ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ; ರೇಸ್‌-3 ಸೆಟ್‌ನಲ್ಲಿ ಗೊಂದಲ


Team Udayavani, Jan 11, 2018, 4:29 PM IST

Salman-life-thrat-700.jpg

ಮುಂಬಯಿ : ಬಾಲಿವುಡ್‌ ಸೂಪರ್‌ ಸ್ಟಾರ್‌ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ ಇದ್ದ ಕಾರಣಕ್ಕೆ ಮುಂಬರುವ ಆತನ ಹೊಸ ಚಿತ್ರ “ರೇಸ್‌ 3′ ಶೂಟಿಂಗನ್ನು ಅರ್ಧಕ್ಕೇ ನಿಲ್ಲಿಸಿ ಬಿಗಿ ಭದ್ರತೆಯಲ್ಲಿ ಆತನನ್ನು ಆತನ ಬಾಂದ್ರಾ ನಿವಾಸಕ್ಕೆ ತಲುಪಿಸಲಾದ ಘಟನೆ ವರದಿಯಾಗಿದೆ. 

ಸಲ್ಮಾನ್‌ ಖಾನ್‌ ಅವರು ಈಚೆಗೆ ಕೃಷ್ಣ ಮೃಗ ಅಕ್ರಮ ಬೇಟೆಯ ಕೇಸ್‌ಗೆ ಸಂಬಂಧಪಟ್ಟು ಜೋಧ್‌ಪುರ ಕೋರ್ಟಿನಲ್ಲಿ ಹಾಜರಾಗಲು ಹೋಗಿದ್ದರು. ಅದರ ಮರುದಿನವೇ ಲಾರೆನ್ಸ್‌ ಬಿಷ್ಣೋಯಿ ಎಂಬ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿತ್ತು ಎನ್ನಲಾಗಿದೆ. 

ವಿಶೇಷವೆಂದರೆ  ಸಲ್ಮಾನ್‌ ಖಾನ್‌ ಅವರು ಜೋಧ್‌ಪುರ ಕೋರ್ಟಿನಲ್ಲಿ ಹಾಜರಾದ ದಿನವೇ ಬಿಷ್ಣೋಯಿ ಯನ್ನು ಕೂಡ  ಬಿಗಿ ಭದ್ರತೆಯಲ್ಲಿ ಕೋರ್ಟಿನಲ್ಲಿ ಹಾಜರುಪಡಿಸಲಾಗಿತ್ತು. 

ಮುಂಬಯಿ ಮಿರರ್‌ ಪ್ರಕಟಿಸಿರುವ ವರದಿ ಪ್ರಕಾರ ಸುಮಾರು 12ಕ್ಕೂ ಹೆಚ್ಚು ಪೊಲೀಸರು ಮೊನ್ನೆ ಮಂಗಳವಾರ ರೇಸ್‌-3 ಚಿತ್ರದ ಸೆಟ್‌ಗೆ ಧಾವಿಸಿ, “ಕೆಲವು ಅಪರಿಚಿತ ವ್ಯಕ್ತಿಗಳು ಈ ಸೆಟ್‌ ಆವರಣವನ್ನು ಪ್ರವೇಶಿಸಿದ್ದಾರೆ’ ಎಂದು ತಿಳಿಸಿದರು. ಸಲ್ಮಾನ್‌ಗೆ ಜೀವ ಬೆದರಿಕೆ ಇರುವ ಕಾರಣ ಆತನನ್ನು ಒಡನೆಯೇ ಸುರಕ್ಷಿತವಾಗಿ ಆತನ ಬಾಂದ್ರಾ ನಿವಾಸಕ್ಕೆ ತಲುಪಿಸಿದರು. ಒಂದು ವಾಹನದಲ್ಲಿ ಸಲ್ಮಾನ್‌ ಜತೆಗೆ ಪೊಲೀಸರಿದ್ದರು ಇನ್ನೊಂದು ವಾಹನದಲ್ಲಿ ಇನ್ನಷ್ಟು ಪೊಲೀಸರು ಬೆಂಗಾವಲಾಗಿ ಹೋಗಿದ್ದರು. 

“ಸಲ್ಮಾನ್‌ ಅಥವಾ ಆತನ ಕುಟುಂಬ ಸದಸ್ಯರೊಬ್ಬರಿಗೆ ಜೀವ ಬೆದರಿಕೆ ಬಂದಿರುವುದು ಇದೇ ಮೊದಲ ಬಾರಿ ಅಲ್ಲ; ಸಲ್ಮಾನ್‌ ಒಮ್ಮೆ ಪಟ್ಟಣದಲ್ಲಿ ಯಾವುದೇ ಭದ್ರತೆ ಇಲ್ಲದೆ, ತನ್ನ ಬಾಡಿಗಾರ್ಡ್‌ ಶೇರಾ ಕೂಡ ಜತೆಗಿಲ್ಲದೆ, ಒಂಟಿಯಾಗಿ ಇರುವುದು ಒಮ್ಮೆ ಗಮನಕ್ಕೆ ಬಂದಿತ್ತು. ಆಗಲೇ ಆತನಿಗೆ ಜಾಗೃತೆಯಿಂದ ಇರುವಂತೆ ಸೂಚಿಸಲಾಗಿತ್ತು. ಈಗ ಅಭೂತಪೂರ್ವ ದಾಳಿಯ ನಿರೀಕ್ಷೆಯಲ್ಲಿ ಸಲ್ಮಾನ್‌ಗೆ ಹೆಚ್ಚು ಸುರಕ್ಷಿತವಾಗಿರುವಂತೆ ಸೂಚಿಸಲಾಗಿದೆ’ ಎಂದು ಹಿರಿಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಒಬ್ಬರು ಹೇಳಿದ್ದಾರೆ.

ಈ ವಿದ್ಯಮಾನವನ್ನು ಅನುಸರಿಸಿ ರೇಸ್‌-3 ಚಿತ್ರದ ನಿರ್ಮಾಪಕ ರಮೇಶ್‌ ತೌರಾಣಿ ಅವರು ತಮ್ಮ ಚಿತ್ರದ ಸೆಟ್‌ಗೆ ಹೆಚ್ಚಿನ ಭದ್ರತೆಯನ್ನು ಒದಗಿಸುತ್ತಿದ್ದಾರೆ. 

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

Rap song: ವೋಟು ನಮ್ಮ ಪವರ್‌ ರ್‍ಯಾಪ್ ಸಾಂಗ್‌‌ ಬಿಡುಗಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.