ಕನಕಪುರದಲ್ಲಿಕಣ್ಮನ ಸೆಳೆದ ಫ‌ಲಪುಷ್ಪ ಪ್ರದರ್ಶನ


Team Udayavani, Jan 11, 2018, 5:30 PM IST

rampura.jpg

ರಾಮನಗರ/ಕನಕಪುರ: ನಗರದ ಮುನ್ಸಿಪಾಲ್‌ ಕಾಲೇಜು ಆವರಣದಲ್ಲಿ ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ ಹಮ್ಮಿಕೊಂಡಿರುವ ಫ‌ಲಪುಷ್ಪ ಪ್ರದರ್ಶನ ಸಂಗ-2018 ನಾಗರಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ.

ಸೇವಂತಿಗೆ, ಗುಲಾಬಿ ಹೂಗಳಿಂದ ಅರಳಿರುವ ಶಕ್ತಿದೇವತೆ ಕಬ್ಟಾಳಮ್ಮ ದೇವಿಯ ದೇವಾಲಯ ಪ್ರಮುಖ ಆಕರ್ಷಣೆಯಾಗಿದೆ. 18 ಅಡಿ ಅಗಲ ಮತ್ತು 20 ಅಡಿ ಎತ್ತರಕ್ಕೆ ಸುಮಾರು 2 ಲಕ್ಷಕ್ಕೂ ಅಧಿಕ ಸೇವಂತಿಗೆ ಮತ್ತು ಗುಲಾಬಿ ಹೂಗಳಿಂದ ರಚನೆಯಾಗಿರುವ ದೇವಾಲಯದ ಪ್ರತಿರೂಪ ಮತ್ತು ಅದರಲ್ಲಿ ವಿರಾಜಮಾನವಾಗಿರುವ ದೇವಿಯ ಉತ್ಸವ ಮೂರ್ತಿ ನೋಡುಗರಲ್ಲಿ ಭಕ್ತಿಯನ್ನು ಮೂಡಿಸುತ್ತಿರುವುದು ವಿಶೇಷ. 

ಕ್ಯಾಪ್ಸಿಕಂನಲ್ಲಿ ಮೂಡಿದ ಕರ್ನಾಟಕ ಭೂಪಟ: ವಿವಿಧ ಬಗೆಯ ತರಾಕಾರಿ ಮತ್ತು ಹೂಗಳಿಂದ ಸಿಂಗಾರಗೊಂಡಿರುವ ಉಯ್ನಾಲೆ, ಸಿ-ಸಾಗಳು ಮಕ್ಕಳ ಕುತೂಹಲಕ್ಕೆ ಕಾರಣವಾದರೆ, ಕೆಂಪು ಮತ್ತು ಹಳದೀ ಬಣ್ಣದ ದೊಣ್ಣೆ ಮೆಣಸಿನಕಾಯಿ (ಕ್ಯಾಪ್ಸಿಕಂ)ನಲ್ಲಿ ಅರಳಿರುವ ಕರ್ನಾಟಕದ ಭೂ ಪಟ ನೋಡುಗರೆಲ್ಲರ ಮೆಚ್ಚುಗೆಗಳಿಸಿತು. ಬಿಳಿ ಸೇವಂತಿಗೆಯಲ್ಲಿ ರಚನೆಯಾಗಿರುವ ಹಸು ಮತ್ತು ಕರುವಿನ ಮೂರ್ತಿಗಳ ಸಹ ಗಮನ ಸೆಳೆಯುವಲ್ಲಿ ಯಶಸ್ವಿಯಾದವು.
 
ಕನಕಪುರದಲ್ಲಿ ಡಿಕೆಶಿ ಚಾರಿಟಬಲ್‌ ಟ್ರಸ್‌ ವತಿಯಿಂದ ಜಿಲ್ಲಾ ಮಟ್ಟದ ಕನಕೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ಫ‌ಲಪುಷ್ಪ ಪ್ರದರ್ಶನ ಏರ್ಪಡಿಸಿದೆ. ಸಾವಿರಾರು ಮಂದಿ ಫ‌ಲಪುಷ್ಪ ಪ್ರದರ್ಶನ ವೀಕ್ಷಿಸಿದರು.ಜೊತೆಗೆ ರೈತರು ಮತ್ತು ಸಾಮಾನ್ಯ ನಾಗರಿಕರಿಗೆ ವಿವಿಧ ವಿಚಾರಗಳಲ್ಲಿ ಮಾಹಿತಿಯನ್ನು ನೀಡುತ್ತಿದೆ. 

