ಬೀದಿಗೆ ಬಂತು ಕೈ ನಾಯಕರ ಭಿನ್ನಮತ; ಮೂಡದ ಒಮ್ಮತ


Team Udayavani, Jan 12, 2018, 12:59 PM IST

cong.jpg

ರಾಯಚೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು ಎಲ್ಲ ಪಕ್ಷಗಳು ಪಕ್ಷ ಸಂಘಟನೆಗೆ ಒತ್ತು ನೀಡುತ್ತಿವೆ. ಆದರೆ, ಜಿಲ್ಲಾ ಕಾಂಗ್ರೆಸ್‌ ನಾಯಕರಲ್ಲಿ ಮಾತ್ರ ಒಮ್ಮತ ಮರೆಯಾಗಿದ್ದು, ಭಿನ್ನಮತವೇ ಪ್ರಧಾನವಾಗಿದೆ.
ರಾಜಕೀಯ ಪಕ್ಷ ಎಂದ ಮೇಲೆ ಭಿನ್ನಮತ ಸಹಜವೇ. ಅದನ್ನು ವರಿಷ್ಠರು ತೆರೆಮರೆಯಲ್ಲಿ ಬಗೆಹರಿಸುತ್ತಾರೆ. ಆದರೆ, ಜಿಲ್ಲಾ ಕಾಂಗ್ರೆಸ್‌ ಮಟ್ಟಿಗೆ ಬಣ ರಾಜಕೀಯ ಎನ್ನುವುದು ವರಿಷ್ಠರಿಂದಲೂ ಇತ್ಯರ್ಥಗೊಳಿಸದ ಬಿಕ್ಕಟ್ಟಾಗಿ ಪರಿಣಮಿಸಿದೆ.

ಇತ್ತೀಚೆಗೆ ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಒಂದು ಬಣದ ಮುಖಂಡರು ತಮ್ಮ ನಾಯಕರ ಭಾವಚಿತ್ರ ಇಲ್ಲ ಎಂಬ ಕಾರಣಕ್ಕೆ ವಾಚಾಮಗೋಚರವಾಗಿ ಹರಿಹಾಯ್ದಿದ್ದಲ್ಲದೇ, ಕಟ್ಟಿದ ಬ್ಯಾನರ್‌ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಇಂಥ ಕ್ಷುಲ್ಲಕ ಕಾರಣಕ್ಕೆ ಉಭಯ ಬಣಗಳ ನಾಯಕರ ಮಧ್ಯ ಅಸಮಾಧಾನ ಭುಗಿಲೆದ್ದು, ಪಕ್ಷದ ಗೌರವ ಬೀದಿಗೆ ಬಿದ್ದಿದೆ.
 
ಭಿನ್ನಮತ ಇಂದು ನಿನ್ನೆಯದಲ್ಲ: ಪಕ್ಷದ ಹಿರಿಯ ಮುಖಂಡ ರಾದ ಎನ್‌.ಎಸ್‌.ಬೋಸರಾಜ್‌, ಬಿ.ವಿ. ನಾಯಕ ವಿರುದ್ಧ ಮತ್ತೂಂದು ಗುಂಪಿನ ನಾಯಕರು ಹಿಂದಿನಿಂದಲೂ ಅಸಮಾಧಾನ ಹೊರಹಾಕುತ್ತಲೇ ಬಂದಿದ್ದಾರೆ. ಮಾಜಿ ಶಾಸಕ ಸೈಯದ್‌ ಯಾಸಿನ್‌ ಖುದ್ದು ಸುದ್ದಿಗೋಷ್ಠಿ ನಡೆಸಿ ಈ ನಾಯಕರ ವಿರುದ್ಧ ಅಸಮಾಧಾನ ಹೊರಹಾಕಿದ್ದಲ್ಲದೇ, ಎಲ್ಲ ಬೆಳವಣಿಗೆಗಳನ್ನು ವರಿಷ್ಠರ ಗಮನಕ್ಕೆ ತರುವುದಾಗಿ ತಿಳಿಸಿದ್ದರು. ಮಾಜಿ ಜಿಲ್ಲಾಧ್ಯಕ್ಷ ಎ.ವಸಂತಕುಮಾರ್‌ ಕೂಡ ಇದೇ ಧಾಟಿಯಲ್ಲಿ ಆರೋಪ ಮಾಡಿದ್ದರು. ಇನ್ನು ಹಲವು ವರ್ಷಗಳಿಂದ ಪಕ್ಷದಲ್ಲಿದ್ದ ರವೀಂದ್ರ ಜಲ್ದಾರ್‌ ಪಕ್ಷ ಬಿಡುವಾಗ ಆರೋಪ ಮಾಡಿಯೇ ಹೊರಬಂದಿದ್ದರು. ಆರ್‌ಡಿಎ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಜಿಂದಪ್ಪ, ನಗರಸಭೆ ಮಾಜಿ ಸದಸ್ಯ ಬಾಬರ್‌ ಹೀಗೆ ಅನೇಕರು ಮತ್ತೂಂದು ಗುಂಪಿನ ವಿರುದ್ಧ ವಾಗ್ಧಾಳಿ ನಡೆಸಿದವರೇ ಆಗಿದ್ದಾರೆ.

