ಅರಸಿನಮಕ್ಕಿ ಹತ್ಯಡ್ಕದಲ್ಲಿ ತಾಳಮದ್ದಳೆ ವೇಳೆ ಕಾಡಾನೆ ಪ್ರತ್ಯಕ್ಷ !


Team Udayavani, Jan 8, 2018, 8:15 AM IST

Elephant-7-1.jpg

ಅರಸಿನಮಕ್ಕಿ: ಇಲ್ಲಿನ ಉದ್ಯಮಿಯೊಬ್ಬರ ಮನೆಯಲ್ಲಿ ಯಕ್ಷಗಾನ ತಾಳಮದ್ದಳೆ ನಡೆಯುತ್ತಿದ್ದ ವೇಳೆ ಮನೆಯ ಆವರಣ ಗೋಡೆಯ ಬಳಿ ಕಾಡಾನೆಯೊಂದು ಕಾಣಿಸಿಕೊಂಡು ಜನರಲ್ಲಿ ಆತಂಕ, ಕುತೂಹಲ ಹುಟ್ಟಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಅರಸಿಮಕ್ಕಿಯ ಹತ್ಯಡ್ಕದಲ್ಲಿ ನಡೆದಿದೆ. ಘಟನೆಯಿಂದಾಗಿ ಯಾವುದೇ ಅನಾಹುತ ಸಂಭವಿಸಿಲ್ಲವಾದರೂ ಹತ್ತಾರು ಮಂದಿಗೆ ಆನೆಯು ಒಮ್ಮೆಲೆ ದರ್ಶನ ನೀಡಿದ್ದು ಜನರನ್ನು ಕಂಗಾಲಾಗಿಸಿತು.

ಹಸ್ತಿನಾವತಿ ಎಂದಾಗ ಹಸ್ತಿ ಪ್ರತ್ಯಕ್ಷ !
ಸ್ಥಳೀಯ ಉದ್ಯಮಿ ಸುಧೀರ್‌ ಕುಮಾರ್‌ ಅವರು ತಮ್ಮ ಮನೆಯಲ್ಲಿ ರವಿವಾರ ಮಧ್ಯಾಹ್ನ ಸತ್ಯನಾರಾಯಣ ಪೂಜೆ ಹಾಗೂ ಮಧ್ಯಾಹ್ನದ ಅನಂತರ ಮನೆಯಂಗಳದಲ್ಲಿಯೇ ಸುಭದ್ರಾರ್ಜುನ ತಾಳಮದ್ದಳೆಯನ್ನು ಏರ್ಪಡಿಸಿದ್ದರು. 
ಅಪರಾಹ್ನ 3 ಗಂಟೆ ಸುಮಾರಿಗೆ ತಾಳಮದ್ದಳೆಯು ಆರಂಭವಾಯಿತು. ತಾಳಮದ್ದಳೆ ಪ್ರಾರಂಭವಾಗಿ ಸತ್ಯ
ಭಾಮೆ ಹಾಗೂ ಶ್ರೀಕೃಷ್ಣನ ಸಂವಾದ ನಡೆಯುತ್ತಿತ್ತು. ಹಸ್ತಿನಾವತಿಯ ರಾಜ ಕೌರವನಿಗೆ ಸುಭದ್ರೆಯನ್ನು ನೀಡಿ ವಿವಾಹ ಮಾಡಿಸುವ ಕುರಿತು ಬಲರಾಮನು ಯೋಚಿಸುತ್ತಿರುವ ಬಗ್ಗೆ ಶ್ರೀಕೃಷ್ಣನಲ್ಲಿ ತಿಳಿಸುತ್ತಿದ್ದಳು. ಕಾವ್ಯಶ್ರೀ ಅಜೇರು ಇವರ ಭಾಗವತಿಕೆಯಲ್ಲಿ ಹರೀಶ್‌ ಬೊಳಂತಿಮೊಗರು ಹಾಗೂ ಶೇಣಿ ಬಾಲಮುರಳಿಯವರು ಅರ್ಥವನ್ನು ನುಡಿಯುತ್ತಿದ್ದರು. ಸಾಕಷ್ಟು ಸಂಖ್ಯೆಯಲ್ಲಿದ್ದ ಯಕ್ಷಗಾನಾಸಕ್ತರು ತಾಳಮದ್ದಳೆಯನ್ನು ಆಸ್ವಾದಿಸುತ್ತಿದ್ದರು. ಇದೇ ಸಂದರ್ಭದಲ್ಲಿ ಹಸ್ತಿನಾವತಿಯ ರಾಜನಿಗೆ ಮದುವೆ ಮಾಡಿಕೊಡಬಾರದು ಎಂದು ಸತ್ಯಭಾಮೆ ನುಡಿಯುತ್ತಿದ್ದ ಸಂದರ್ಭದಲ್ಲೆ ದಿಢೀರನೆ ಅವರ ಮನೆಯ ಅಂಗಳದಲ್ಲಿ ವಾಹನಗಳ ನಿಲುಗಡೆಯ ಜಾಗದಲ್ಲಿ ಹಸ್ತಿ ಪ್ರತ್ಯಕ್ಷವಾಗಿದೆ. ಮನೆಯ ಯಜಮಾನರು ಹಾಗೂ ಹತ್ತಿರದಲ್ಲಿದ್ದವರು ಕಂಪೌಂಡ್‌ನೊಳಗೆ ಗಾಬರಿಯಿಂದ ಬಂದಿದ್ದು ಆ ಸಂದರ್ಭದಲ್ಲಿ ವಾಹನವನ್ನು ಪಾರ್ಕ್‌ ಮಾಡಲು ಬಂದವರು ಕೂಡ ಭೀತಿಯಿಂದ ಅಂಗಳದೊಳಕ್ಕೆ ಬಂದಿದ್ದಾರೆ. ಅನೇಕರು ಹಠಾತ್‌ ಪ್ರತ್ಯಕ್ಷವಾದ ಆನೆಯನ್ನು ಕಂಡು ಭೀತಿಗೊಳಗಾಗಿದ್ದಾರೆ. ಸಾಕಷ್ಟು ವಾಹನ, ಜನರನ್ನು ಕಂಡ  ಆನೆಯು ಮನೆಯ ಹಿತ್ತಲಿನಿಂದ ತೋಟಕ್ಕೆ ಹೋಗಿ ಕಾಡನ್ನು ಸೇರಿಕೊಂಡಿದೆ. ಗಜ ಪುರಾಣದಿಂದಾಗಿ ಸುಮಾರು ಹದಿನೈದು ನಿಮಿಷಗಳ ಕಾಲ ತಾಳಮದ್ದಳೆಯನ್ನು ನಿಲ್ಲಿಸಿ ಅನಂತರ ಮುಂದುವರಿಸಲಾಯಿತು. ತಾಳಮದ್ದಳೆಯಲ್ಲಿ ಹಲವಾರು ಬಾರಿ ಕಾಡಾನೆ ವಿಷಯ ಪ್ರಸ್ತಾಪವಾಗಿ ಹಾಸ್ಯದ ಹೊನಲು ಹರಿಯುವಂತಾಯಿತು.

ಕಾಡಾನೆ ಉಪಟಳ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದ್ದು ಶಿಶಿಲದಲ್ಲಿ ಶನಿವಾರ ಕಾಡಾನೆ ತೋಟವನ್ನು ಧ್ವಂಸಗೊಳಿಸಿದ್ದು ರವಿವಾರ ಇದೇ ಆನೆ ಬಂದಿರಬಹುದು ಎಂದು ಸ್ಥಳೀಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.