ಯತಿಗಳಿಂದ ಆತ್ಮಲಿಂಗ ದರುಶನಕ್ಕೀಗ ವರ್ಷ ಪೂರ್ಣ


Team Udayavani, Jan 9, 2018, 3:02 PM IST

09-39.jpg

ಗೋಕರ್ಣ: ಮಂಡಲಾಧೀಶ್ವರ ರಾಘವೇಶ್ವರ ಭಾರತೀ ಸ್ವಾಮೀಜಿ ಮಾರ್ಗದರ್ಶನದಲ್ಲಿ ಲೋಕಕಲ್ಯಾಣಾರ್ಥ ನಾಡಿನ ವಿವಿಧ ಸಂತರಿಂದ ಆತ್ಮಲಿಂಗ ಪೂಜೆ ಹಾಗೂ ಸಂತ ಸಮರ್ಪಣಾ ಕಾರ್ಯಕ್ರಮ ಇಂದಿಗೆ 365 ದಿನಗಳನ್ನು ಪೂರೈಸಿದಂತಾಗಿದೆ. ಕಳೆದ 2017ರ ಜನವರಿ 9ರಿಂದ ಆರಂಭಗೊಂಡ ಪ್ರತಿದಿನ ನಾಡಿನ ವಿವಿಧ ಮಠದ ಮಠಾಧೀಶರು ಇಲ್ಲಿಗೆ ಬಂದು ಆತ್ಮಲಿಂಗ ಪೂಜೆ ನಡೆಸುವ ಕಾರ್ಯಕ್ರಮ ಜ.8 ಸೋಮವಾರ ಒಂದು ವರ್ಷ ಪೂರೈಸಿದೆ.

ಅಂದು ಆಂಧ್ರ ಪ್ರದೇಶ ಶ್ರೀಶೈಲದ ಸೂರ್ಯಸಿಂಹಾಸನಾ ಮಠಾಧೀಶ ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ಈ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು. ಇಂದು 365ನೇ ದಿನ ಗೋಕರ್ಣ ಮಹಾಬಲೇಶ್ವರ ದೇವಾಲಯದಲ್ಲಿ ಗೋಕರ್ಣ
ಗೌರವ ಕಾರ್ಯಕ್ರಮವು ಬಸವಕಲ್ಯಾಣದ ಶಾಂತಲಿಂಗೇಶ್ವರ ಮಠದ ಶಾಂತಲಿಂಗ ಸ್ವಾಮಿಗಳ ಸಾನ್ನಿಧ್ಯದಲ್ಲಿ ಮಹಾಬಲೇಶ್ವರ ದೇವಾಲಯದ ಆತ್ಮಲಿಂಗಕ್ಕೆ ಪೂಜೆ ನೆರವೇರಿಸಿದರು.

ದೇವಾಲಯದ ಪ್ರಧಾನ ಅರ್ಚಕ ಹಾಗೂ ಉಪಾಧಿವಂತ ಪುರೋಹಿತ ವೇ.ಶಿತಿಕಂಠ ಹಿರೇ ದೇವಾಲಯದ ವತಿಯಿಂದ ಪೂಜ್ಯರಿಗೆ ಫಲ ಸಮರ್ಪಿಸಿ, ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆನೀಡಿ, ಗೌರವಿಸಿದರು. ಆಡಳಿತಾಧಿಕಾರಿ ಜಿ.ಕೆ. ಹೆಗಡೆ ಗೋಳಗೋಡ, ಸಂತಸೇವಕ ಸಮಿತಿ ವಿ.ಡಿ. ಭಟ್ಟ್ ಹಾಗೂ ಉಪಾಧಿವಂತ ಮಂಡಳದ ಸದಸ್ಯರು ಉಪಸ್ಥಿತರಿದ್ದರು. 

