೆತು ತಾಯ್ನಾಡಿಗಾಗಿ ಒಂದಾಗಬೇಕೆಂದು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿನ ಹಿಂಸಾಚಾರದ ಬೆನ್ನಲ್ಲೇ ಭಾಗವತ್ ನೀಡಿರುವ ಈ ಹೇಳಿಕೆ ಹೆಚ್ಚು ಮಹತ್ವ ಪಡೆದುಕೊಂಡಿದೆ. ಉಜ್ಜಯಿನಿಯಲ್ಲಿ ಶುಕ್ರವಾರ ಭಾರತ ಮಾತೆಯ 16 ಅಡಿ ಪ್ರತಿಮೆ ಉದ್ಘಾಟಿಸಿ ಮಾತನಾಡಿದ ಅವರು, “ಭಾರತ ಕೇವಲ ಭೂಮಿಯ ತುಣುಕಲ್ಲ. ಇದು ಎಲ್ಲಕ್ಕೂ ಮಿಗಿಲಾದದ್ದು. ಹಾಗಾಗಿ, ನಮ್ಮ ಗುರಿ ತಾಯ್ನೆಲದ ರಕ್ಷಣೆಗಾಗಿಯೇ ಇರಬೇಕು. ಜಾತಿವಾದ, ಈರ್ಷ್ಯೆಗಳಿಂದ ಹೊರಬರಬೇಕು” ಎಂದರು. ಡಿಎಂಕೆ ಸಂಸ್ಥಾಪಕ ಅಣ್ಣಾದುರೈ ಅವರನ್ನು ನೆನೆದ ಭಾಗವತ್, “ಹಿಂದೊಮ್ಮೆ ಅಣ್ಣಾದುರೈ ತಮಿಳುನಾಡನ್ನು ಪ್ರತ್ಯೇಕ ದೇಶವೆಂದು ಘೋಷಿಸಿಕೊಂಡಿದ್ದರು. ಆದರೆ, 1962ರಲ್ಲಿ ಚೀನ, ಭಾರತದ ಮೇಲೆ ಆಕ್ರಮಣ ಮಾಡಿದಾಗ ನಿಲುವು ಬದಲಿಸಿ ಭಾರತದ ಬೆಂಬಲಕ್ಕೆ ನಿಂತರು. ಇದೇ ನಿಜವಾದ ರಾಷ್ಟ್ರೀಯತೆ” ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