ಸದಸ್ಯರ ಪ್ರಶ್ನೆಗಳಿಗೆ ಚಡಪಡಿಸಿದ ಅಧಿಕಾರಿಗಳು!


Team Udayavani, Jan 11, 2018, 3:17 PM IST

11-34.jpg

ಹೊಸಪೇಟೆ: ನಗರಸಭೆ ಆಸ್ತಿ ರಕ್ಷಣೆ, ಕುಡಿವ ನೀರಿನ ತೆರಿಗೆ ಹೆಚ್ಚಳ, ಆರೋಪ ಪಟ್ಟಿಯಲ್ಲಿರುವ ಸದಸ್ಯರ ಸದಸ್ಯತ್ಯ ರದ್ದತಿ, ಮುನ್ಸಿಪಲ್‌ ಹೈಸ್ಕೂಲ್‌ ಮೈದಾನದಲ್ಲಿನ ಕಾರ್ಯಕ್ರಮಗಳಿಗೆ ಹೆಚ್ಚಿನ ದರ ನಿಗದಿ, ಕಟ್ಟಡ ಪರವಾನಗಿ ಮಂಜೂರಾತಿಗೆ ದರ ಪರಿಷ್ಕರಣೆ, ಮೂರು ವರ್ಷದ ಹಳೆ ಬಿಲ್‌ ಗಳಿಗೆ ಮತ್ತು ವಿತರಿಸಲಾದ ಚಕ್‌ಗಳಿಗೂ ಸದಸ್ಯರ ಅನುಮೋದನೆ ಪಡೆಯುವುದು, ಅಜೆಂಡಾದಲ್ಲಿ ವಿಷಯ ತರಲು ಅರ್ಜಿ ನೀಡಿದರೂ ವಿಷಯ ಪರಿಗಣಿಸುತ್ತಿಲ್ಲ… ಹೀಗೆ ಪ್ರಶ್ನೆ ಮೇಲೆ ಪ್ರಶ್ನೆ ಕೇಳುವ ಮೂಲಕ ಸದಸ್ಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಸಭಾಂಗಣದಲ್ಲಿ ಬುಧವಾರ ಅಧ್ಯಕ್ಷೆ ನಾಗಲಕ್ಷ್ಮಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರ ಅನೇಕ ಪ್ರಶ್ನೆಗಳಿಗೆ ಅಧಿಕಾರಿಗಳ ಮೌನವೇ ಉತ್ತರವಾಗಿತ್ತು. ಅನಂತಶಯನಗುಡಿಯಲ್ಲಿ ನಗರಸಭೆ ಆಸ್ತಿಯಲ್ಲಿದ್ದ ಸಾರ್ವಜನಿಕ ಗ್ರಂಥಾಲಯದ ಸ್ಥಳ 
ಅತಿಕ್ರಮಗೊಂಡಿದೆ. ಆಸ್ತಿ ರಕ್ಷಣೆ ಮಾಡಬೇಕೆಂದು ಅರ್ಜಿ ಸಲ್ಲಿಸಿ ಮೂರು ವರ್ಷವಾದರೂ ಅಧಿಕಾರಿಗಳು ಸ್ಥಳ ಪರಿಶೀಲನೆಗೂ ಮುಂದಾಗಿಲ್ಲ ಎಂದು ಸದಸ್ಯ ಕುಲ್ಲಾಯಪ್ಪ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಇನ್ನುಳಿದ ಸದಸ್ಯರು ಧ್ವನಿಗೂಡಿಸಿ ಸಿಬ್ಬಂದಿಗಳ ವಿರುದ್ಧ ಹರಿಹಾಯ್ದರು.  ನಾಳೆಯೇ ಸ್ಥಳ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಎಇಇ ಮನ್ಸೂರ್‌ ಅಹ್ಮದ್‌ ಭರವಸೆ ನೀಡಿದರು. 