ಉಪಾಧಿವಂತ ವೇ.ವಿಶ್ವನಾಥ ಬಾಳೇಹಿತ್ತಲು ಪೂಜಾಕಾರ್ಯ ನೆರವೇರಿಸಿದರು, ಆಗಮಿಸಿದ ಎಲ್ಲ ಸಂತರೂ ತಮ್ಮ ಶಿಷ್ಯ ಜನತೆಯ ಒಳಿತು ಹಾಗೂ ಲೋಕಕಲ್ಯಾಣ ಸಂಕಲ್ಪಿಸಿ, ಪ್ರಾತಃ ಕಾಲದಲ್ಲಿ ಆತ್ಮಲಿಂಗಕ್ಕೆ ಕ್ಷೀರಾಭಿಷೇಕ, ಪಂಚಾಮೃತ, ನವಧಾನ್ಯ, ರುದ್ರಾಭಿಷೇಕ ಬಿಲ್ವಾರ್ಚನೆ, ಮಂಗಳಾರತಿ ಹಾಗೂ ಸುವರ್ಣ ನಾಗಾಭರಣ ವಿಶೇಷ ಪೂಜೆ ಸಲ್ಲಿಸಿ, ಶಿವ ಸಂಪ್ರೀತಿ ಪಡೆದು, ಈ ವಿಶೇಷ ಕಾರ್ಯಕ್ರಮವನ್ನು ಮೆಚ್ಚಿ, ಹಾಡಿ ಹೊಗಳಿ, ಆಶೀರ್ವದಿಸುತ್ತಿದ್ದರು. ಪೂಜೆಯ ನಂತರ ವಿವಿಧ ಸಮಾಜದ ಮುಖಂಡರಿಂದ ಪ್ರತಿದಿನದ ಗೌರವಾರ್ಪಣೆ ನಡೆಸಿಕೊಡಲಾಗುತ್ತಿತ್ತು.

ಇನ್ನು ಮುಂದೆಯೂ ಆತ್ಮಲಿಂಗ ಸನ್ನಿಧಿ ಗೋಕರ್ಣದ ಮಹಾಬಲೇಶ್ವರ ದೇವಾಲಯವು ಸಂತರ ಕೇಂದ್ರವಾಗಲಿದೆ. ರಾಜ್ಯದಲ್ಲಿರುವ ಸುಮಾರು 5ಸಾವಿರಕ್ಕೂ ಹೆಚ್ಚು ಮಠಗಳಿದ್ದು, ಎಲ್ಲ ಮಠಾಧೀಶರನ್ನು ಸಂಪರ್ಕಿಸಿ, ಗೋಕರ್ಣಕ್ಕೆ ಆಹ್ವಾನಿಸಿ, ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲು ಊರಿನ ಉಪಾಧಿವಂತ ಅರ್ಚಕರು ಹಾಗೂ ವಿವಿಧ ಸಮಾಜದ ಮುಖಂಡರ ಸಹಯೋಗದಿಂದ ವ್ಯವಸ್ಥೆ ಮಾಡಲಾಗುವುದು ಎಂದು ರಾಘವೇಶ್ವರ ಭಾರತೀ ಸ್ವಾಮೀಜಿ ತಿಳಿಸಿದ್ದಾರೆ.

ಈ ನಡುವೆ ದೇವಾಲಯದ ಉಪಾಧಿವಂತ ಮಂಡಳ ಹಾಗೂ ಜನಸಮುದಾಯ ಸಂತರುಗಳಿಂದ ನೆರವೇರುವ ಸಾರ್ವಭೌಮ ಮಹಾಬಲೇಶ್ವರ ದೇವರ ಪೂಜಾಕಾರ್ಯ ಅದ್ವಿತೀಯ ಕಾರ್ಯಕ್ರಮವಾಗಿದ್ದು, ಶ್ರೀಗಳ ಸಂಕಲ್ಪದಂತೆ ಮುಂದಿನ ದಿನಗಳಲ್ಲಿಯೂ ಆಗಮಿಸಿ, ಸಂತರು ಆಶೀರ್ವದಿಸಿ
ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೆಂದು ದೇವಾಲಯದ ಆಡಳಿತಾಧಿಕಾರಿ ಜಿ.ಕೆ. ಹೆಗಡೆ ಗೋಳಗೋಡ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1-wwqewqe

Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

ರೈತರಿಗೆ ತಂತ್ರಜ್ಞಾನದ ಕೊಡುಗೆ ಕೊಟ್ಟರೆ ಪ್ರಗತಿ ಸಾಧ್ಯ: ಹಂದೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.