ಉತ್ತಮ ಆರೋಗ್ಯಕ್ಕೆ ಯೋಗ ಅವಶ್ಯ: ಸುರೇಶ್‌ ಕನಕಪುರ: ಬದುಕಿನಲ್ಲಿ ಶಾಂತಿ ನೆಮ್ಮದಿ ಆರೋಗ್ಯವನ್ನುಕಾಣಬೇಕಾದರೆ ಯೋಗಾಸನ ಅತ್ಯಂತ ಅವಶ್ಯ ಎಂದು ಸಂಸದ ಡಿ.ಕೆ. ಸುರೇಶ್‌ ಹೇಳಿದರು. 

ನಗರದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ 5 ದಿನಗಳ ಕನಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರತಿದಿನ ಕನಕೋತ್ಸವ ಆರಂಭಕ್ಕೂ ಮುನ್ನ ಪ್ರಾತಃಕಾಲ ಯೋಗಾಸನ ಹಮ್ಮಿಕೊಲಾಗಿದೆ. ತಾಲೂಕಿನ ಎಲ್ಲಾ ಜನತೆ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.

ದೇಗುಲ ಮಠದ ಮುಮ್ಮಡಿ ನಿರ್ವಾಣ ಮಹಾಸ್ವಾಮೀಜಿ ಮಾತನಾಡಿ, ಮನುಷ್ಯ ಜನೋಪಯೋಗಿ ಕಾರ್ಯಗಳನ್ನು ಮಾಡಿದಾಗ ಮಾತ್ರ ಜೀವನದಲ್ಲಿ ಸದ್ಗತಿಗಳು ಕಾಣಲು ಸಾಧ್ಯ. ರಾಮಾಯಣದಲ್ಲಿ ಶ್ರೀರಾಮ ತನ್ನ ಪ್ರಜೆಗಳಿಗಾಗಿ ಇಡೀ ತನ್ನ ಜೀವನವನ್ನೆ ಮುಡಿಪಾಗಿಟ್ಟನು. ಆದೇ ರೀತಿ ತಾಲೂಕಿನ ಜನರ ಏಳಿಗೆ ಹಾಗೂ ಅಭಿವೃದ್ಧಿಗಾಗಿ  .ಕೆ.ಶಿವಕುಮಾರ್‌ ಮತ್ತು ಡಿ.ಕೆ. ಸುರೇಶ್‌ ಅವರು ಟೊಂಕ ಕಟ್ಟಿನಿಂತಿರುವುದು ನಿಜಕ್ಕೂ ಅತ್ಯಂತ ಶ್ಲಾಘನೀಯವಾದ
ವಿಚಾರವೆಂದರು.

ಪ್ರತಿವರ್ಗದ ಜನರ ಏಳಿಗಾಗಿ ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೂ ಸಹ ಸನ್ಮಾನವನ್ನು ಮಾಡುತ್ತಿರುವುದು ಅವರ ವಿಶಾಲವಾದ ಹೃದಯವನ್ನು ತೋರಿಸುತ್ತದೆ ಎಂದು ನುಡಿದರು. ನೀರು ಗಾಳಿ ಶರೀರಕ್ಕೆ ಎಷ್ಟು ಅವಶ್ಯವೋ ಅಷ್ಟೇ ಅವಶ್ಯ ಯೋಗ. ಯೋಗವನ್ನು ಪ್ರತಿನಿತ್ಯ ಮಾಡುವುದರಿಂದ ರೋಗ ಮುಕ್ತವಾಗಿ ಮಾಡಬಹುದಾಗಿದೆ. ಪ್ರತಿನಿತ್ಯ ಧ್ಯಾನ ದೇವರ ಸ್ಮರಣೆ ಮಾಡುವುದರಿಂದ ಮನಸ್ಸಿನಲ್ಲಿ ಇರುವ ಕಲ್ಮಷವನ್ನು ಹೋಗಲಾಡಿಸಬಹುದಾಗಿದೆ ಎಂದರು. ಯೋಗ ಗುರು ವಿದ್ಯಾಶ್ರೀ ಚನ್ನಬಸವಣ್ಣ ಯೋಗ ಪ್ರದರ್ಶನ ಮಾಡಿದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.