ಕಮಲಾ ಮಿಲ್ಸ್‌ ದುರಂತ: ಪಬ್‌ ಮಾಲಕರ ಮಾಹಿತಿದಾರರಿಗೆ 1 ಲಕ್ಷ ರೂ.


Team Udayavani, Jan 6, 2018, 11:03 AM IST

Kamala-Mills-fire-700.jpg

ಮುಂಬಯಿ : ನಗರದ ಲೋವರ್‌ ಪರೇಲ್‌ ನಲ್ಲಿರುವ  ಕಮಲಾ ಮಿಲ್ಸ್‌ ಆವರಣದಲ್ಲಿನ ಎರಡು ರೆಸ್ಟೋರೆಂಟ್‌ – ಬಾರ್‌ನಲ್ಲಿ  ಕಳೆದ ಡಿ.29ರಂದು ಸಂಭವಿಸಿದ್ದ  ಭೀಕರ ಬೆಂಕಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದ ಎಫ್ಐಆರ್‌ ಗೆ ಇನ್ನಷ್ಟು ಹೆಸರುಗಳನ್ನು ಸೇರಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೇ ರೀತಿ ಈಗಲೂ ತಲೆಮರೆಸಿಕೊಂಡಿರುವ ಪಬ್‌ ಮಾಲಕರ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಇನಾಮು ಕೊಡಲಾಗುವುದು ಎಂದು ಹೇಳಿದ್ದಾರೆ. 

ಮೋಜೋಸ್‌ ಬ್ರಿಸ್ಟೋದಲ್ಲಿ ಗಿರಾಕಿಗಳಿಗೆ ಅಕ್ರಮವಾಗಿ ಪೂರೈಸಲಾಗುತ್ತಿದ್ದ ಹುಕ್ಕಾದಿಂದ ಹಾರುತ್ತಿದ್ದ ಬೆಂಕಿಯ ಕಿಡಿಗಳೇ ಅಗ್ನಿ ಅವಘಡಕ್ಕೆ ಕಾರಣವಾಗಿದ್ದವು ಎಂಬ ವಿಷಯ ತನಿಖೆಯಲ್ಲಿ ಬೆಳಕಿಗೆ ಬಂದಿರುವುದನ್ನು ಅನುಸರಿಸಿ ಈ ಪ್ರಕರಣದ ಎಫ್ಐಆರ್‌ಗೆ ಇನ್ನಷ್ಟು ಹೆಸರುಗಳನ್ನು ಸೇರಿಸಲಾಗುವುದೆಂದು ಮುಂಬಯಿ ಪೊಲೀಸರು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿದೆ. 

ಕಮಲಾ ಮಿಲ್ಸ್‌ ಬೆಂಕಿಯಲ್ಲಿ 14 ಅಮಾಯಕ ಜೀವಗಳು ಸುಟ್ಟು ಕರಕಲಾಗಿದ್ದವು. ಈ ಅನಾಹುತಕ್ಕೆ ವಿದ್ಯುತ್‌ ಶಾರ್ಟ್‌ ಸರ್‌ಕ್ಯೂಟ್‌ ಕಾರಣವೆಂದು ಮೊದಲಲ್ಲಿ ಶಂಕಿಸಲಾಗಿತ್ತು. 

ಈ ಬೆಂಕಿ ಅವಘಡಕ್ಕೆ ಸಂಬಂಧಿಸಿದ ಎಫ್ಐಆರ್‌ನಲ್ಲಿ ಹೆಸರಿಸಲಾಗಿರುವ ಆರೋಪಿಗಳ ವಿರುದ್ಧ ಐಪಿಸಿಯ ಇನ್ನಷ್ಟು ಸೆಕ್ಷನ್‌ಗಳನ್ನು ಪ್ರಯೋಗಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. 

ಈ ನಡುವೆ ಮುಂಬಯಿ ಪೊಲೀಸರು ಈಗಲೂ ತಲೆ ಮರೆಸಿಕೊಂಡಿರುವ ಕಮಲಾ ಮಿಲ್ಸ್‌ ಆವರಣದೊಳಗಿನ ಒನ್‌ ಅಬೌವ್‌ ಪಬ್‌ನ ಮಾಲಕರ ಬಗ್ಗೆ ಮಾಹಿತಿ ಕೊಟ್ಟವರಿಗೆ ಒಂದು ಲಕ್ಷ ಇನಾಮು ಕೊಡಲಾಗುವುದು ಎಂದು ಪ್ರಕಟಿಸಿದ್ದಾರೆ.

ಡಿ.29ರಂದು ಕಮಲಾ ಮಿಲ್ಸ್‌ ಆವರಣದೊಳಗೆ ಬೆಂಕಿ ಅನಾಹುತ ಸಂಭವಿಸಿ 14 ಮಂದಿ ಮೃತಪಟ್ಟು ಇತರ 30 ಮಂದಿ ಗಾಯಗೊಂಡ ಬಳಿಕ ಪಬ್‌ ಮಾಲಕರಾಗಿರುವ ಕೃಪೇಶ್‌ ಮನ್‌ಸುಖ್‌ಲಾಲ್‌ ಸಾಂಗ್ವಿ , ಜಿಗರ್‌ ಸಾಂಗ್ವಿ  ಮತ್ತು ಅಭಿಜೀತ್‌ ಮಾನ್‌ಕರ್‌ ತಲೆಮರೆಸಿಕೊಂಡಿದ್ದು ಅವರಿನ್ನೂ ಪತ್ತೆಯಾಗಿಲ್ಲ. 

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.