ಆಳ್ವಾಸ್ ವಿರಾಸತ್: ಸಾಂಸ್ಕೃತಿಕ ಮೆರವಣಿಗೆ
Team Udayavani, Jan 13, 2018, 9:29 AM IST
ಮೂಡಬಿದಿರೆ: ಶುಕ್ರವಾರ ಸಂಜೆ 5.15ರ ಹೊತ್ತು. ವಿದ್ಯಾಗಿರಿಯ ಸನಿಹ ಪುತ್ತಿಗೆ ಗ್ರಾಮದ ವಿವೇಕಾನಂದ ನಗರದಲ್ಲಿ ಆಳ್ವಾಸ್ ವಿರಾಸತ್- 2018ರ 24ನೇ ವರ್ಷದ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವದ ಸಂಭ್ರಮಕ್ಕೆ ಮುನ್ನುಡಿಯಾಗಿ ಕದನಿಗಳು ಮೊಳಗಿದವು, ವೈಭವದ ಸಾಂಸ್ಕೃತಿಕ ಮೆರವಣಿಗೆ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ವೇದಿಕೆಯ ಎದುರಿನ 50 ಸಾವಿರ ಆಸನಗಳ ಗ್ಯಾಲರಿಯ ಮೇಲ್ಗಡೆಯಿಂದ ಹೊರಟಿತು.
ರಂಗೇರಿದ ಮೆರವಣಿಗೆ
ಯಕ್ಷಗಾನದ ಪೂತನಿ ಬೆಂಕಿಯುಗುಳುತ್ತ, ಶಂಖ, ಜಾಗಟೆಯ ಶಂಖದಾಸರ ತಂಡಗಳು, ಕೊಂಬುಗಳು, ಚೆಂಡೆ ಮೇಳದವರು, ಭಾರೀ ಗಾತ್ರದ ಚಿಂಪಾಂಜಿಯೊಂದಿಗೆ ಶೃಂಗಾರಿ ಮೇಳದೊಂದಿಗೆ ವಿವಿಧ ಕಲಾ ತಂಡಗಳು ಮೆರವಣಿಗೆಗೆ ರಂಗು ತುಂಬಿದವು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ| ಎಂ. ಮೋಹನ ಉತ್ಸವ ಉದ್ಘಾಟಕರಾದ ನಾಗಾಲ್ಯಾಂಡ್ ರಾಜ್ಯಪಾಲ ಪಿ.ಬಿ. ಆಚಾರ್ಯ, ಕವಿತಾ ಆಚಾರ್ಯ, ಸಭಾಧ್ಯಕ್ಷರಾದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಸಂಸದ ನಳಿನ್ಕುಮಾರ್ ಕಟೀಲು, ವಿಧಾನಪರಿಷತ್ ಸದಸ್ಯ ಕ್ಯಾ|ಗಣೇಶ್ ಕಾರ್ಣಿಕ್, ಶಾಸಕ ಕೆ. ಅಭಯಚಂದ್ರ, ಮಾಜಿ ಸಚಿವ ಕೆ. ಅಮರನಾಥ ಶೆಟ್ಟಿ, ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷ ಡಾ| ಎಂ. ಎನ್. ರಾಜೇಂದ್ರ ಕುಮಾರ್, ಐಟಿ ಪ್ರ. ಆಯುಕ್ತ ನರೋತ್ತಮ್ ಮಿಶ್ರಾ, ಯೇನೆಪೊಯಾ ಸಂಸ್ಥೆಗಳ ಅಧ್ಯಕ್ಷ ಅಬ್ದುಲ್ಲಾ ಕುಂಞಿ, ಕರ್ಣಾಟಕ ಬ್ಯಾಂಕ್ ಎಂ.ಡಿ., ಸಿಇಒ ಮಹಾಬಲೇಶ್ವರ ಎಂ.ಎಸ್. ಕೆನರಾ ಬ್ಯಾಂಕ್ನ ಎಂ.ಡಿ. ರಾಕೇಶ್ ಶರ್ಮ, ರಾ.ಗಾ. ವಿ.ವಿ. ಕುಲಪತಿ ಡಾ| ಎಂ. ಕೆ. ರಮೇಶ್, ಬರೋಡ ತುಳುಕೂಟದ ಅಧ್ಯಕ್ಷ ಶಶಿಧರ ಶೆಟ್ಟಿ, ಸುರೇಶ್ ಶೆಟ್ಟಿ ಗುರ್ಮೆ, ಸುರೇಶ್ ಭಂಡಾರಿ ಕಡಂದಲೆ, ಹರೀಶ್ ಶೆಟ್ಟಿ ಐಕಳ, ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಂಜುನಾಥ ಭಂಡಾರಿ, ಪ್ರಸನ್ನ ಶೆಟ್ಟಿ, ಎಚ್. ಎಸ್. ಶೆಟ್ಟಿ ಬರಮಾಡಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