ಹಣಕ್ಕಿಂತ ಆದರ್ಶಕ್ಕೆ ಆದ್ಯತೆ ನೀಡಿ: ನ್ಯಾ| ಪಾಟೀಲ


Team Udayavani, Jan 13, 2018, 11:08 AM IST

gul-4.jpg

ಕಲಬುರಗಿ: ಭವ್ಯ ಭಾರತ ದೇಶದಲ್ಲಿ ಯುವಕರೇ ದೇಶದ ಶಕ್ತಿ. ಹೀಗಾಗಿ ಯುವಕರು ಹಣದ ಕಡೆ ಪ್ರಾಮುಖ್ಯತೆ ನೀಡದೇ ಆದರ್ಶ ಮೌಲ್ಯಗಳತ್ತ ಗಮನ ನೀಡಿ ಆ ಹಾದಿಯಲ್ಲಿ ಮುನ್ನಡೆದು ಬಲಿಷ್ಠ ಭಾರತಕ್ಕೆ ಕೈ ಜೋಡಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ವಿ. ಪಾಟೀಲ ಕರೆ ನೀಡಿದರು.

ನಗರದ ಸರ್ವಜ್ಞ ಹಾಗೂ ಜಸ್ಟಿಸ್‌ ಶಿವರಾಜ ಪಾಟೀಲ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ
ರಾಷ್ಟ್ರೀಯ ಯುವ ದಿನಾಚರಣೆ, ಸ್ವಾಮಿ ವಿವೇಕಾನಂದರ ಹಾಗೂ ನ್ಯಾಯಮೂರ್ತಿ ಡಾ| ಶಿವರಾಜ ಪಾಟೀಲ ಅವರ ಜನ್ಮದಿನದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ದೇಶ ಕಟ್ಟುವಲ್ಲಿ ಯುವಕರ ಪಾತ್ರ ಅಪಾರವಾಗಿದೆ. ನಾವು 1984ರಿಂದ ಈ ದಿನವನ್ನು ರಾಷ್ಟ್ರೀಯ ಯುವ ದಿನವನ್ನಾಗಿ
ಆಚರಿಸುತ್ತಾ ಬಂದಿದ್ದೇವೆ. ವಿದ್ಯಾರ್ಥಿಗಳು ಆಲೋಚನೆ ಆದರ್ಶಗಳ ಕಡೆಗೆ ಹೋಗುವ, ಎಲ್ಲ ಯುವಕರನ್ನು ಪ್ರೇರೇಪಿಸುವ, ದೇಶದ ಉತ್ತಮ ಭವಿಷ್ಯ ಕಟ್ಟುವ, ಗುರಿ ಪೊರೈಸುವ ಬದ್ಧತೆಗೆ ನಾವು ಒಳಪಡಿಸಿಕೊಳ್ಳಬೇಕಾದದ್ದು ಇಂದಿನ ಅಗತ್ಯವಾಗಿದೆ ಎಂದರು.

ಸ್ವಾಮಿ ವಿವೇಕಾನಂದ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿಂದೂ ಸಮಾಜದ ಸಂಸ್ಕೃತಿ, ಸಂಸ್ಕಾರವನ್ನು ಜಗತ್ತಿಗೆ
ತೋರಿಸಿಕೊಟ್ಟವರು. ಅಜ್ಞಾನ, ಅಂಧಕಾರದಲ್ಲಿದ್ದ ಜನರನ್ನು ಬೆಳಕಿನಡೆಗೆ ತರುವುದೇ ನಿಜವಾದ ದೇಶಪ್ರೇಮ. ಯುವಕರು ಹೃದಯವಂತಿಕೆ ಬೆಳೆಸಿಕೊಂಡು ಮಾನಸಿಕವಾಗಿ, ಬೌದ್ಧಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯದರ್ಶಿಯಾಗಿರುವ ನ್ಯಾಯಾ ಧೀಶ ಎಸ್‌.ಆರ್‌. ಮಾಣಿಕ್ಯ ಮಾತನಾಡಿದರು. ದೂರದರ್ಶನ ಚಂದನವಾಹಿನಿಯ ಥಟ್‌ ಅಂತ ಹೇಳಿ ಖ್ಯಾತಿಯ ಡಾ| ನಾ. ಸೋಮೇಶ್ವರ ಮಾತನಾಡಿ, ಹಿಂದಿನ ಕಾಲದಲ್ಲಿ ವಿದ್ಯಾರ್ಥಿಗಳಿಗೆ ಹಿಂದೆ ಗುರು ಇದ್ದರೆ ಮುಂದೆ ಗುರಿ ಇರುತ್ತಿತ್ತು. ಆದರೆ ಇಂದಿನ ವಿದ್ಯಾರ್ಥಿಗಳು ಈ ನಿಟ್ಟಿನಲ್ಲಿ ಸಾಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಸಂಸ್ಥೆಯ ಸಂಸ್ಥಾಪಕ ಪ್ರೊ| ಚನ್ನಾರಡ್ಡಿ ಪಾಟೀಲ, ಸಂಸ್ಥೆಯ ಅಧ್ಯಕ್ಷೆ ಗೀತಾ ಚನ್ನಾರಡ್ಡಿ ಪಾಟೀಲ, ಕಾಲೇಜಿನ ಪ್ರಾಚಾರ್ಯರಾದ ಎಂ.ಸಿ. ಕಿರೇದಳ್ಳಿ, ವಿನುತಾ ಆರ್‌.ಬಿ. ಉಪ ಪ್ರಾಚಾರ್ಯರಾದ ಪ್ರಶಾಂತ ಕುಲಕರ್ಣಿ, ಪ್ರಥ್ವಿರಾಜಗೌಡ, ಕರುಣೇಶ ಬಿ. ಹಿರೇಮಠ ಹಾಗೂ ವಿವಿಧ ಶಾಲೆಯ ಅಧ್ಯಾಪಕರು, ವಿದ್ಯಾರ್ಥಿಗಳು ಹಾಜರಿದ್ದರು. ಡಾ| ಸಂತೋಷಕುಮಾರ ಸ್ವಾಗತಿಸಿ, ನಿರೂಪಿಸಿದರು. ಗುರುರಾಜ ಕುಲಕರ್ಣಿ ವಂದಿಸಿದರು. ಸರ್ವಜ್ಞ ಕಾಲೇಜಿನ ವಿದ್ಯಾರ್ಥಿಗಳು ಸ್ವಾಗತಿಸಿದರು. ನಂತರ ಸರ್ವಜ್ಞ ಚಿಣ್ಣರ ಲೋಕದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.