ಗೈರಾದ ಸದಸ್ಯರು, ಭಾಗವಹಿಸದ ಸಾರ್ವಜನಿಕರು


Team Udayavani, Jan 12, 2018, 3:37 PM IST

12-Jan-22.jpg

ಪುತ್ತೂರು: ನಗರಸಭೆ ಆಡಳಿತ 2018- 19ನೇ ಸಾಲಿನ ಆಯವ್ಯಯ ಮಂಡನೆ ಕುರಿತ ಸಾರ್ವಜನಿಕರ ಅಭಿಪ್ರಾಯ ಪಡೆಯುವ ಪೂರ್ವಭಾವಿ ಸಭೆ ಗುರುವಾರ ನಗರಸಭೆ ಅಧ್ಯಕ್ಷೆ ಜಯಂತಿ ಬಲ್ನಾಡು ಅಧ್ಯಕ್ಷತೆಯಲ್ಲಿ ನಡೆಯಿತು. ಆದರೆ ಸಾರ್ವಜನಿಕ ವಲಯ ದಿಂದ ಸಭೆಗೆ ನೀರಸ ಪ್ರತಿಕ್ರಿಯೆ ವ್ಯಕ್ತ ವಾಯಿತು. ಅರ್ಧಕ್ಕಿಂತ ಹೆಚ್ಚು ಸದಸ್ಯರೇ ಸಭೆಯಲ್ಲಿ ಭಾಗವಹಿಸಲಿಲ್ಲ. 

ಸಾರ್ವಜನಿಕರು ಹಾಗೂ ವಿವಿಧ ಸಂಘ -ಸಂಸ್ಥೆಗಳ ಅಭಿಪ್ರಾಯ ಪಡೆದು ಆಯವ್ಯಯ ಮಾಡುವ ಕುರಿತ ಸಭೆಯನ್ನು ಕರೆಯಲಾಗಿದೆ ಎಂದು ವಿಷಯ ಪ್ರಸ್ತಾಪಿಸಿದಾಗ, ನಾಮನಿರ್ದೇಶಿತ ಸದಸ್ಯ ಜೋಕಿಂ ಡಿ’ಸೋಜಾ, ನಗರಸಭಾ ವ್ಯಾಪ್ತಿಯಲ್ಲಿ ಇಷ್ಟೇ ಜನರಿರುವುದೇ? ಎಂದು ಪ್ರಶ್ನಿಸಿದರು. ಸದಸ್ಯ ಎಚ್‌. ಮಹಮ್ಮದಾಲಿ ಮಾತನಾಡಿ, ಸಾರ್ವಜನಿಕರಿಂದ ಅಭಿಪ್ರಾಯ ಪಡೆದು ಬಜೆಟ್‌ ಮಂಡನೆ ಮಾಡುವ ತೀರ್ಮಾನ ಮಾಡಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟನೆ ನೀಡಲಾಗಿದೆ. ಆದರೂ ಸಾರ್ವಜನಿಕರು ಬಂದಿಲ್ಲ ಎಂದರು.

ಸಾರ್ವಜನಿಕರಿಂದ ಅಸಹಕಾರ
ಕಳೆದ ಬಾರಿ ಬೈಲಾ ಸಿದ್ಧಪಡಿಸುವ ಕುರಿತು ಪುತ್ತೂರು ನಗರದ ವರ್ತಕರು, ಸಾರ್ವಜನಿಕರ ಸಭೆ ಕರೆಯಲಾಗಿತ್ತು.
ಅದಕ್ಕಾಗಿ 1,500 ಆಹ್ವಾನ ಪತ್ರಿಕೆಗಳನ್ನು ಹಂಚಲಾಗಿತ್ತು. ಆದರೆ ಬೆರಳೆಣಿಕೆಯ ವರ್ತಕರು, ಸಾರ್ವಜನಿಕರು ಸಭೆಗೆ ಹಾಜರಾಗಿದ್ದರು. ಈ ಸಭೆಯಲ್ಲೂ ಅದೇ ಸ್ಥಿತಿ ನಿರ್ಮಾಣವಾಗಿದೆ. ಸಾರ್ವಜನಿಕರು ಅಸಹಕಾರ ತೋರಿಸುತ್ತಿದ್ದಾರೆ. ಅವರು ತಮ್ಮ ಜವಾಬ್ದಾರಿ ಅರಿಯಬೇಕು ಎಂದರು.

