ಪರ್ರಿಕರ್ಗೆ ಮೋದಿ ಬುಲಾವ್ ಸ್ವಾಗತಾರ್ಹ: ಎಂ.ಬಿ. ಪಾಟೀಲ
Team Udayavani, Jan 7, 2018, 6:30 AM IST
ವಿಜಯಪುರ: ಮಹದಾಯಿ ವಿವಾದ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಗೋವಾ ಮುಖ್ಯಮಂತ್ರಿ ಮನೋಹರ ಪರ್ರಿಕರ್ ಅವರಿಗೆ ಬುಲಾವ್ ನೀಡಿರುವುದು ಸ್ವಾಗತಾರ್ಹ. ಕರ್ನಾಟಕ ಸರ್ಕಾರವನ್ನು ಆಹ್ವಾನಿಸಿಲ್ಲ ಎಂಬ ಯಾವುದೇ ಪ್ರತಿಷ್ಠೆ ನಮಗಿಲ್ಲ, ಸಮಸ್ಯೆಗೆ ಪರಿಹಾರ ದೊರೆತರೆ ಸಾಕು ಎಂದು ಜಲ ಸಂಪನ್ಮೂಲ ಸಚಿವ ಡಾ.ಎಂ.ಬಿ. ಪಾಟೀಲ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಹದಾಯಿ ನದಿ ನೀರಿನ ವಿಷಯವಾಗಿ ಭಾನುವಾರ ಚರ್ಚಿಸಲು ಗೋವಾ ಸಿಎಂ ಪರ್ರಿಕರ್ ಅವರನ್ನು ಮೋದಿ ಕರೆದಿದ್ದು ಸಕಾರಾತ್ಮಕ ಫಲಿತಾಂಶ ನೀಡುವ ನಿರೀಕ್ಷೆ ಇದೆ. ಯಡಿಯೂರಪ್ಪ ಅವರಿಗೆ ಪತ್ರ ಬರೆದ ವಿಷಯದಲ್ಲೂ ನಮಗೆ ಬೇಸರವಿಲ್ಲ. ಈಗ ಪರ್ರಿಕರ್ ಅವರನ್ನು ಮಹದಾಯಿ ವಿಷಯವಾಗಿ ಚರ್ಚಿಸಲು ಕರೆದಾಗಲೂ ಆಕ್ಷೇಪವಿಲ್ಲ. ಸಮಸ್ಯೆಗೆ ಪರಿಹಾರ ದೊರೆತರೆ ಸಾಕು, ಈ ವಿಷಯದಲ್ಲಿ ನಮಗೆ ಯಾವುದೇ ಪ್ರತಿಷ್ಠೆಯಿಲ್ಲ. ಮಾತುಕತೆ ನಡೆಸಲು ಸ್ಥಳ, ಸಮಯ ನಿಗದಿ ಮಾಡುವಂತೆ ಪತ್ರ ಬರೆದವರೇ ನಾವು ಎಂದರು.
ಮಹದಾನಿ ನೀರು ಲಭ್ಯತೆ ಕುರಿತು ಜನತೆಯ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿರುವ ಗೋವಾ ಸಿಎಂ ಮನೋಹರ ಪರೀಕ್ಕರ್ ಅವರು ಏನೇ ಮಾಡಿದರೂ ನ್ಯಾಯಾ ಧಿಕರಣದ ಮುಂದೆ ಗೋವಾದ ವಂಚನೆಯ ಮೊಂಡು ವಾದಕ್ಕೆ ತಕ್ಕ ಉತ್ತರ ನೀಡುತ್ತೇವೆ. ಅಂತಿಮವಾಗಿ ನಮ್ಮ ಪಾಲಿನ ನೀರು ಪಡೆಯುವ ವಿಷಯದಲ್ಲಿ ಕಾನೂನು ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
MUST WATCH
ಹೊಸ ಸೇರ್ಪಡೆ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
T20 ವಿಶ್ವಕಪ್ ಇಂಗ್ಲೆಂಡ್ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್ ಬೌಲರ್ ತಂಡಕ್ಕೆ ಕಂಬ್ಯಾಕ್