ತಲಾಖ್‌ ವಿಧೇಯಕ ರಾಜ್ಯಸಭೆಯಲ್ಲೇ ಬಾಕಿ


Team Udayavani, Jan 6, 2018, 9:00 AM IST

Parliament-of-India-650.jpg

ಹೊಸದಿಲ್ಲಿ: ತ್ರಿವಳಿ ತಲಾಖ್‌ ಮಸೂದೆ ಬಗ್ಗೆ ನಡೆದ ತೀವ್ರ ಚರ್ಚೆಯ ಮಧ್ಯೆಯೇ ಚಳಿಗಾಲದ ಅಧಿವೇಶನ ಶುಕ್ರವಾರ ಮುಕ್ತಾಯ ಕಂಡಿದೆ. ಲೋಕಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರಿಂದ ಅನುಮೋದನೆ ಕಂಡ ಮಸೂದೆ, ರಾಜ್ಯಸಭೆಯಲ್ಲಿ ಪಾಸಾಗದೇ ಉಳಿಯಿತು. ಸಂಸದೀಯ ಸಮಿತಿಗೆ ಮಸೂದೆಯನ್ನು ಕಳುಹಿಸಿಕೊಡಬೇಕು ಎಂದು ವಿಪಕ್ಷಗಳು ಆಗ್ರಹಿಸಿದ್ದವು. ಆದರೆ ಸುಪ್ರೀಂಕೋರ್ಟ್‌ ಈಗಾಗಲೇ ತ್ರಿವಳಿ ತಲಾಖ್‌ ನಿಷೇಧಿಸಿರುವುದರಿಂದ, ಮಸೂದೆ ಅನುಮೋದಿಸುವುದರ ಅಗತ್ಯವಿದೆ ಎಂದು ಸರಕಾರ ಹೇಳಿತಾದರೂ ವಿಪಕ್ಷಗಳು ಸಮ್ಮತಿಸಲಿಲ್ಲ. ಮಸೂದೆ ಇನ್ನು ಬಜೆಟ್‌ ಅಧಿವೇಶನದಲ್ಲಿ ಮಂಡನೆಯಾಗಲಿದೆ.

ಅತ್ಯಂತ ಕಡಿಮೆ ಅವಧಿಯ ಅಧಿವೇಶನಗಳಲ್ಲಿ ಒಂದಾದ ಇದು, ಕೇವಲ 13 ದಿನಗಳವರೆಗೆ ನಡೆದಿತ್ತು. ಸರಕಾರ ಈ ಅಧಿವೇಶನವನ್ನು ಫ‌ಲಪ್ರದ ಎಂದು ಕರೆದಿದ್ದು, ತ್ರಿವಳಿ ತಲಾಖ್‌ ವಿಷಯದಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದೆ. ರಾಜ್ಯಸಭೆ ಸಭಾಪತಿಯಾಗಿ ವೆಂಕಯ್ಯ ನಾಯ್ಡು ಅಧಿಕಾರ ವಹಿಸಿಕೊಂಡ ಅನಂತರ ಮೊದಲ ಅಧಿವೇಶನ ಇದಾಗಿದ್ದು, ವಿಪಕ್ಷಗಳು ಕಲಾಪಕ್ಕೆ ಪದೇ ಪದೇ ಅಡ್ಡಿ ಮಾಡಿದ್ದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

ಈ ಬಾರಿಯ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಜನಹಿತಕಾರಿ ವಿಷಯಗಳ ಚರ್ಚೆ ಶೇ. 91.58ರಷ್ಟಾಗಿದ್ದರೆ, ರಾಜ್ಯಸಭೆಯಲ್ಲಿ ಇದು ಶೇ. 56.29 ಆಗಿದೆ. ಲೋಕಸಭೆಯಲ್ಲಿ 13 ಹಾಗೂ ರಾಜ್ಯಸಭೆಯಲ್ಲಿ 9 ಮಸೂದೆಗಳು ಅನುಮೋದನೆಗೊಂಡಿವೆ. ಲೋಕಸಭೆಯಲ್ಲಿ ಬಿಜೆಪಿ ಬಹುಮತ ಹೊಂದಿದ್ದರಿಂದ ತ್ರಿವಳಿ ತಲಾಖ್‌ ಸೇರಿ ಇತರ ಮಸೂದೆಗಳು ಸರಾಗ ವಾಗಿ ಅನುಮೋದನೆಗೊಂಡವು. ಆದರೆ ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಪ್ರಾಬಲ್ಯ ಹೊಂದಿರುವುದರಿಂದ, ವಾಗ್ವಾದದಿಂದಾಗಿ 34  ತಾಸುಗಳಷ್ಟು ಕಲಾಪ ನಷ್ಟವಾಗಿದೆ.

