ಶಾಲೆಗಳಲ್ಲಿ ಸಾಮಾಜಿಕ ಜಾಲತಾಣಗಳ ನಿಷೇಧ?


Team Udayavani, Jan 7, 2018, 6:20 AM IST

computer-school-students.jpg

ಬೆಂಗಳೂರು : ಶಾಲೆಗಳ ಕಂಪ್ಯೂಟರ್‌ ಲ್ಯಾಬ್‌ನಲ್ಲಿ ಸಾಮಾಜಿಕ ಜಾಲತಾಣದ ಸೈಟ್‌ಗಳನ್ನು ಬ್ಲಾಕ್‌ ಮಾಡಬೇಕು. ವಿದ್ಯಾರ್ಥಿಗಳು ತಂತ್ರಜ್ಞಾನದ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಪಾಲಕ, ಪೋಷಕರಿಗೆ ಮಾಹಿತಿ ನೀಡಬೇಕು. ವಿದ್ಯಾರ್ಥಿಗಳು ಕಂಪ್ಯೂಟರ್‌ ಬಳಕೆ ಮಾಡುವಾಗ ಶಿಕ್ಷಕರು, ಶಾಲಾ ಮುಖ್ಯಸ್ಥರು ನಿಗಾವಹಿಸಬೇಕು.

ಇದು, ರಾಜ್ಯ ಸರ್ಕಾರ ಪ್ರಕಟಿಸಿರುವ ಕರ್ನಾಟಕ ಶೈಕ್ಷಣಿಕ ಸಂಸ್ಥೆಗಳ(ವರ್ಗೀಕರಣ, ನೋಂದಣಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾನ್ಯತೆ, ನಿಯಂತ್ರಣ, ಪಠ್ಯವಸ್ತು ನಿಗದಿಪಡಿಸುವಿಕೆ) ತಿದ್ದುಪಡಿ ನಿಯಮಗಳ 2017 ಕರಡು ಪ್ರತಿಯಲ್ಲಿ ಉಲ್ಲೇಖೀಸಿರುವ ಪ್ರಮುಖ ಅಂಶಗಳು.

ರಾಜ್ಯದ ಎಲ್ಲ ಶಾಲೆಗಳ ಕಂಪ್ಯೂಟರ್‌ನಲ್ಲಿ ಸಾಮಾಜಿಕ ಜಾಲತಾಣ ಮತ್ತು ಅಶ್ಲೀಲ ವೆಬ್‌ಸೈಟ್‌ ತಾಣಗಳನ್ನು ಬ್ಲಾಕ್‌ ಮಾಡುವಂತೆ ಕರಡು ಪ್ರತಿಯಲ್ಲಿ ತಿಳಿಸಿದೆ. ವಿದ್ಯಾರ್ಥಿಗಳು ಕಂಪ್ಯೂಟರ್‌ ಬಳಕೆ ಮಾಡುವಾಗ ನಿಗಾವಹಿಸಬೇಕು. ಪೋಕೊÕ ಕಾಯ್ದೆ ಕುರಿತು ಶಾಲಾ ಮಕ್ಕಳಲ್ಲಿ ಮತ್ತು ಪಾಲಕ, ಪೋಷಕರಲ್ಲಿ ಆಗಾಗ ಅರಿವು ಮೂಡಿಸಬೇಕು. ಮಕ್ಕಳ ಮೇಲಿನ ದೌರ್ಜನ್ಯ, ಲೈಂಗಿಕ ಕಿರುಕುಳಗಳ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಸೈಬರ್‌ ಭದ್ರತೆಗೆ ಹೆಚ್ಚಿನ ಮಹತ್ವ ನೀಡುವಂತೆ ಕರಡು ಪ್ರತಿಯಲ್ಲಿ ತಿಳಿಸಿದೆ.

ವಿದ್ಯಾರ್ಥಿಗಳಿಗೆ ಸುರಕ್ಷತೆ ಮತ್ತು ಅಸುರಕ್ಷತೆ ಕುರಿತು ಸಮಗ್ರ ಮಾಹಿತಿ ನೀಡಬೇಕು. ಮಕ್ಕಳ ವರ್ತನೆಯ ಮೇಲೆ ನಿರಂತರ ನಿಗಾವಹಿಸಬೇಕು. ಹೊಸ ಶಾಲೆ ಆರಂಭಿಸಲು ನಗರ ಪ್ರದೇಶದಲ್ಲಿ ಮಾನ್ಯತೆ ನಿಗದಿ ಪಡಿಸಿದ್ದ ಭೂಮಿ ಅಳತೆಯ ಮಿತಿ ಕಡಿಮೆಗೊಳಿಸಿದೆ. ನೋಂದಣಿ ಶುಲ್ಕ, ಮಾನ್ಯತೆ ನವೀಕರಣ, ಸಾರಿಗೆ ನಿಯಮ ಪಾಲಿಸುವುದರ ಕುರಿತು ತಿದ್ದುಪಡಿ ಮಾಡಲಾಗಿದೆ.