ಸದಸ್ಯ ರಮೇಶ್‌ ರೈ ಮೊಟ್ಟೆತ್ತಡ್ಕ ಮಾತನಾಡಿ, ಸಾರ್ವಜನಿಕರಿಗೆ ನಗರಸಭೆಯಿಂದ ನೀಡುವ ಮಾಹಿತಿ ಅರ್ಥವಾಗುತ್ತಿಲ್ಲ. ಸಭೆ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಸಾರ್ವಜನಿಕರ ಸ್ಪಂದನೆ ಇಲ್ಲವಾಗಿದೆ ಎಂದರು. ಇದಕ್ಕೆ ಸದಸ್ಯ ಸುಜೀಂದ್ರ ಪ್ರಭು ಧ್ವನಿಗೂಡಿಸಿದರು.

ಬಂದವರನ್ನು ಕುಳ್ಳಿರಿಸಿದರು
ಸಭೆಯಲ್ಲಿ ಸಾರ್ವಜನಿಕರು ಇಲ್ಲದ ಹಿನ್ನೆಲೆಯಲ್ಲಿ ತಮ್ಮ ವೈಯುಕ್ತಿಕ ಕೆಲಸಕ್ಕೆಂದು ನಗರಸಭೆ ಕಚೇರಿಗೆ ಆಗಮಿಸಿದವರನ್ನು ಸಭೆಗೆ ಕರೆತಂದು ಕೂರಿಸಲಾಯಿತು. ಉದ್ದೇಶ ತಿಳಿಯದೆ ಅವರಲ್ಲಿ ಗೊಂದಲ ಮೂಡಿತು. ಪೌರಾಯುಕ್ತೆ ರೂಪಾ ಟಿ. ಶೆಟ್ಟಿ ಮಾತನಾಡಿ, ನಗರಸಭೆಯ ಬಜೆಟ್‌ ಮಂಡನೆ ಮಾಡುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಸಂಘ-ಸಂಸ್ಥೆಗಳ ಅಭಿಪ್ರಾಯ ಪಡೆಯುವ ಸಭೆಯನ್ನು ಕರೆಯಲಾಗಿತ್ತು. ಆದರೆ ಸಾರ್ವಜನಿಕರು ಸ್ಪಂದನೆ ನೀಡಿಲ್ಲ. ನೀವೂ ಸಾರ್ವಜನಿಕರು ಆಗಿರುವ ಕಾರಣದಿಂದ ನಿಮ್ಮನ್ನು ಸಭೆಗೆ ಕರೆಯಲಾಗಿದೆ ಎಂದು ಸ್ಪಷ್ಟಪಡಿಸಿದರು. ಆದರೂ ತಮ್ಮ ಕೆಲಸಕ್ಕಾಗಿ ನಗರಸಭೆ ಕಚೇರಿಗೆ ಬಂದಿದ್ದು, ಅರ್ಥವಾಗದ ವಿಷಯದ ಚರ್ಚೆಯಲ್ಲಿ ಪಾಲ್ಗೊಳ್ಳಲು ಆಸಕ್ತಿಯಿಲ್ಲ ಎಂದು ಕೆಲವರು ಗೊಣಗಿದರು.