ಲೋಕಸಭೆಯಲ್ಲಿ 3500 ಪ್ರಶ್ನೆಗಳಿಗೆ ಲಿಖೀತ,  ಮೌಖೀಕ ಉತ್ತರ

424 ವಿಷಯಗಳನ್ನು ಪ್ರಸ್ತಾಪಿಸಿದ ಸಂಸದರು

41 ವರದಿಗಳನ್ನು ಸದನಕ್ಕೆ ಸಲ್ಲಿಸಿದ ಸ್ಥಾಯಿ ಸಮಿತಿ

98 ಖಾಸಗಿ ಮಸೂದೆ ಮಂಡನೆ

ರಾಜ್ಯಸಭೆಯಲ್ಲಿ
34 ಗಂಟೆಗಳ ಕಲಾಪ ವ್ಯರ್ಥ
125 ಪ್ರಶ್ನೆಗಳಿಗೆ ಉತ್ತರ
19 ಖಾಸಗಿ ಮಸೂದೆ ಮಂಡನೆ
41 ಗಂಟೆಗಳ ಕಾಲ ಕಲಾಪ

ಮೋದಿ-ಸಿಂಗ್‌ ಹಸ್ತಲಾಘವ
ಗುಜರಾತ್‌ ಚುನಾವಣಾ ಪ್ರಚಾರದ ವೇಳೆ ತೀವ್ರ ಮಾತಿನ ಚಕಮಕಿ ನಡೆಸಿದ್ದ ಮಾಜಿ ಹಾಗೂ ಹಾಲಿ ಪ್ರಧಾನಿಗಳು ಶುಕ್ರವಾರ ರಾಜ್ಯಸಭೆಯಲ್ಲಿ ಹಸ್ತಲಾಘವ ನಡೆಸಿದರು. ಅಧಿವೇಶನದ ಕೊನೆಯ ದಿನದಂದು ಹಾಜರಿದ್ದ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಬಳಿ ತೆರಳಿದ ಪ್ರಧಾನಿ ನರೇಂದ್ರ ಮೋದಿ, ಕೈ ಕುಲುಕಿದರು.  

3 ವರ್ಷ ನಿಷೇಧ
ಜನಪ್ರಿಯ ನಟರು, ಕ್ರೀಡಾಪಟುಗಳು ಪ್ರತಿನಿಧಿಸುವ ಜಾಹೀರಾತಿನಲ್ಲಿ ತಪ್ಪು ಮಾಹಿತಿ ನೀಡಿದರೆ, ಅವರಿಗೆ 50 ಲಕ್ಷ ರೂ. ದಂಡ ಹಾಗೂ 3 ವರ್ಷಗಳ ಕಾಲ ನಿಷೇಧ ಹೇರುವ ಅವಕಾಶ ಇರುವ ಹೊಸ ಗ್ರಾಹಕ ರಕ್ಷಣಾ ವಿಧೇಯಕವನ್ನು ಲೋಕಸಭೆ ಅಂಗೀಕರಿಸಿದೆ. ಹಿಂದಿನ ತಿದ್ದುಪಡಿಯ ಪ್ರಕಾರ, ತಪ್ಪು ಮಾಹಿತಿ ಇದ್ದಲ್ಲಿ ಜೈಲು ಶಿಕ್ಷೆಯ ಪ್ರಸ್ತಾಪವಿತ್ತು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.