ಆಲ್ರೌಂಡರ್ ಯೂಸುಫ್ ಪಠಾಣ್ ಬಿಸಿಸಿಐನಿಂದ ಅಮಾನತು
Team Udayavani, Jan 9, 2018, 2:27 PM IST
ಮುಂಬಯಿ: ಉದ್ದೀಪನ ಮದ್ದು ಸೇವನೆ ಮಾಡಿರುವ ಕಾರಣಕ್ಕಾಗಿ ಆಲ್ರೌಂಡರ್ ಯೂಸುಫ್ ಪಠಾಣ್ ಅವರನ್ನು ಬಿಸಿಸಿಐ ಎಲ್ಲಾ ಮಾದರಿಯ ಕ್ರಿಕೆಟ್ನಿಂದ 5 ತಿಂಗಳ ಕಾಲ ಅಮಾನತು ಮಾಡಿದೆ.
‘ನಿಷೇಧಿತ ಉದ್ದೀಪನ ಮದ್ದನ್ನು ಅಜಾಗರೂಕತೆಯಿಂದ ಸೇವಿಸಿರುವುದು ಧೃಡಪಟ್ಟಿರುವ ಕಾರಣ
ಪಠಾಣ್ ಅವರನ್ನು ತಕ್ಷಣದಿಂದ 5 ತಿಂಗಳ ಕಾಲ ನಿಷೇಧಿಸಲಾಗಿದೆ’ ಎಂದು ಬಿಸಿಸಿಐ ಮಂಗಳವಾರ ತಿಳಿಸಿದೆ.
ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ದೇಸಿ ಪಂದ್ಯವೊಂದನ್ನು ಆಡುತ್ತಿರುವ ವೇಳೆ ಉದ್ದೀಪನ ಪರೀಕ್ಷೆ ನಡೆಸಲಾಗಿದ್ದು, ಆ ಪರೀಕ್ಷೆಯಲ್ಲಿ ಪಠಾಣ್ ಮದ್ದು ಸೇವಿಸಿರುವು ದು ಧೃಡಪಟ್ಟಿದೆ ಎಂದು ಬಿಸಿಸಿಐ ಹೇಳಿದೆ.
ಕೆಮ್ಮಿನ ಸಿರಪ್ಗಳಲ್ಲಿ ಸಾಮಾನ್ಯವಾಗಿ ಕಾಣಬಹುದಾದ ಮದ್ದನ್ನು ಪಠಾಣ್ ಸೇವಿಸಿದ್ದರು ಎನ್ನಲಾಗಿದೆ.
ಸದ್ಯ ಭಾರತ ಕ್ರಿಕೆಟ್ ತಂಡದಿಂದ ದೂರವಿರುವ ಬರೋಡದ ಆಟಗಾರನಿಗೆ ಬಾರಿಯ ಐಪಿಎಲ್ನಲ್ಲಿ ಆಡುವ ಕನಸು ಭಗ್ನಗೊಂಡಿದ್ದು, ಭಾರೀ ಮೊತ್ತವು ತಪ್ಪಿ ಹೊದಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ
MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?
T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್ ಕೆಂಜಿಗೆಗೆ ಸ್ಥಾನ
IPL;ಇಂದು ಆರ್ಸಿಬಿ ಎದುರಾಳಿ ಗುಜರಾತ್ ಟೈಟಾನ್ಸ್:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ
England; 20 ವರ್ಷದ ಕ್ರಿಕೆಟಿಗ ನಿಗೂಢ ಸಾವು!