ರೋಹಿತ್‌ ಎಂಬುವರು ಮಾತನಾಡಿ, ಪಾರ್ಕಿಂಗ್‌ ಶುಲ್ಕ ವಸೂಲಿಯಿಂದ ನಗರ ಸಭೆಗೆ ಎಷ್ಟು ಆದಾಯ ಬರುತ್ತಿದೆ ಎಂಬ ಮಾಹಿತಿ ನೀಡಿ, ಪಾರ್ಕಿಂಗ್‌ ವ್ಯವಸ್ಥೆಯ ವಿವರ ಕೊಡಿ ಎಂದರು. ಪೌರಾಯುಕ್ತೆ ರೂಪಾ ಶೆಟ್ಟಿ ಉತ್ತರಿಸಿ, ಆದಾಯವನ್ನು ಹೇಗೆ ಸಂಗ್ರಹಿಸಬಹುದು? ಮುಂದಿನ ಮುಂಗಡಪತ್ರ ಹೇಗಿರಬೇಕು ಎಂಬ ಕುರಿತು ಅಭಿಪ್ರಾಯ ಸಂಗ್ರಹಿಸುವುದು ಈ ಸಭೆಯ ಉದ್ದೇಶ ಎಂದರು.

ನಗರಸಭೆ ಉಪಾಧ್ಯಕ್ಷ ಬಿ. ವಿಶ್ವನಾಥ ಗೌಡ, ಸದಸ್ಯರಾದ ವಾಣಿ ಶ್ರೀಧರ್‌, ಯಶೋದಾ ಹರೀಶ್‌, ಮುಖೇಶ್‌ ಕೆಮ್ಮಿಂಜೆ, ಶಕ್ತಿ ಸಿನ್ಹಾ, ಜೆಸಿಂತಾ ಮಸ್ಕರೇನಸ್‌, ಉಷಾ ಆಚಾರ್ಯ, ಅನ್ವರ್‌ ಖಾಸಿಂ, ನಾಮ ನಿರ್ದೇಶಿತ ಸದಸ್ಯ ದಿಲೀಪ್‌ ಕುಮಾರ್‌ ಉಪಸ್ಥಿತರಿದ್ದರು.

ಅನುದಾನದ ಮಾಹಿತಿ ನೀಡಿ
ಸಭೆಯಲ್ಲಿ ಭಾಗವಹಿಸಿದ ಪುರಸಭೆ ಮಾಜಿ ಸದಸ್ಯ ಸಂಕಪ್ಪ ಗೌಡ, ಆದಾಯದ ಮೂಲ ಹೇಳುವ ಬದಲು ನೀವು ಕಳೆದ ಬಜೆಟ್‌ನಲ್ಲಿ ಯಾವುದಕ್ಕೆ ಅನುದಾನ ನೀಡಿದ್ದೀರಿ? ಯಾವ ಮೂಲಗಳಿಂದ ಆದಾಯ ಕ್ರೋಡೀಕರಣ ನಡೆದಿದೆ? ಅದನ್ನು ತಿಳಿಸಿ ಎಂದರು. ಉತ್ತರಿಸಿದ ಪೌರಾಯುಕ್ತೆ, ಈ ಸಾಲಿನ ಬಜೆಟ್‌ನಲ್ಲಿ ಆದಾಯದ ಮೂಲಕ್ಕಾಗಿ, ಸಾರ್ವಜನಿಕರ ಸಲಹೆ ಸೂಚನೆ ತಿಳಿದು ಕೊಳ್ಳಲು ಸಭೆ ಕರೆಯಲಾಗಿದೆ ಎಂದರು.

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು

ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು

ಪುತ್ತೂರು: 10 ಶಾಲೆಗಳಿಗೆ ಹೈ ಟೆನ್ಶ ನ್‌ ತಂತಿ ಟೆನ್ಶನ್‌| ಸ್ಥಳಾಂತರಕ್ಕೆ ಪೋಷಕರ ಆಗ್ರಹ

ಪುತ್ತೂರು: 10 ಶಾಲೆಗಳಿಗೆ ಹೈ ಟೆನ್ಶ ನ್‌ ತಂತಿ ಟೆನ್ಶನ್‌| ಸ್ಥಳಾಂತರಕ್ಕೆ ಪೋಷಕರ ಆಗ್ರಹ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.