ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
Team Udayavani, Jan 6, 2018, 11:59 AM IST
ಹಳೆಯಂಗಡಿ: ಮೂಲ್ಕಿ ಮೂಡಬಿದಿರೆ ವಿಧಾನಸಭಾ ಕ್ಷೇತ್ರದಲ್ಲಿ ಜ.7ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ರೂ. 79 ಕೋ. ರೂ ವೆಚ್ಚದ ವಿವಿಧ ಯೋಜನೆಗಳಿಗೆ ಮೂಡಬಿದಿರೆಯಲ್ಲಿ ಅಧಿಕೃತವಾಗಿ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಮೂಲ್ಕಿ ಬ್ಲಾಕ್ ಕಾಂಗ್ರೆಸ್ನಿಂದ 5 ಸಾವಿರ ಮಂದಿ ಭಾಗವಹಿಸಲಿದ್ದಾರೆ ಎಂದು ಶಾಸಕ ಕೆ. ಅಭಯಚಂದ್ರ ಜೈನ್ ಹೇಳಿದರು.
ಹಳೆಯಂಗಡಿಯ ಹರಿ ಓಂ ಸಭಾಂಗಣದಲ್ಲಿ ಜ.4ರಂದು ಮೂಲ್ಕಿ ಬ್ಲಾಕ್ ಕಾಂಗ್ರೆಸ್ನ ವತಿಯಿಂದ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮೂಡಬಿದಿರೆ, ಬಜಪೆ ಹಾಗೂ ಮೂಲ್ಕಿ ಬ್ಲಾಕ್ಗಳಿಂದ ಪ್ರತ್ಯೇಕವಾಗಿ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಲಿದ್ದಾರೆ. ವಿವಿಧ ಯೋಜನೆಯ ಫಲಾನುಭವಿಗಳು ಸಹ ಈ ಕಾರ್ಯಕ್ರಮದಲ್ಲಿ ತಮ್ಮ ಸರಕಾರಿ ಸವಲತ್ತುಗಳನ್ನು ಪಡೆಯಲಿದ್ದಾರೆ ಎಂದರು.
ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು ಅಧ್ಯಕ್ಷತೆ ವಹಿಸಿ, ಸ್ವಾಗತಿಸಿದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ, ಮೂಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಹಕೀಂ ಮೂಲ್ಕಿ, ಎಪಿಎಂಸಿ ಅಧ್ಯಕ್ಷ ಪ್ರಮೋದ್ಕುಮಾರ್, ಕೆಪಿಸಿಸಿ ಸದಸ್ಯ ಎಚ್.ವಸಂತ ಬೆರ್ನಾಡ್, ಕೆಪಿಸಿಸಿ ಮೊಗವೀರ ಸಮಿತಿಯ ಕ್ಷೇತ್ರದ ಅಧ್ಯಕ್ಷ ತಾರಾನಾಥ್, ಪ್ರಧಾನ ಕಾರ್ಯದರ್ಶಿ ಸಂದೀಪ್ ಚಿತ್ರಾಪು, ಇಂಟಕ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿರಂಜೀವಿ ಅಂಚನ್, ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಜಲಜಾ ಮತ್ತಿತರರು ಉಪಸ್ಥಿತರಿದ್ದರು. ಮೂಲ್ಕಿ ಬ್ಲಾಕ್ನ ವಿವಿಧ ವಲಯದ ಪದಾಧಿಕಾರಿಗಳು, ನಗರ ಪಂಚಾಯತ್, ಗ್ರಾಮ ಪಂಚಾಯತ್ ಪ್ರತಿನಿಧಿಗಳು, ನಿಗಮ ಮಂಡಳಿಯ ಸದಸ್ಯರು, ಜಿಲ್ಲಾ ಸಮಿತಿಯ ಪ್ರಮುಖರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