ನಗರ ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಹೊಸ ಖಾಸಗಿ ಶಾಲೆಗೆ ಅರ್ಜಿ ಸಲ್ಲಿಸಲು ಇರಬೇಕಾದ ಮೂಲಸೌಕರ್ಯ, ಶುಲ್ಕ, ಪರವಾನಿಗೆ ಸೇರಿ ಶಾಲೆಗಳು ಕಡ್ಡಾಯವಾಗಿ ಪಾಲಿಸಬೇಕಾದ ನಿಯಮ ರೂಪಿಸಿದೆ. 1995 ನಿಯಮಗಳಿಗೆ ತಿದ್ದುಪಡಿತಂದಿದ್ದು, ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಿದೆ.

ನೋಂದಣಿ ನಿಯಮ:
ಪೂರ್ವ ಪ್ರಾಥಮಿಕಕ್ಕೆ ಬಿಬಿಎಂಪಿ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ 2 ಸಾವಿರ ಚದರ ಅಡಿ, ಇತರೆ ಪ್ರದೇಶದಲ್ಲಿ 4 ಸಾವಿರ ಚದರ ಅಡಿ ಭೂಮಿ ಇರಬೇಕು. ಪ್ರಾಥಮಿಕ ಬಿಬಿಎಂಪಿ, ನಗರಸಭೆ ವ್ಯಾಪ್ತಿಯಲ್ಲಿ 1500 ಚದರ ಅಡಿ, ಇತರೆ ಪ್ರದೇಶದಲ್ಲಿ 3 ಸಾವಿರ ಚದರ ಅಡಿ ಭೂಮಿ ಇರಬೇಕು. ಪ್ರೌಢಶಾಲೆ ಬಿಬಿಎಂಪಿ, ನಗರಸಭೆ ವ್ಯಾಪ್ತಿಯಲ್ಲಿ 1 ಸಾವಿರ ಚದರ ಅಡಿ, ಇತರೆ ಪ್ರದೇಶದಲ್ಲಿ 2 ಸಾವಿರ ಚದರ ಅಡಿ ಭೂಮಿ ಇರಬೇಕು. ನೋಂದಣಿ ಶುಲ್ಕ ಮತ್ತು ಪ್ರಕ್ರಿಯೆ ಶುಲ್ಕ ಕ್ರಮವಾಗಿ 25 ಮತ್ತು 10 ಸಾವಿರದಿಂದ ಪ್ರಾರಂಭವಾಗಿ ತರಗತಿಗಳ ಆಧಾರದ ಮೆಲೆ 1 ಲಕ್ಷ ಹಾಗೂ 20 ಸಾವಿರ ರೂ.ನಿಗದಿ ಪಡಿಸಿದೆ.

ಶೌಚಾಲಯ ತಾರತಮ್ಯ!
ಶಾಲೆಗಳ ಮೂಲಸೌಕರ್ಯದಡಿ ಬಾಲಕರಿಗೆ ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ ಇರಬೇಕು ಎಂಬ ಅಂಶ ಇದೆ. ಬಾಲಕರ ಶೌಚಾಲಯ ಕಡ್ಡಾಯ ಎಂದು ನಮೂದಿಸಿ ಬಾಲಕಿಯರ ಶೌಚಾಲಯ ಅಗತ್ಯಕ್ಕೆ ಅನುಸಾರವಾಗಿ ನಿರ್ಮಿಸಿ ಎಂದಿದ್ದಾರೆ. ವಿದ್ಯಾರ್ಥಿಗಳಿಗೆ ಶೌಚಾಲಯ ಮತ್ತು ಕುಡಿಯುವ ನೀರು ಕಡ್ಡಾಯ, ಅದರಲ್ಲಿ ತಾರತಮ್ಯ ಸರಿಯಲ್ಲ. ಇದು ಹಾಸ್ಯಾಸ್ಪದ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಟೀಕಿಸಿವೆ.

ಶಾಲೆಗಳಿಗೆ ಪ್ರತ್ಯೇಕವಾಗಿ ಮಾನ್ಯತೆ ಪಡೆಯುವ ಪದ್ಧತಿ ರದ್ದು ಮಾಡಿದ್ದು, ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗಿದೆ. ಪೂರ್ವ ಪ್ರಾಥಮಿಕ ಶಾಲೆ ತೆರೆಯಲು ನಿಗದಿ ಪಡಿಸಿದ್ದ ಮಾನದಂಡ ಅವೈಜ್ಞಾನಿಕವಾಗಿದೆ. ಶಾಲೆಗಳಲ್ಲಿ ಶೌಚಾಲಯ ಕಡ್ಡಾಯವಾಗಿರಲೇ ಬೇಕು. ಜ.13ರಂದು ನಡೆಯುವ ರಾಜ್ಯ ಮಟ್ಟದ ಸಮಾವೇಶದಲ್ಲಿ ಈ ಕುರಿತು ಚರ್ಚಿಸಲಿದ್ದೇವೆ.
– ಡಿ.ಶಶಿಕುಮಾರ್‌,  ಪ್ರಧಾನ ಕಾರ್ಯದರ್ಶಿ ಕ್ಯಾಮ್ಸ್‌

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.