ಇದನ್ನೆಲ್ಲ ಗಂಭೀರವಾಗಿ ಪರಿಗಣಿಸದ ಎನ್‌.ಎಸ್‌.ಬೋಸರಾಜ್‌, ಬಿ.ವಿ.ನಾಯಕ ಸೇರಿ ಇತರೆ ನಾಯಕರು ಪಕ್ಷದ ಸೂಚನೆ ಮೇರೆಗೆ ನಡೆದುಕೊಳ್ಳುತ್ತೇವೆ ಎಂದಷ್ಟೇ ಹೇಳಿದ್ದರು. ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರಾ ಕೂಡ ಪಕ್ಷ ವಿರೋಧಿ  ಚಟುವಟಿಕೆ ನಡೆಸುವವರ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದದರು. ಇಷ್ಟೆಲ್ಲ ನಡೆದರೂ ಪಕ್ಷದಲ್ಲಿ ಮಾತ್ರ ಯಾವುದೇ ಬದಲಾವಣೆ ಕಾಣುತ್ತಿಲ್ಲ. ಅದೇ ಅಸಮಾಧಾನ, ಒಳಜಗಳ, ಆರೋಪ ಪ್ರತ್ಯಾರೋಪಗಳು ಸಾಂಗವಾಗಿ ಸಾಗಿವೆ. 

ರಾಜ್ಯಾಧ್ಯಕ್ಷರಿಗೆ ದೂರು?: ಪಕ್ಷದ ಹಿರಿಯ ನಾಯಕರು ಕೈಗೊಂಡಿರುವ ಪ್ರಚಾರ ಯಾತ್ರೆ ಜ.12ರಂದು ನಗರಕ್ಕೆ ಆಗಮಿಸಲಿದೆ. ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ, ಕಾರ್ಯಾಧ್ಯಕ್ಷ ಎಸ್‌. ಆರ್‌.ಪಾಟೀಲ್‌, ಮಲ್ಲಿಕಾರ್ಜುನ ಖರ್ಗೆ, ಕೆ.ಎಚ್‌.ಮುನಿಯಪ್ಪ, ಎಐಸಿಸಿ ಕಾರ್ಯದರ್ಶಿಗಳು ಸೇರಿ ಅನೇಕರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅವರ ಎದುರು ಭಿನ್ನಮತೀಯರು ಅಳಲು ತೋಡಿಕೊಳ್ಳುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಉಭಯ ಬಣಗಳ ಕಾದಾಟ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದರೂ ಅಚ್ಚರಿಯಿಲ್ಲ. ಜಿಲ್ಲೆಗೆ ಬಹಳ ದಿನಗಳ ನಂತರ ಆಗಮಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಪರಿಸ್ಥಿತಿ ತಿಳಿಗೊಳಿಸುವರೋ ಅಥವಾ ಒಂದು ಗುಂಪಿನ ಪರ ಬ್ಯಾಟಿಂಗ್‌ ಮಾಡುವರೋ ಎಂಬ ಕುತೂಹಲ ಮೂಡಿದೆ. ಆದರೆ, ವರಿಷ್ಠರು ಪಕ್ಷ ಸಂಘಟಿಸುತ್ತಿರುವ ಇಂಥ ವೇಳೆ ಜಿಲ್ಲಾ ನಾಯಕರು ಈ ರೀತಿ ಭಿನ್ನಮತ ಜಗಜ್ಜಾಹೀರು ಮಾಡುತ್ತಿರುವುದು ಮಾತ್ರ ವರಿಷ್ಠರಿಗೆ ಅಪಥ್ಯವೇ ಸರಿ.

ಕಾಂಗ್ರೆಸ್‌ ಕಾರ್ಯಾಲಯದಲ್ಲಿ ಈಚೆಗೆ ನಡೆದ ಘಟನೆ ಬಗ್ಗೆ ಈಗಾಗಲೇ ಆ ನಾಯಕರೇ ಬೇಸರ ವ್ಯಕ್ತಪಡಿಸಿದ್ದಾರೆ. ಎಲ್ಲರೂ ಒಗ್ಗೂಡಿ ಯಾತ್ರೆಯನ್ನು ಯಶಸ್ವಿಗೊಳಿಸುವ ಬಗ್ಗೆ ಚರ್ಚಿಸಲಾಗಿದೆ. ಪಕ್ಷದ ವರಿಷ್ಠರು ಕೇಳಿದರೆ ವಸ್ತುಸ್ಥಿತಿ ವಿವರಿಸಲಾಗುವುದು. ಪಕ್ಷದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಸಹಜ. ರಾಮಣ್ಣ ಇರಬಗೇರಾ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ

„ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.