ಮುದಸ್ಸಿರ್ ಮೇಲಿನ ಹಲ್ಲೆ ಆರೋಪಿಗಳ ಸೆರೆ
Team Udayavani, Jan 12, 2018, 11:57 AM IST
ಸುರತ್ಕಲ್: ಜ. 3ರಂದು ರಾತ್ರಿ ಸುರತ್ಕಲ್ ಬಳಿ ಮುದಸ್ಸಿರ್(22)ಗೆ ಹಲ್ಲೆ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪಣಂಬೂರು ಉಪ ವಿಭಾಗದ ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.
ಬೈಕಂಪಾಡಿಯ ಕೂರಿಕಟ್ಟ ನಿವಾಸಿ, ಮೂಲತಃ ಬಾಗಲಕೋಟೆ ಮುಟ್ಟಲ ಗೇರಿಯ ಪ್ರೀತಂ (20) ಹಾಗೂ ಸುರತ್ಕಲ್ನ ಅಗರಮೇಲು ನಿವಾಸಿ ಯಶೋಧರ್ (20) ಬಂಧಿ ತರು.
ದೀಪಕ್ ರಾವ್ ಕೊಲೆ ಪ್ರಕರಣದ ಬೆನ್ನಲ್ಲೇ ತಡ ರಾತ್ರಿ ಸುರತ್ಕಲ್ ಬಸ್ ನಿಲ್ದಾಣದ ಬಳಿ ಬೈಕಿನಲ್ಲಿ ಬಂದ ಆರೋಪಿಗಳು ಮಾರಕಾಸ್ತ್ರಗಳಿಂದ ಮುದಸ್ಸಿರ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು.
ದೀಪಕ್ ರಾವ್ ಹತ್ಯೆಗೆ ಪ್ರತೀ ಕಾರವಾಗಿ ಮುದಸ್ಸಿರ್ಗೆ ಹಲ್ಲೆ ನಡೆಸಿ ದ್ದೇವೆ ಎಂದು ಆರೋಪಿಗಳು ತಪ್ಪೊಪ್ಪಿ ಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಎರಡು ವಿಶೇಷ ತನಿಖಾ ದಳ ರಚಿಸ ಲಾಗಿತ್ತು. ಪಣಂಬೂರು ಪೊಲೀಸ್ ಠಾಣಾ ನಿರೀಕ್ಷಕ ರಫೀಕ್ ಕೆ.ಎಂ. ನೇತೃತ್ವದಲ್ಲಿ ಮೊಹಮ್ಮದ್, ಕುಶಲ ಮಣಿಯಾಣಿ, ಸತೀಶ್, ಇಸಾಕ್, ಕೃಷ್ಣ ಬಿ.ಕೆ., ವಿಜಯ್ ಕಾಂಚನ್, ರಾಜ, ಶರಣ್ ಕಾಳಿ, ಚಂದ್ರಹಾಸ ಆಳ್ವ, ರಾಧಾಕೃಷ್ಣ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ
Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್
Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