ನಗರಸಭೆಗೆ ಆದಾಯ ಕುಂಠಿತಗೊಂಡಿದೆ. ಕುಡಿವ ನೀರಿನ ದರ ಹೆಚ್ಚಿಸಬೇಕೆಂದು ಪೌರಾಯುಕ್ತರು ಪ್ರಸ್ತಾಪಿಸುತ್ತಿದ್ದಂತೆ ಸದಸ್ಯ ಕೆ.ಗೌಸ್‌ ಮಾತನಾಡಿ, ಮೊದಲು ಜನರಿಗೆ ಕುಡಿವ ನೀರು ಸರಿಯಾಗಿ ಕೊಡಿ. ನೀರು ಸಿಗದಿದ್ದರೂ ಫಾರಂ-3ಗಾಗಿ ಜನರು ನೀರಿನ ಟ್ಯಾಕ್ಸ್‌ ಕಟ್ಟಬೇಕಾದ ಪರಿಸ್ಥಿತಿ ನಿರ್ಮಾಣಗೊಂಡಿದೆ. ಅಲ್ಲದೆ ತಿಂಗಳಿಗೆ 200 ರೂ. ದರ ನಿಗದಿಗೊಳಿಸಿರುವುದು ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿದರು. ಧ್ವನಿಗೂಡಿಸಿದ ಸದಸ್ಯರು, ಅನಧಿಕೃತವಾಗಿ ನೀರಿನ ಸಂಪರ್ಕಕ್ಕೆ ಕಡಿವಾಣ ಹಾಕಬೇಕು. ಬಿಲ್‌ ಕಲೆಕ್ಟರ್‌ಗಳ ಗಮನಕ್ಕೆ ಇಲ್ಲದೆ ಅನಧಿಕೃತ ಕನೆಕ್ಷನ್‌ ನಡೆಯುವುದಿಲ್ಲ. ಪೂರ್ಣ ಪ್ರಮಾಣದಲ್ಲಿ ಕರ ವಸೂಲಿ ಮಾಡಿದರೆ ನಗರಸಭೆಗೆ ಆದಾಯದ ಕೊರತೆ ಎದುರಾಗುವುದಿಲ್ಲ ಎಂದರು.

ನಗರದ ಮುನ್ಸಿಫ‌ಲ್‌ ಗ್ರೌಂಡ್‌ನ‌ಲ್ಲಿ ನಡೆಯುವ ವಾಣಿಜ್ಯ ಮೇಳಕ್ಕೆ 5000 ರೂ., ವಸ್ತು ಪ್ರದರ್ಶನಕ್ಕೆ 1000 ರೂ., ಟಿವಿ ಕಾರ್ಯಕ್ರಮಕ್ಕೆ 25000 ರೂ., ರಾಜಕೀಯ ಕಾರ್ಯಕ್ರಮಗಳಿಗೆ 25000 ರೂ. ನಿಗದಿಪಡಿಸಬಹುದು ಎಂದು ಸದಸ್ಯರು ಸಲಹೆ ನೀಡಿದರು.

ನಗರದಲ್ಲಿನ ಕಟ್ಟಡ ಪರವಾನಗಿ ಪಡೆಯುವ ದರ ಅತಿ ಕಡಿಮೆಯಾಗಿದೆ. ವಸತಿಗಾಗಿ ಪ್ರತಿ ಚ.ಅಡಿಗೆ 2 ರೂ.ರ ಬದಲಾಗಿ 4 ರೂ., ಕೈಗಾರಿಕೆಗೆ
2 ರೂ. ಬದಲಾಗಿ 5 ರೂ. ಮತ್ತು ವಾಣಿಜ್ಯಕ್ಕೆ 2 ರೂ. ಬದಲಾಗಿ 6 ರೂ. ನಿಗದಿಗೊಳಿಸಲು ಚರ್ಚೆ ನಡೆಯಿತು. ನಗರಸಭೆ ಉಪಾಧ್ಯಕ್ಷೆ ಸುಮಂಗಳ
ಸೇರಿದಂತೆ ಸದಸ್ಯರು ಇದ್ದರು. 

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.